ಬಂಟ್ವಾಳ:‌ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನ- ಇಬ್ಬರು ವಂಚಕರು ಅರೆಸ್ಟ್

1 0
Read Time:1 Minute, 35 Second

ಬಂಟ್ವಾಳ: ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ.

ಮಡಂತ್ಯಾರು ಬಳಿ ಇರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಕುಳ ಕಲ್ಲಂದಡ್ಕ ನಿವಾಸಿ ಅಬ್ದುಲ್ ನಜೀರ್ ಹಾಗೂ ಕಲ್ಲಡ್ಕ ಸಮೀಪದ ಬೋಳಂತೂರು ಬೀರುಕೋಡಿ ನಿವಾಸಿ ಪ್ರಮೋದ್ ಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮಡಂತ್ಯಾರು ಶಾಖಾ ವ್ಯವಸ್ಥಾಪಕಿ ಅಶ್ವಿತಾ ಅವರು ದೂರು ನೀಡಿದ್ದು, ಫೆ. 2 ರಂದು ಬೆಳಿಗ್ಗೆ ಇಬ್ಬರು ಗ್ರಾಹಕರು ಬ್ಯಾಂಕ್ ಗೆ ಬಂದು ಚಿನ್ನ ಅಡವಿಡಲು ಇದೆ ಎಂದು ತಿಳಿಸಿ ಮೂರು ಚಿನ್ನದ ಸರಗಳನ್ನು ನೀಡಿದ್ದಾರೆ. ಶಾಖಾ ವ್ಯವಸ್ಥಾಪಕರು ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿದೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಕೇರಳದ ವಿದ್ಯಾರ್ಥಿಗಳಿಂದ ಪಟಾಕಿ ಸಿಡಿಸಿ ಹುಚ್ಚಾಟ; ವೀಡಿಯೋ ವೈರಲ್‌ ಹಾಗಾಗಿ ನಕಲಿ ಚಿನ್ನವನ್ನು ಅಡವಿಡಲು ಬಂದ ಆರೋಪಿಗಳ ಬಗ್ಗೆ ಪುಂಜಾಲಕಟ್ಟೆ ಪೋಲೀಸರಿಗೆ ಮಾಹಿತಿ ನೀಡಿ ಆರೋಪಿಗಳನ್ನು ಅವರ ವಶಕ್ಕೆ ಒಪ್ಪಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *