ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

0 0
Read Time:2 Minute, 40 Second

ಬೆಂಗಳೂರು : ಪಂಜಾಬ್ ನಲ್ಲಿ ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೇಮ ವೈಫಲ್ಯದಿಂದ ಆಕಾಂಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆಕಾಂಕ್ಷಾ ಪಗ್ವಾಡ ಕಾಲೇಜಿನ ಪ್ರೊ. ಮ್ಯಾಥ್ಯೂ ಅವರನ್ನು ಪ್ರೀತಿಸುತ್ತಿದ್ದರು. ಕಾಲೇಜಿಗೆ ಸರ್ಟಿಫಿಕೇಟ್ ತರಲು ಹೋದಾಗ ಬ್ರೇಕಪ್ ವಿಚಾರಕ್ಕೆ ಪ್ರೊ. ಮ್ಯಾಥ್ಯೂ ಜೊತೆ ಆಕಾಂಕ್ಷ ಗಲಾಟೆ ಮಾಡಿದ್ದಾರೆ. ನಂತರ ಮನನೊಂದು ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ, ಪ್ರೊ ಮ್ಯಾಥ್ಯೂ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆ ಹಿನ್ನೆಲೆ

6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಏರೋಸ್ಪೇಸ್ ನ ಉದ್ಯೋಗಿ ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. ಆಕಾಂಕ್ಷಾ ಮೇ.17 ರಂದು ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು ಈ ವೇಳೆ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ನಾಯರ್ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು. ಈ ಹಿನ್ನೆಲೆಯಲ್ಲಿ ಸರ್ಟಿಫಿಕೇಟ್ ತರಲೆಂದು ಹೋಗಿದ್ದರು. ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಆಕಾಂಕ್ಷಾ ಪ್ಲಾನ್ ಮಾಡಿದ್ದರು. ಇದಕ್ಕಾಗಿ ಸರ್ಟಿಫಿಕೇಟ್ ಗಾಗಿ ಪಂಜಾಬ್ ಪಗ್ವಾಡಾ ಕಾಲೇಜಿಗೆ ಹೋಗಿ ಸರ್ಟಿಫಿಕೇಟ್ ಪಡೆದಿದ್ದರು. ಸರ್ಟಿಫಿಕೇಟ್ ಪಡೆದ ಬಳಿಕ ಮನೆಗೆ ಕರೆ ಮಾಡಿದ್ದ ಆಕಾಂಕ್ಷಾ ಆ ಬಳಿಕ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಗಳ ಸಾವಿನ ಬಗ್ಗೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಕಾಂಕ್ಷಾ ತಂದೆ ಮಗಳ ಸಾವು ಕೊಲೆಯಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *