ಉದ್ಯೋಗ ವಾರ್ತೆ : ʻಫುಡ್ ಕಾರ್ಪೊರೇಷನ್ ಆಫ್ ಇಂಡಿಯಾʼದಲ್ಲಿ 5,000 ಕ್ಕೂ ಹೆಚ್ಚು ʻAGMʼ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ : ಭಾರತೀಯ ಆಹಾರ ನಿಗಮ (FCI) ವಾಚ್ಮನ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಕ್ಲಾಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಹಾರ ನಿಗಮ ಇಲಾಖೆ ಎಫ್ ಸಿಐ ನೇಮಕಾತಿ 2024 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಫ್ಸಿಐ ನೇಮಕಾತಿ 2024 ಅರ್ಜಿ ನಮೂನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಎಫ್ ಸಿಐ ನೇಮಕಾತಿ ಅರ್ಜಿ ನಮೂನೆಯನ್ನು…
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಿನ್ನೆ (ಜ.06) ತಡರಾತ್ರಿ ನಡೆದಿದೆ. ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದು, ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಬಳಿಕ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದನ್ನೂ ಓದಿ: ದುಃಖದ ಮಡುವಿನಲ್ಲೂ ಪತಿಯ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ…
ಬೆಳ್ತಂಗಡಿ: ಯುವತಿ ನಾಪತ್ತೆ..! ದೂರು ದಾಖಲು
ಬೆಳ್ತಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ ವರೆಗೆ…
ಮಂಗಳೂರು: ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ- ಸಹಸವಾರೆ ಸಾವು
ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ…
ಬಂಟ್ವಾಳ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನ- ಇಬ್ಬರು ವಂಚಕರು ಅರೆಸ್ಟ್
ಬಂಟ್ವಾಳ: ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಬಳಿ ಇರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಕುಳ ಕಲ್ಲಂದಡ್ಕ ನಿವಾಸಿ ಅಬ್ದುಲ್ ನಜೀರ್ ಹಾಗೂ ಕಲ್ಲಡ್ಕ ಸಮೀಪದ ಬೋಳಂತೂರು ಬೀರುಕೋಡಿ ನಿವಾಸಿ ಪ್ರಮೋದ್ ಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮಡಂತ್ಯಾರು ಶಾಖಾ ವ್ಯವಸ್ಥಾಪಕಿ ಅಶ್ವಿತಾ ಅವರು ದೂರು…
ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಸೋದರಿಯರು ಆತ್ಮಹತ್ಯೆ..!!
ಇಂದು ಬುಧವಾರ ಮುಂಜಾನೆ ಗಾಜಿಯಾಬಾದ್ನಲ್ಲಿ ಒಂಬತ್ತನೇ ಮಹಡಿಯ ಫ್ಲಾಟ್ನ ಬಾಲ್ಕನಿಯಿಂದ ಹಾರಿ ಮೂವರು ಅಪ್ರಾಪ್ತ ಸಹೋದರಿಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟೀಲಾ ಮೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ ಸಿಟಿಯ ಟವರ್ನಲ್ಲಿರುವ ಒಂಬತ್ತನೇ ಮಹಡಿಯ ಅಪಾರ್ಟ್ಮೆಂಟ್ನ ಬಾಲ್ಕನಿಯಿಂದ ಮೂವರು ಸೋದರಿಯರು ಹಾರಿರುವ ಬಗ್ಗೆ ನಸುಕಿನ ಜಾವ 2.15 ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಶಾಲಿಮಾರ್ ಗಾರ್ಡನ್) ಅತುಲ್ ಕುಮಾರ್ ಸಿಂಗ್ ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಚೇತನ್ ಕುಮಾರ್…
ಅತಿದೊಡ್ಡ ಲವ್ ಜಿಹಾದ್ ದಂಧೆ ಬಹಿರಂಗ : 300 ಯುವತಿಯರ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್.!
ದೇಶದಲ್ಲಿ ಅತಿದೊಡ್ಡ ಲವ್ ಜಿಹಾದ್ ದಂಧೆಯೊಂದು ಬಹಿರಂಗಗೊಂಡಿದ್ದು, 300 ಯುವತಿಯರ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶದ ಬಸ್ತಿಯಲ್ಲಿ ಪ್ರೀತಿ, ವಿಶ್ವಾಸ ಮತ್ತು ವಿವಾಹದ ಚಿನ್ನದ ಕನಸುಗಳನ್ನು ಭರವಸೆ ನೀಡುವ ಮೂಲಕ ಪಿತೂರಿ ನಡೆಸಲಾಗಿದ್ದು, ಇದು ಪೊಲೀಸರು ಮತ್ತು ಸರ್ಕಾರವನ್ನು ದಿಗ್ಭ್ರಮೆಗೊಳಿಸಿದೆ. ಬಸ್ತಿಯ ದುಷ್ಟ ಯುವಕ ಮತ್ತು ಅವನ ಗ್ಯಾಂಗ್ 300 ಕ್ಕೂ ಹೆಚ್ಚು ಹುಡುಗಿಯರನ್ನು ಪ್ರೇಮ ಬಲೆಗೆ ಬೀಳಿಸಿ, ನಂತರ ಅವರ ಆಕ್ಷೇಪಾರ್ಹ ವೀಡಿಯೊಗಳನ್ನು ಮಾಡಿ, ಅವರನ್ನು ಬ್ಲ್ಯಾಕ್ಮೇಲ್…
ಫೆ.7ರಂದು ಮಂಗಳೂರಿನ ಅತ್ತಾವರದಲ್ಲಿ ಹಿಂದು ಸಂಗಮ
ಮಂಗಳೂರು: ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಘೋಷವಾಕ್ಯದಡಿ ಹಿಂದೂ ಸಂಗಮ ಆಯೋಜನ ಸಮಿತಿ ಕದ್ರಿ, ಅರ್ಜುನ ವಸತಿ ಅತ್ತಾವರ ವತಿಯಿಂದ ಫೆ.7ರಂದು ಅತ್ತಾವರದ ಶ್ರೀ ಚಕ್ರಪಾಣಿ ಗೋಪಿನಾಥ ಕ್ಷೇತ್ರದಲ್ಲಿ ಬೃಹತ್ ಹಿಂದು ಸಂಗಮ ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮಕ್ಕೆ ಮುನ್ನ ಸಂಜೆ 5 ಗಂಟೆಗೆ ಅತ್ತಾವರಕಟ್ಟೆಯಿಂದ ವೈಭವದ ಶೋಭಾ ಯಾತ್ರೆ ನಡೆಯಲಿದೆ. 5:30ಕ್ಕೆ ಶ್ರೀಚಕ್ರಪಾಣಿ ಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಸುಳ್ಯ: ಯುವತಿಯ ಮೇಲೆ ಪತಿ ಸೇರಿ ಮೂವರಿಂದ ಹಲ್ಲೆ..!! ಪ್ರಕರಣ ದಾಖಲು
ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ ಮಾವರು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಸಾಹಿತ್ಯಾ ರೈ ಅವರ ಪತಿ ಯಶಸ್ವಿ ರೈ (30) ಹಾಗೂ ಮಾವ ನಿತ್ಯಾನಂದ ರೈ (58) ಇಬ್ಬರೂ ಸೇರಿ ಮುಖಕ್ಕೆ ಕಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸಾಹಿತ್ಯಾ ರೈ ಅವರು ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ತಮ್ಮ ಪೋಷಕರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ….
ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು
ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ಪೊಲೀಸರ ತನಿಖೆಯಲ್ಲಿ ದ್ವೇಷ ಭಾಷಣದ ಆರೋಪದಡಿ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರ ಹಾಜರಾತಿ ಇಲ್ಲದ ಕಾರಣ, ಬೆಳ್ತಂಗಡಿ ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿತ್ತು. ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ಬಂಟ್ವಾಳ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿ, ತಮ್ಮ ಪರವಾಗಿ ನ್ಯಾಯವಾದಿ ಸಿರಾಜುದ್ದೀನ್…
ನಿಫಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ನಿಪಾ ವೈರಸ್ ಮತ್ತೆ ಕಾಣಿಸಿಕೊಂಡಿರುವ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಸಂಪೂರ್ಣ ಕಟ್ಟೆಚ್ಚರಕ್ಕೆ ಮುಂದಾಗಿದೆ. ವೈರಸ್ ರಾಜ್ಯಕ್ಕೆ ಪ್ರವೇಶಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಶಂಕಿತ ಪ್ರಕರಣಗಳ ಮೇಲೆ ನಿಕಟ ನಿಗಾವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಸೋಂಕಿತ ಬಾವಲಿಗಳು ಭಾಗಶಃ ತಿಂದ ಹಣ್ಣುಗಳನ್ನು ಸೇವಿಸುವುದು ಅಥವಾ ಹಂದಿಮಾಂಸ ಸೇವನೆಯಿಂದ ನಿಪಾ ವೈರಸ್ ಮನುಷ್ಯರಿಗೆ ಹರಡುವ ಸಾಧ್ಯತೆ ಇದೆ. ಕೆಲವು ಸಂದರ್ಭಗಳಲ್ಲಿ ಮನುಷ್ಯರಿಂದ ಮನುಷ್ಯರಿಗೆ…

