ಬಂಟ್ವಾಳ: ಪ್ರತಿನಿತ್ಯ ಕ್ಷುಲ್ಲಕ ವಿಚಾರಕ್ಕೆ ಜಗಳ; ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರಿಂದ ಕ್ಲಾಸ್

0 0
Read Time:1 Minute, 53 Second

ಬಂಟ್ವಾಳ: ಶಾಲೆಯಲ್ಲಿ ಪ್ರತಿದಿನವೂ ಕ್ಷುಲ್ಲಕವಿಚಾರದಲ್ಲಿ ಜಗಳವಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರೇ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಲವತ್ತಾರು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗೆ ಮೂವರು ಶಿಕ್ಷಕರನ್ನು ಶಿಕ್ಷಣ ಇಲಾಖೆ ನಿಯೋಜಿಸಿತ್ತು, ಮುಖ್ಯ ಶಿಕ್ಷಕಿ ಅನಿತಾ, ಲವಿನಾ ಮತ್ತು ಸುಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಈ ಪೈಕಿ ಮುಖ್ಯ ಶಿಕ್ಷಕಿ ಅನಿತಾ ಮತ್ತು ಸುಮಯ್ಯ ನಡುವೆ ಮನಸ್ತಾಪ ಇತ್ತು ಎಂದು ಹೇಳಲಾಗಿದ್ದು, ಈ ಹಿನ್ನಲೆ ಇಬ್ಬರು ಪ್ರತಿದಿನ ಶಾಲೆಯಲ್ಲೇ ಜಗಳವಾಡುತ್ತಿದ್ದರು ಎಂದು ಆರೋಪಿಸಲಾಗಿದೆ.ಇದರಿಂದ ಬೇಸತ್ತ ವಿದ್ಯಾರ್ಥಿಗಳು ಮನೆಯಲ್ಲಿ ಪೋಷಕರಿಗೆ ದೂರು ನೀಡಿದ್ದಾರೆ. ಮಕ್ಕಳ ದೂರಿನ ಹಿನ್ನಲೆ ಶಾಲೆಗೆ ಭೇಟಿ ನೀಡಿ ಪೋಷಕರು ಶಿಕ್ಷಕಿಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ. ಅವರ ಎದುರು ಶಿಕ್ಷಕಿಯರಿಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಬ್ಬರು ಶಿಕ್ಷಕಿಯರಿಗೆ ವಾರ್ನಿಂಗ್ ಕೊಟ್ಟಿದ್ದು, ಮುಂದೆ ಮತ್ತೆ ಗಲಾಟೆ ಆದರೆ ಇಬ್ಬರ ವಿರುದ್ದ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *