ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ…!!

0 0
Read Time:1 Minute, 3 Second

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ.

ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ 1 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ ಶಿಕ್ಷೆಗೊಳಗಾದವನು. ಈತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಕರೆ ಮಾಡಿದ್ದ. 

ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರಕಾರಿ ಅಭಿಯೋಜಕ ಮೋಹನ್‌ ಕುಮಾರ್ ಬಿ. ಹಾಗೂ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಸರಕಾರದ ಪರ ವಾದ ಮಂಡಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *