“ಪತ್ತನಾಜೆ” ತುಳುನಾಡಿನ ಉತ್ಸವ, ಜಾತ್ರೆ, ನೇಮ, ಯಕ್ಷಗಾನಕ್ಕೆ ಸಾಂಪ್ರದಾಯಿಕ ತೆರೆ

0 0
Read Time:2 Minute, 41 Second

ಮಂಗಳೂರು: ತುಳುವರು ಮೂಲತಃ ಕೃಷಿಕರು. ಆದ್ದರಿಂದ ತುಳುನಾಡಿನಲ್ಲಿ ಎಲ್ಲಾ ಆಚರಣೆ, ಆರಾಧನೆಗಳಲ್ಲಿ ಕೃಷಿ ಬದುಕು ಒಂದಿಲ್ಲೊಂದು ರೀತಿ ತಳುಕಿ ಹಾಕಿಕೊಂಡಿರುತ್ತದೆ. ಇದಕ್ಕೆ “ಪತ್ತನಾಜೆ”ಯೂ ಹೊರತಲ್ಲ.

ಪತ್ತನಾಜೆ ಎಂದರೆ ಪ್ರಸ್ತುತ ಸಾಲಿನ ಜಾತ್ರೆ, ಅಂಕ, ಆಯನ, ನೇಮ, ಯಕ್ಷಗಾನಕ್ಕೆ ಸಾಂಪ್ರದಾಯಿಕ ತೆರೆಬೀಳುವ ದಿನವೆಂದೇ ನಂಬಿಕೆ ತುಳುವರಲ್ಲಿದೆ. ಇಂದಿಗೂ ಅದೇ ನಿಯಮ ಚಾಲ್ತಿಯಲ್ಲಿದೆ. ವೃಷಭ ಸಂಕ್ರಮಣ ಬಳಿಕದ ಹತ್ತನೇ ದಿನವನ್ನೇ ಪತ್ತನಾಜೆ ಎನ್ನಲಾಗುತ್ತದೆ. ಸಾಮಾನ್ಯವಾಗಿ ಪತ್ತನಾಜೆ ಪ್ರತೀವರ್ಷ ಮೇ 24 ಅಥವಾ 25ರಂದು ಬರುತ್ತದೆ‌. ಇಂದಿನ ದಿನವೇ “ಪತ್ತನಾಜೆ”. ಕೃಷಿಕರಾದ ತುಳುವರು ಭತ್ತದ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಪತ್ತನಾಜೆಯ ಗಡುವು ಇಟ್ಟುಕೊಂಡಿದ್ದಾರೆ. ಇದು ಋತುಪರಿವರ್ತನೆಯ ನಿರ್ದಿಷ್ಟ ಗಡುವಿನ ದಿನ. ಬೇಸಿಗೆ ಹಾಗೂ ಮಳೆಗಾಲದ ಸಂಧಿಕಾಲವೂ ಹೌದು‌. ಆದ್ದರಿಂದಲೇ ಈ ದಿನದ ಬಳಿಕ ತುಳುವರು ತಮ್ಮೆಲ್ಲಾ ಮನೋರಂಜನೆ, ಉತ್ಸವ, ಆಚರಣಾದಿಗಳಿಗೆ ಕೊಂಚ ವಿರಾಮ ನೀಡಿ ಕೃಷಿಯತ್ತ ಮುಖಮಾಡುತ್ತಾರೆ.

ಆದ್ದರಿಂದ ಪತ್ತನಾಜೆ ಬಳಿಕ ದೈವಗಳು ಘಟ್ಟ ಹತ್ತುತ್ತವೆ. ಪತ್ತನಾಜೆ ಬಂತು ಇಳಿದ ಯಕ್ಷಗಾನ ನಿಂತಿತು ಎಂಬಂಥಹ ನಂಬಿಕೆಗಳನ್ನು ರೂಢಿಸಿಕೊಂಡು ಬಂದಿದ್ದಾರೆ. ಈ ಮೂಲಕ ದೈವಗಳಿಗೆ ನಡೆಯುವ ನೇಮ, ಅಗೇಲು, ತಂಬಿಲ ಮುಕ್ತಾಯಗೊಂಡರೆ, ಯಕ್ಷಗಾನ ಮೇಳಗಳೂ ತಿರುಗಾಟ ಸ್ಥಗಿತಗೊಳಿಸುತ್ತದೆ. ಜೊತೆಗೆ ಮದುವೆ, ಗೃಹಪ್ರವೇಶ ಇನ್ನಿತರ ಶುಭಕಾರ್ಯಗಳು ಕಡಿಮೆಯಾಗುತ್ತದೆ. ಪತ್ತನಾಜೆಯಂದು ಹತ್ತು ಹನಿಯಾದರೂ ಮಳೆ ಸುರಿಯುತ್ತದೆ‌ ಎಂಬ ನಂಬಿಕೆ ತುಳುನಾಡಿನಲ್ಲಿ ಚಾಲ್ತಿಯಲ್ಲಿದೆ‌. ಅಂದರೆ ಪತ್ತನಾಜೆ ಮಳೆಗಾಲ ಆರಂಭಕ್ಕೆ ಮುಹೂರ್ತದ ದಿನವೆಂದೇ ನಂಬಿಕೆ. ಈ ದಿನ ಗದ್ದೆ ಉಳುಮೆ ಮಾಡುವ ಕೆಲಸ ಆರಂಭಿಸುತ್ತಾರೆ. ಮುಂದಿನ ಮಳೆಗಾಲ ಪೂರ್ತಿ ಕೃಷಿಯಲ್ಲಿ ತೊಡುಗುವ ಕಾರಣ ಪತ್ತನಾಜೆ ಕೃಷಿ ಚಟುವಟಿಕೆಗಳಿಗೆ ನಾಂದಿ ಹಾಡುವ ದಿನವೆಂದರೆ ತಪ್ಪಿಲ್ಲ‌. ಇಂದು ಕೃಷಿ ಬದುಕಿನಿಂದ ತುಳುವರು ವಿಮುಖರಾಗುತ್ತಿದ್ದರೂ, ಯಕ್ಷಗಾನ ಮೇಳ ತಿರುಗಾಟ, ನೇಮ, ಉತ್ಸವಗಳು ಮಾತ್ರ ಇಂದಿಗೂ ಪತ್ತನಾಜೆ ಬಳಿಕ ಇಲ್ಲವೇ ಇಲ್ಲ ಎನ್ನಬಹುದು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *