ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ ಪಂಗನಾಮ ಹಾಕಿ ಪರಾರಿ..!! ದೂರು ದಾಖಲು

0 0
Read Time:58 Second

ಮಂಗಳೂರು: ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಒಂದರಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಗುರುಪುರದ ಅದ್ದೂರು ನಿವಾಸಿ ಮುಹಮ್ಮದ್ ಆಸೀಫ್ ಎಂಬಾತನೇ ಈ ಕೃತ್ಯ ಎಸಗಿದಾತ.

ಈತ ತನ್ನ ಎರಡು ಸಾಲದ ಖಾತೆಗಳಲ್ಲಿ ಐವತ್ತಾರು ಗ್ರಾಂ ತೂಕದ ಚಿನ್ನಾಭರಣ ಅಡವಿಟ್ಟಿದ್ದಾನೆ. ಅಸಲಿ ಚಿನ್ನವೆಂದು ನಂಬಿಸಿ ಒಟ್ಟು ಮೂರು ಲಕ್ಷದ ಮೂವತ್ತಾರು ಸಾವಿರ ರೂ. ಸಾಲ ಪಡೆದು ಎಸ್ಕೇಪ್ ಆಗಿದ್ದಾನೆ.

ಬ್ಯಾಂಕ್ ಗೆ ವಂಚಿಸಿರುವ ಮುಹಮ್ಮದ್ ಆಸೀಫ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಖೆಯ ಅಧಿಕಾರಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *