
ಬಂಟ್ವಾಳ: ಇಲ್ಲಿನ ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, 17 ಮಂದಿ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತರಿಗೆ ಈ ಬಾರಿಯೂ ಸೋಲಾಗಿದೆ.



ಸಾಮಾನ್ಯ ಕ್ಷೇತ್ರದಿಂದ ಅರುಣ್, ಅರುಣ್ ಕುಮಾರ್ ಕೆ., ಕಿರಣ್ ಕುಮಾರ್ ಎ., ಪ್ರೇಮನಾಥ ಬಂಟ್ವಾಳ, ಭೋಜ ಸಾಲಿಯಾನ್, ರಮೇಶ್ ಸಾಲಿಯಾನ್, ಸತೀಶ್,ರಮೇಶ್ ಸಾಲಿಯಾನ್, ಸುರೇಶ್ ಕುಲಾಲ್, ಸುರೇಶ್ ಕುಲಾಲ್ ಎನ್., ಹರೀಶ್, ಮಹಿಳಾ ಕ್ಷೇತ್ರದಿಂದ ಮಾಲತಿ ಮಚ್ಚೇಂದ್ರ, ವಿದ್ಯಾ, ಹಿಂ. ವರ್ಗ ‘ಎ’ ಕ್ಷೇತ್ರದಿಂದ ಜನಾರ್ದನ ಬೊಂಡಾಲ, ಹಿಂ.ವರ್ಗ ‘ಬಿ’ ಕ್ಷೇತ್ರದಿಂದ ಜಗನ್ನಿವಾಸ ಗೌಡ, ಪ. ಜಾ.ಕ್ಷೇತ್ರದಿಂದ ಗಣೇಶ್ ಸಮಗಾರ, ಪ. ಪಂ.ರೇಖಾ ನಾಯ್

ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬ್ಯಾಂಕಿನ ಹಾಲಿ ಅಧ್ಯಕ್ಷ ಸುರೇಶ್ ಕುಲಾಲ್ ಬಂಟ್ವಾಳ ಅವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಾಗಿದ್ದು, ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠ ಅಭ್ಯರ್ಥಿಗಳು ಮೂರನೇ ಅವಧಿಗೂ ಆಡಳಿತವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ಬೈಪಾಸ್ನಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆಯಿತು.ಪುತ್ತೂರು ತಾಲೂಕು ಸಹಕಾರಿ ಅಧಿಕಾರಿ ರಘ ಅವರು ಚುನಾವಣಾಧಿಕಾರಿಯಾಗಿದ್ದರು. ಸಂಘದ ಸಿಒ ಬೋಜ ಮೂಲ್ಯ ಹಾಗೂ ಸಿಬ್ಬಂದಿಗಳು ಸಹಕರಿಸಿದ್ದರು.

