ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿ-ಸವಾರ ಸಾವು

0 0
Read Time:55 Second

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದ ಸಮೀಪ ನಡೆದಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ (30) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *