ಬೆಳ್ತಂಗಡಿ: ವ್ಯಕ್ತಿಯಿಂದ ATM ಕಾರ್ಡ್ ಕಸಿದುಕೊಂಡು ಹಣ ಡ್ರಾ ಮಾಡಿಕೊಂಡ ಅಪರಿಚಿತರು..!

0 0
Read Time:1 Minute, 33 Second

ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ ಕೆನರಾ ಬ್ಯಾಂಕಿನ ಎ.ಟಿ.ಎಂ ನಲ್ಲಿ ಹಣ ತೆಗೆಯಲೆಂದು ಹೋಗಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಎ.ಟಿ.ಎಂ ಒಳಗೆ ಬಂದು ಅಬೂಬಕ್ಕರ್ ಅವರಿಗೆ ಸಹಾಯ ಮಾಡಲು ಮುಂದಾಗುತ್ತಾರೆ. ಅಬೂಬಕ್ಕರ್ ಅವರು ಸಹಾಯ ಅಗತ್ಯವಿಲ್ಲ ಎಂದು ಹೇಳಿದರೂ ಅಪರಿಚಿತರು ಅಲ್ಲಿ ಅವರೊಂದಿಗೆ ಇದ್ದರು ಎನ್ನಲಾಗಿದೆ. ಇದಾದ ಎರಡು ದಿನಗಳ ಬಳಿಕ ಅಬೂಬಕ್ಕರ್ ಮತ್ತೆ ಎ.ಟಿ.ಎಂ ಗೆ ಹೋದಾಗ ಎಟಿಎಂ ಕಾರ್ಡ್ ವರ್ಕ್ ಆಗುತ್ತಿರಲಿಲ್ಲ. ಬ್ಯಾಂಕಿನಲ್ಲಿ ವಿಚಾರಿಸಿದಾಗ ಖಾತೆಯಲ್ಲಿದ್ದ 49,200 ರೂ. ಎ.ಟಿ.ಎಂ ಕಾರ್ಡ್ ಬಳಸಿ ತೆಗೆದಿರುವುದು ಕಂಡು ಬಂದಿದೆ. ಅಪರಿಚಿತ ವ್ಯಕ್ತಿಗಳು ಎಟಿಎಂ ಕೇಂದ್ರದಲ್ಲಿ ಅಬೂಬಕ್ಕರ್ ಅವರಿಂದ ಎಟಿಎಂ ಕಾರ್ಡ್ ಅಪಹರಿಸಿ ಯಾವುದೋ ಹಳೆಯ ಕಾರ್ಡನ್ನು ಅವರಿಗೆ ನೀಡಿದ್ದರು. ಬಳಿಕ ಕಾರ್ಡನ್ನು ಉಪಯೋಗಿಸಿ ಹಣ ಕಬಳಿಸಿದ್ದರು. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *