ಇನ್ಮುಂದೆ ‘ವಕೀಲ’ರ ಮೇಲೆ ಹಲ್ಲೆ ಮಾಡಿದ್ರೆ ‘ಜೈಲು ಶಿಕ್ಷೆ’ ಫಿಕ್ಸ್

0 0
Read Time:1 Minute, 13 Second

ಬೆಂಗಳೂರು: ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ.

ಹೌದು. ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ.

ಈ ನಿಯಮದಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ ಹಲ್ಲೆ ನಡೆಸುವುದು, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಒಂದು ವೇಳೆ ನೀವು ಈ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹1 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *