ಉಡುಪಿ: ಬಂಧನದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ ಸೂಡ ಉಚ್ಚಾಟನೆ..!

0 0
Read Time:1 Minute, 35 Second

ಉಡುಪಿ: ಹಿಂದೂ ಪತಿತೋ ಭವೇತ್ ಎನ್ನುವ ಘೋಷಣೆ ಹೊರಟ ಉಡುಪಿಯ ಪಾವನ ಮಣ್ಣಿನಲ್ಲಿ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ದಲಿತ ಬಂಧುಗಳ ಬಗ್ಗೆ ಮತ್ತು ರಾಷ್ಟ್ರಪುರುಷ ಅಂಬೇಡ್ಕರ್ ಬಗ್ಗೆ ಅವಶಬ್ದಗಳನ್ನು ನುಡಿದ ಉಮೇಶ್ ಸೂಡರ ಸಮಾಜ ಒಡೆಯುವ ಮತ್ತು ರಾಷ್ಟ್ರ ನಾಯಕರ ಬಗ್ಗೆ ಅಡಿರುವ ಮಾತುಗಳನ್ನು ಹಿಂದು ಜಾಗರಣ ವೇದಿಕೆ ಖಂಡಿಸುತ್ತದೆ. ಮತ್ತು ತಕ್ಷಣದಿಂದ ಹಿಂದು ಜಾಗರಣ ವೇದಿಕೆಯ ಎಲ್ಲಾ ಜವಾಬ್ದಾರಿಯಿಂದ ಉಮೇಶ್ ಸೂಡರನ್ನು ಮುಕ್ತಗೊಳಿಸಲಾಗಿದೆ. ಅವರ ಮಾತುಗಳಿಗೆ ಸಂಪೂರ್ಣವಾಗಿ ಅವರೇ ಹೊಣೆಯಾಗಿದ್ದು ಅವರ ಮಾತುಗಳಿಗೂ ಮತ್ತು ಹಿಂದು ಜಾಗರಣ ವೇದಿಕೆಯ ನಿಲುವಿಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ಜಾಗೃತ, ಸಂಘಟಿತ ಹಿಂದೂ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಕಳೆದ 35-40 ವರ್ಷಗಳಿಂದ ಕೆಲಸ ಮಾಡುತ್ತಿರುವ ಹಿಂದು ಜಾಗರಣ ವೇದಿಕೆಯಲ್ಲಿ ಎಲ್ಲ ಜಾತಿ, ಸಮುದಾಯದ ಹಿಂದೂಗಳು ಒಂದಾಗಿ ಯುವಕರಲ್ಲಿ ರಾಷ್ಟ್ರಭಕ್ತಿ, ಧರ್ಮನಿಷ್ಠ ಬೆಳಸುವ ಕಾರ್ಯದಲ್ಲಿ ನಿರತರಾಗಿದ್ದು ಇಂತಹ ಅಪಸವ್ಯಗಳನ್ನು ಎಂದಿಗೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ ಎಂದು ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕ ಶಂಕರ್ ಕೋಟ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
100 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *