ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಬಂಧನ

0 0
Read Time:1 Minute, 34 Second

ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತ ಮೌಲ್ವಿ ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಕರೌಲ್‌ನಲ್ಲಿ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ ಮಾಡುತ್ತಿದ್ದ. ಎಟಿಎಸ್‌ ಅಧಿಕಾರಿಗಳು ಆರೋಪಿಯ ಮನೆಯಿಂದ 3 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ಆರೋಪಿ ನಿರ್ಮಿಸಿದ್ದ ಗ್ರಂಥಾಲಯದಿಂದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆತನ ಕೋಣೆಯನ್ನು ಅಧಿಕಾರಿಗಳು ಸೀಲ್‌ ಮಾಡಿದ್ದಾರೆ.

ಉಳಿದಂತೆ ಜೋಧ್‍ಪುರ್, ಬಾರ್ಮರ್ ಮತ್ತು ಕರೌಲಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ‌ ಎಟಿಎಸ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಧಿತರನ್ನು ಜೈಪುರದ ಎಟಿಎಸ್ ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *