ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಅಜೀಜ್ ಅರೆಸ್ಟ್

0 0
Read Time:1 Minute, 32 Second

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ಪೊಲೀಸರು ಮುಂಬೈಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಆರ್ಯಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್ ಬಂಧಿತ ಆರೋಪಿ.

ವಂಚನೆ ಪ್ರಕರಣದ ಆರೋಪಿಯಾಗಿದ್ದು, ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿ‌ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವಂಚನೆ ಪ್ರಕರಣಗಳು ದಾಖಲಾಗಿವೆ.ವಂಚನೆ ಸಹಿತ ಇನ್ನಿತರ ಪ್ರಕರಣಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಇದೀಗ ಆರೋಪಿಯನ್ನು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ , ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಪೋಲೀಸ್ ಉಪನಿರೀಕ್ಷಕರುಗಳಾದ ರಾಮಕೃಷ್ಣ, ಕಲೈಮಾರ್, ದುರ್ಗಪ್ಪ, ಗೋಪಾಲ‌ಅವರ ನೇತ್ರತ್ವದಲ್ಲಿ ಎ.ಎಸ್.ಐ.ಸುಜು, ಹೆಚ್.ಸಿ. ಜಗದೀಶ್ ಅವರು ಮಾಹಿತಿ ಸಂಗ್ರಹಿಸಿ ಮಹಾರಾಷ್ಟ್ರದ ಮುಂಬಯಿ ಎಂಬಲ್ಲಿಗೆ ತೆರಳಿ ಬಂಧಿಸಿದ್ಧಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *