ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ

0 0
Read Time:1 Minute, 41 Second

ಮಂಗಳೂರು: ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು.

ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ ಬಂತು. ಬಳಿಕ ಬಿಜೆಪಿ ಕಚೇರಿ ಮುಂಭಾಗದಿಂದ ಅರ್ಧ ಕಿ.ಮೀ. ದೂರದ ಪೆಟ್ರೋಲ್ ಬಂಕ್ ಗೆ ಸ್ಕೂಟರ್ ಗಳನ್ನು ತಳ್ಳಿಕೊಂಡು, ಕಾರನ್ನು ಹಗ್ಗ ಕಟ್ಟಿ ಎಳೆದುಕೊಂಡು ತರಲಾಯಿತು. ಅಲ್ಲಿ ಭಿಕ್ಷೆಯೆತ್ತಿ ಹಣ ಸಂಗ್ರಹಿಸಲಾಯಿತು‌. ಬಳಿಕ ಗೆರಟೆಯಲ್ಲಿ, ಚೊಂಬುವಿನಲ್ಲಿ ಪೆಟ್ರೋಲ್ ಹಾಕಿಸಿ ಕಾರು, ಸ್ಕೂಟರ್ ಗೆ ತುಂಬಿಸಲಾಯಿತು. ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *