
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.



ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧಮ೯ದಶಿ೯ ಡಾ. ರವಿ.ಎನ್ ದೀಪ ಪ್ರಜ್ವಲಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸಲಿದ್ದಾರೆ. ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ್ ಒಡೆಯರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಅಮೋಘ ಮಾಡಿದ, ಗ್ರಾಮೀಣ ಭಾಗದಲ್ಲಿ ಗುರುಕುಲ ಪದ್ದತಿ ಶಿಕ್ಷಣ ಒದಗಿಸಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಛಾಪನ್ನು ಬರೆದ, ಈ ಎಲ್ಲಾ ಸಾಧನೆಗೈದ ಗಿರೀಶ್ ಕೆ.ಹೆಚ್ ವೇಣೂರು ಅವರಿಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ “ಶಿಕ್ಷಣ ಸಿಂಧೂರ” ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.


ಶ್ರೀ ಗಿರೀಶ್ ಕೆ.ಹೆಚ್ ವೇಣೂರು ಅವರ ಕಿರು ಪರಿಚಯ

ಗಿರೀಶ್ ಕೆ.ಹೆಚ್ ಅವರು ವೇಣೂರಿನ ನಿಟ್ಟಡೆ ಗ್ರಾಮದಲ್ಲಿರುವ ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಸ್ಥಾಪಕರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸೇವೆಗಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇವರ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಸರ್ಕಾರವು ಶಿಕ್ಷಣಬೀಷ್ಮ ಪ್ರಶಸ್ತಿ ನೀಡಿ ಗೌರವಿಸಿದೆ. ಇವರಿಗೆ ಈ ಬಾರಿಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಯ ಒಕ್ಕೂಟದ ಕುಂಭ ಕಲಾವಳಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ದಲ್ಲಿ “ಶಿಕ್ಷಣ ಸಿಂಧೂರ” ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದೆ.

