ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ..!

0 0
Read Time:1 Minute, 35 Second

ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ.

ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ.

ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ವಾಹನವನ್ನು ಅಡ್ಡಗಟ್ಟುತ್ತಿದ್ದಂತೆ ಚಾಲಕ ಇಳಿದು ಓಡಿಹೋಗಿದ್ದಾನೆ. ಹಿಂದು ಕಾರ್ಯಕರ್ತರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅವರು ಬಂದು ಗೋವುಗಳು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಏಸ್‌ ಟೆಂಪೊದಲ್ಲಿ 15ರಷ್ಟು ಗೋವುಗಳನ್ನು ತರಕಾರಿಗಳ ಜೊತೆಗೆ ಅತ್ಯಂತ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗಲಾಗುತ್ತಿತ್ತು. ಬೆಳ್ತಂಗಡಿ ಸುತ್ತಮುತ್ತಲಿಂದಲೇ ಈ ಗೋವುಗಳನ್ನು ತಂದಿದ್ದರು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *