ಗುರುಪುರ ಫಲ್ಗುಣಿ ನದಿಗೆ ಹಾರಿದ ರಮೇಶ್ ಕುಲಾಲ್ ರವರ ಮೃತದೇಹ ಪತ್ತೆ…!

0 0
Read Time:1 Minute, 23 Second

ಮಂಗಳೂರು: ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ನಿವಾಸಿ ರಮೇಶ್ ಕುಲಾಲ್ ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಇಂದು ಮೃತದೇಹ ಪತ್ತೆಯಾಗಿದೆ.

ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ ಗುರುಪುರ ಸೇತುವೆ ಬಳಿ ಆಗಮಿಸಿ ಸೇತುವೆ ಮೇಲೆ ಮೊಬೈಲ್ ಮತ್ತು ಚಪ್ಪಲಿಯನ್ನಿಟ್ಟು ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ನಡೆಸಿದರು.

ರಮೇಶ್ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಮಂಗಳೂರಿನ ಇನ್‌ಲ್ಯಾಂಡ್ ಕಂಪೆನಿಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ರಮೇಶ್‌ಗಾಗಿ ಫಲ್ಗುಣಿ ನದಿಯಲ್ಲಿ ಕಾರ್ಯಾಚರಣೆ ನಡೆಸಿ ಎರಡು ದಿನಗಳ ಬಳಿಕ ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಮೃತದೇಹವನ್ನು ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಪತ್ತೆಹಚ್ಚಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *