ಉದ್ಯೋಗ ವಾರ್ತೆ : ʻಫುಡ್ ಕಾರ್ಪೊರೇಷನ್ ಆಫ್ ಇಂಡಿಯಾʼದಲ್ಲಿ 5,000 ಕ್ಕೂ ಹೆಚ್ಚು ʻAGMʼ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ : ಭಾರತೀಯ ಆಹಾರ ನಿಗಮ (FCI) ವಾಚ್ಮನ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಕ್ಲಾಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಹಾರ ನಿಗಮ ಇಲಾಖೆ ಎಫ್ ಸಿಐ ನೇಮಕಾತಿ 2024 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಫ್ಸಿಐ ನೇಮಕಾತಿ 2024 ಅರ್ಜಿ ನಮೂನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಎಫ್ ಸಿಐ ನೇಮಕಾತಿ ಅರ್ಜಿ ನಮೂನೆಯನ್ನು…
ಕಾರ್ಕಳ: ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ..!! ಒರ್ವ ಅರೆಸ್ಟ್ , ಇಬ್ಬರು ಪರಾರಿ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ. ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ…
ಮಂಗಳೂರು: ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿ ನಾಪತ್ತೆ
ಮಂಗಳೂರು: ನಗರದ ಮಾಲ್ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್…
ದೆಹಲಿ ಸ್ಫೋಟಕ್ಕೂ ತುಮಕೂರಿಗೂ ನಂಟು? ತುಮಕೂರಿನಲ್ಲಿ ಶಂಕಿತನ ವಿಚಾರಣೆ ನಡೆಸಿದ ಪೊಲೀಸರು
ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿಬಿಳಿಸಿದ್ದು,ಈ ಒಂದು ಪ್ರಕರಣದ ಬಳಿಕ ರಾಜ್ಯಕ್ಕೂ ರಾಷ್ಟ್ರ ರಾಜಧಾನಿ ದೆಹಲಿಗೂ ನಂಟು ಇದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ತುಮಕೂರಿನಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದು ಉಚ್ಚಾರಣೆ ಮಾಡಿ ಕಳುಹಿಸಿರುವ ಘಟನೆ ವರದಿಯಾಗಿದೆ. ಹೌದು ದೆಹಲಿ ಸ್ಫೋಟದ ಬಳಕೆ ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಉಗ್ರ ಸಂಘಟನೆ ಜೊತೆಗೆ ಈ ಹಿಂದೆ ಈ ವ್ಯಕ್ತಿ ಉಗ್ರ ಸಂಘಟನೆಯ ಸಂಪರ್ಕದಲ್ಲಿ ಇದ್ದ ಎನ್ನಲಾಗುತ್ತಿದ್ದು ಆ ಕಾರಣ ಹಿನ್ನೆಲೆ…
ದೆಹಲಿ ಕಾರು ಸ್ಪೋಟ ಕೇಸ್ : `DNA’ ಪರೀಕ್ಷೆಯಲ್ಲಿ ಕಾರಿನಲ್ಲಿದ್ದ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ಧೃಡ.!
ನವದೆಹಲಿ : ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ವಿನಾಶಕಾರಿ ಸ್ಫೋಟವನ್ನು ನಡೆಸಿದ ವ್ಯಕ್ತಿ ಕಾಶ್ಮೀರದ ವೈದ್ಯಕೀಯ ವೃತ್ತಿಪರ ಡಾ. ಉಮರ್ ಉನ್ ನಬಿ ಎಂದು ಡಿಎನ್ಎ ಪರೀಕ್ಷೆಯು ದೃಢಪಡಿಸಿದೆ. ನವೆಂಬರ್ 10 ರಂದು ನಡೆದ ಸ್ಫೋಟವು ಐತಿಹಾಸಿಕ ಸ್ಮಾರಕದ ಹೊರಗಿನ ಜನನಿಬಿಡ ಬೀದಿಯಲ್ಲಿ ಸಂಭವಿಸಿ, ಕನಿಷ್ಠ 12 ಜನರನ್ನು ಬಲಿ ತೆಗೆದುಕೊಂಡಿತು ಮತ್ತು ಡಜನ್ಗಟ್ಟಲೆ ಜನರನ್ನು ಗಾಯಗೊಳಿಸಿತು. ಸ್ಫೋಟದ ಬಲವು ಅಂಗಡಿ ಮುಂಗಟ್ಟುಗಳನ್ನು ಛಿದ್ರಗೊಳಿಸಿತು ಮತ್ತು ರಾಜಧಾನಿಯ ಅತ್ಯಂತ ಜನನಿಬಿಡ ಭಾಗಗಳಲ್ಲಿ ಒಂದಾದ ಹಳೆಯ ದೆಹಲಿ…
ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ!!
ಉಪ್ಪಿನಂಗಡಿ: 10ನೇ ತರಗತಿವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನವೆಂಬರ್ 4ರಂದು ತಲೆನೋವು ಇದೆ ಎಂದು ಹೇಳಿ ಶಾಲೆಗೆ ತೆರಳದೇ ಮನೆಯಲ್ಲಿಯೇ ಇದ್ದಾಳೆ. ಈ ಸಂದರ್ಭಮನೆಯಲ್ಲಿ ಇದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.ವಿಷಯ ತಿಳಿದ ತಕ್ಷಣ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಗೀತಾ ಮನೆಗೆ…
ನವೆಂಬರ್ 16ರಂದು ಕಟೀಲು ಏಳನೆಯ ಮೇಳದ ಪಾದಾರ್ಪಣೆ : ವೈಭವದ ಮೆರವಣಿಗೆಗೆ ಸಜ್ಜು
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಶ್ರಯದಲ್ಲಿನ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ 16ರಂದು ನಡೆಯಲಿದೆ ಎಂದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ ತಿಳಿಸಿದ್ದಾರೆ. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನವೆಂಬರ್ 15ರಂದು ಮಧ್ಯಾಹ್ನ 3 ಗಂಟೆಗೆ ಬಜಪೆಯಿಂದ ಎಂಟು ಸ್ತಬ್ಧಚಿತ್ರಗಳಲ್ಲಿ ದೇವರ ಪರಿಕರಗಳು, ಕಿರೀಟಗಳು, ತೊಟ್ಟಿಲು, ಚಿನ್ನ-ಬೆಳ್ಳಿಯ ಆಯುಧಗಳನ್ನು ವೈಭವದ ಮೆರವಣಿಗೆಯಲ್ಲಿ ಕಟೀಲಿಗೆ ತರಲಾಗುವುದಾಗಿ ಹೇಳಿದರು. ಈ ಪರಿಕರಗಳ ಮೌಲ್ಯ ಸುಮಾರು ಒಂದು…
ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ. ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ‘ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿರುವುದು 150 ತಾಸು…
ದೆಹಲಿ ಸ್ಫೋಟದ ಹಿಂದೆ ಡಾ. ಮುಝಮ್ಮಿಲ್ ಕೈವಾಡ? 15 ದಿನ ರಜೆ ಹಾಕಿ ಕಿರಿಯರನ್ನು ಬ್ರೈನ್ ವಾಶ್ ಮಾಡಿದ್ದ ವೈದ್ಯೆ!
ಕಳೆದ ಮೂರು ವರ್ಷಗಳಿಂದ ಫರಿದಾಬಾದ್ ನ ಧೌಜ್ ನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ ಮುಜಮ್ಮಿಲ್ ಶಕೀಲ್ ನ್ನು 12 ದಿನಗಳ ಹಿಂದೆ ಬಂಧಿಸಲಾಗಿತ್ತು. ಇತ್ತೀಚೆಗಷ್ಟೇ 15 ದಿನಗಳ ರಜೆಯಲ್ಲಿ ಪುಲ್ವಾಮಾಕ್ಕೆ ಭೇಟಿ ನೀಡಿದ್ದ. ತನಿಖಾಧಿಕಾರಿಗಳ ಪ್ರಕಾರ, ಡಾ.ಮುಜಮ್ಮಿಲ್ ತಮ್ಮ ಪ್ರವಾಸದ ಸಮಯದಲ್ಲಿ ಹಲವಾರು ಪರಿಚಯಸ್ಥರನ್ನು ಭೇಟಿಯಾದ ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿದ ಎಂದು ಆರೋಪಿಸಲಾಗಿದೆ. Jagran.com ವರದಿಯ ಪ್ರಕಾರ, ಡಾ.ಮುಜಮ್ಮಿಲ್ ಫತೇಪುರ ಟಗಾದಲ್ಲಿ ಮತ್ತೊಂದು ಮನೆಯನ್ನು ಬಾಡಿಗೆಗೆ ಪಡೆಯಲು ಯೋಜಿಸುತ್ತಿದ್ದ ಮತ್ತು ಪ್ರದೇಶದ ಇಮಾಮ್ ಸೇರಿದಂತೆ…
ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳದ ಸಾನ್ವಿ.ಕೆ ಪ್ರಥಮ
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಪ್ರಥಮ ಸ್ಥಾನದೊಂದಿಗೆ ಸ್ವರ್ಣಪದಕ ಮತ್ತು ಪ್ರಮಾಣ ಪತ್ರ ಪಡೆದಿರುತ್ತಾರೆ. ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ರಾಜ್ಯಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ ಹಾಗೂ ಅಶೋಕ್…
ಬಂಟ್ವಾಳ ಕುಲಾಲ ಸುಧಾರಕ ಸಂಘ ಹೊಸಳ್ಳಿ ಇದರ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಯನ್ ಅನಿಲ್ ದಾಸ್ ರವರಿಗೆ ಸನ್ಮಾನ
ಬಂಟ್ವಾಳ ಕುಲಾಲ ಸುಧಾರಕ ಸಂಘ ಹೊಸಳ್ಳಿ ಇದರ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಯನ್ ಅನಿಲ್ ದಾಸ್ ರವರಿಗೆ ಸನ್ಮಾನಿಸಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘ ಹೊಸಳ್ಳಿ ಇದರ ನಿಕಟ ಪೂರ್ವಾಧ್ಯಕ್ಷರಾದ ಮಚೇಂದ್ರನಾಥ ಸಾಲಿಯಾನ್ , ರಾಧಾಕೃಷ್ಣ ಬಂಟ್ವಾಳ ,ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲ್ ,ಪದಾಧಿಕಾರಿಗಳಾದ ಸತೀಶ್ ಸಂಪಾಜೆ , ಸೋಮನಾಥ ಸಾಲ್ಯಾನ್ , ಮಾಧವ ಬಿ ಸಿ ರೋಡ್ , ಜಯಂತ್ ಅಗ್ರಬೈಲ್ , ಪ್ರೇಮ ಜನಾರ್ಧನ , ಆಶಾ ಗಿರಿಧರ್ , ಮೀನಾಕ್ಷಿ…

