
Read Time:1 Minute, 8 Second
ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ.


ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಮಾಡಲಾಗಿದ್ದು, ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಡಿಜಿ ಮತ್ತು ಐಜಿಪಿ ಆದೇಶದ ಮೇರೆಗೆ ಎಸ್ಐಟಿಗೆ ಹಸ್ತಾಂತರಿಸಲಾಗಿದೆ.
2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಂತ ಅನನ್ಯ ಭಟ್ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ಎಸ್ಐಟಿಗೆ ರಾಜ್ಯ ಸರ್ಕಾರ ಹಸ್ತಾಂತರಿ ಅಧಿಕೃತ ಆದೇಶ ಮಾಡಿದೆ.


