ಮಂಗಳೂರು: ಕಾರು ಚಾಲಕನಿಗೆ ಬೈಕ್ ಸವಾರ ನಿಂದ ಹಲ್ಲೆ..!

0 0
Read Time:1 Minute, 20 Second

ಮಂಗಳೂರು: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್ ಸವಾರ ಕಾರು ಚಾಲಕನಿಗೆ ಲೋಹದ ಪಂಚ್‌ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ ಕದ್ರಿ ಶಿವಬಾಗ್‌ನಲ್ಲಿ ನಡೆದಿದೆ. ಬೆಳಗ್ಗೆ ಸುಮಾರು 10.30ರಿಂದ 10.45ರ ಅವಧಿಯಲ್ಲಿ ಕದ್ರಿ ಶಿವಬಾಗ್‌ನ ಪೆಟ್ರೋಲ್ ಬಂಕ್ ಬಳಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು.

ಆಗ ರೊಚ್ಚಿಗೆದ್ದ ಬೈಕ್ ಸವಾರ ತನ್ನ ಬಳಿ ಇದ್ದ ಲೋಹದ ಪಂಚ್‌ನಿಂದ ಕಾರು ಚಾಲಕನ ಮುಖಕ್ಕೆ ಗುದ್ದಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಕ್ರೌರ್ಯ ಮೆರೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತತ್‌ಕ್ಷಣ ಸ್ಥಳೀಯರು ಆತನನ್ನು ಹಿಡಿದು 112 ಪೊಲೀಸ್ ವಾಹನಕ್ಕೆ ಕರೆ ಮಾಡಿದ್ದರು. ಪೊಲೀಸರು ಯುವಕನನ್ನು ವಶಕ್ಕೆ ಪಡೆದರು. ಆತನ ಬಳಿ ಆಯುಧವೂ ಇತ್ತು. ಬೇರೆ ಕೃತ್ಯ ಮಾಡಲು ಸಂಚು ನಡೆಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ದಾಖಲಾದ ಬಳಿಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *