admin

ಕೆರೆಯಲ್ಲಿ ತಾಯಿ, ಮಗುವಿನ ಮೃತದೇಹ ಪತ್ತೆ..!!

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ರವಿವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ…

Read More

ಮಂಗಳೂರು: ಅದ್ದೂರಿಯಾಗಿ ನಡೆದ ಕುಂಭ ಕಲಾವಳಿ-ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮ

ಮಂಗಳೂರು: ಕುಲಾಲ ಸಮುದಾಯವು ತಲೆತಲಾಂತರಗಳಿಂದ ಮಹಾನ್ ಸಾಧಕರನ್ನು ನೀಡಿರುವ ದಿವ್ಯ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಪ್ರೀತಿ ಮತ್ತು ಸ್ವೀಕಾರವನ್ನು ಪಡೆದಿದೆ. ನಮ್ಮದು ಎಂಬ ಭಾವನೆ ಮೂಡಿದಾಗಲೇ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆ ಸಾಧ್ಯ. ಕಲೆ, ಸಂಸ್ಕೃತಿ ಮತ್ತು ಆಚಾರಗಳ ಪಾಲನೆ ಅಗತ್ಯವಿದ್ದು, ಪೂರ್ವಜರ ಆದರ್ಶಗಳನ್ನು ಅನುಸರಿಸಿ ಇನ್ನಷ್ಟು ಸೇವಾಕಾರ್ಯಗಳನ್ನು ಕೈಗೊಳ್ಳಬೇಕು. ಹುಟ್ಟುಸಾವಿನ ನಡುವಿನ ಜೀವನದಲ್ಲಿ ಧರ್ಮ ಹಾಗೂ ಕರ್ತವ್ಯ ಪ್ರಜ್ಞೆ ಅತ್ಯಂತ ಮುಖ್ಯವಾದುದು ಎಂದು ಶ್ರೀ ಧಾಮ ಮಾಣಿಲದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ…

Read More

ಮದುವೆಯಾಗಲು ಇಷ್ಟವಿಲ್ಲ ಎಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!

ಕಾರವಾರ: ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತಳನ್ನು ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಎಂದು ಗುರುತಿಸಲಾಗಿದೆ. ಹತ್ತು ವರ್ಷಗಳ ಹಿಂದೆ ರಂಜಿತಾ ವಿಚ್ಛೇದನ ಪಡೆದು ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ಮಗುವಿನೊಂದಿಗೆ ವಾಸವಾಗಿದ್ದಳು. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾಳಿಗೆ ರಫೀಕ್ ನ ಪರಿಚಯವಾಗಿತ್ತು. ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರ…

Read More

ಮೂಲ್ಕಿ: ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕೆ ಬೇಡಿಕೆ- ಮೂವರ ಬಂಧನ

ಮೂಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಮೂವರು ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಶ್ಯಾಮ ಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವಿನ್ ಕಾಂಚನ್ ಬಂಧಿತರು.  ಅಂಗಾರಕಟ್ಟೆ ಕೆಂಚನಕೆರೆ ನಿವಾಸಿ ಸಂಶುದ್ದೀನ್ ಅವರಿಗೆ ಈ ಮೂವರು ಆರೋಪಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ತಿಳಿದು ಬಂದಿದೆ. ಸಂಶುದ್ದೀನ್ ಅವರು ಮುಂಬೈಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ ಹಾಗೂ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಮೂಲ್ಕಿ ಅರಸು ಕಂಬಳದಲ್ಲಿ ಸಂಶುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಲಭಿಸಿದ್ದು, ಅದರಲ್ಲಿ…

Read More

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತನ್ನ ತಮ್ಮನಿಗೆ ಹುಷಾರಿಲ್ಲ, ರೂಮಿಗೆ ಹೋಗುತ್ತೇನೆಂದು ಬ್ಯಾಂಕಿನಲ್ಲಿ ಹೇಳಿ…

Read More

ಪುತ್ತೂರು: ಯುವತಿಗೆ ವಂಚನೆ ಪ್ರಕರಣ- ಜ.24ರಂದು ಮಗುವಿಗೆ ನಾಮಕರಣ ಮಾಡುವ ಮೂಲಕ ಧರಣಿ-ಪ್ರತಿಭಾ ಕುಳಾಯಿ

ಪುತ್ತೂರಿನ ಯುವತಿಗೆ ವಂಚಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲಾಗುವುದು. ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥಕವಾಗಿ ಮಗುವಿಗೆ ನಾಮಕರಣ ಶಾಸ್ತç ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು.  ಮಂಗಳೂರಿನಲ್ಲಿ ಅವರು ಯುವತಿ, ಮಗು ಹಾಗೂ ಪೋಷಕರ ಜೊತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.  ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ…

Read More

ಮಂಗಳೂರು: ಜ.4ರಂದು “ಕುಂಭ ಕಲಾವಳಿ” : ಕುಲಾಲ ಕಲಾ ಸೇವಾಂಜಲಿ -ಕುಲಾಲ ಸಿಂಧೂರ ಪ್ರಶಸ್ತಿ ಪ್ರದಾನ

ಮಂಗಳೂರು: ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಹಯೋಗದಲ್ಲಿ ಪದಗ್ರಹಣ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಆಶಕ್ತರಿಗೆ ನೆರವು ಸೇರಿದಂತೆ ವಿವಿಧ ವಿಭಿನ್ನ ಕಾರ್ಯಕ್ರಮ ‘ಕುಂಭ ಕಲಾವಳಿ’ ಕುಲಾಲ ಕಲಾ ಸೇವಾಂಜಲಿ ಜ. 4 ರಂದು ಕುದ್ಮುಲ್ ರಂಗರಾವ್ ಪುರಭವನ ಮಂಗಳೂರು ಜರುಗಲಿದೆ ಎಂದು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ…

Read More

ಮುಲ್ಕಿ: ಅಂಗಾರಗುಡ್ಡೆಯಲ್ಲಿ ಸುಲಿಗೆ ಯತ್ನ – ಆರೋಪಿಗಳಿಂದ ಹಲ್ಲೆ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಪ್ರದೇಶದಲ್ಲಿ ಸುಲಿಗೆ ಯತ್ನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅಂಗಾರಗುಡ್ಡೆ ನಿವಾಸಿ ಅಬೂಬಕ್ಕರ್ ಅವರಿಂದ ಸುಲಿಗೆ ಪಡೆಯುವ ಉದ್ದೇಶದಿಂದ ಮೂವರು ಆರೋಪಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಬೂಬಕ್ಕರ್ ಅವರ ಬಳಿ ಮೂರು ಜೋಡಿ ಎಮ್ಮೆ, ಐದು ಹಾಲು ಹಸುಗಳು ಹಾಗೂ ಇನ್ನಿತರ ಎತ್ತು–ಎಮ್ಮೆಗಳನ್ನು ಹೊಂದಿದ್ದು, ಇತ್ತೀಚೆಗೆ ಅವರ ಎಮ್ಮೆಗಳು ಕಂಬಳ ಸ್ಪರ್ಧೆಯಲ್ಲಿ ಬಹುಮಾನ ಗೆದ್ದಿದ್ದವು. ಇದನ್ನೇ ಗುರಿಯಾಗಿಸಿಕೊಂಡು, ಪಕ್ಕದ ಗ್ರಾಮದ ಮೂವರು ಆರೋಪಿಗಳು ಸುಲಿಗೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ….

Read More

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ..!!

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ. ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ….

Read More

ನಿಶ್ಚಿತಾರ್ಥವಾಗಿದ್ದ ಯುವತಿಗೆ ಇನ್ಸ್ಟಾಗ್ರಾಮ್‌ನಲ್ಲಿ ಮೆಸೇಜ್: ಯುವಕನ ಹತ್ಯೆ

ಚಿಕ್ಕಮಗಳೂರು: ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಗೆ ಇನ್ಸ್ಟಾ‌ಗ್ರಾಮ್‌ನಲ್ಲಿ ಯುವಕನೊಬ್ಬ ಮೆಸೇಜ್ ಮಾಡುವ ಮೂಲಕ ಕಾಟ ಕೊಟ್ಟಿದ್ದು, ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆಯ ಅತ್ತಿಗನಾಳು ಗ್ರಾಮದ ಬಳಿ ನಡೆದಿದೆ. ಮಂಜುನಾಥ್ (21) ಎಂಬವನೇ ಕೊಲೆಯಾದ ಯುವಕ. ಹತ್ಯೆ ಮಾಡಿದ ಆರೋಪಿಯನ್ನು ವೇಣು ಎಂದು ಗುರುತಿಸಲಾಗಿದೆ. ಮಂಜುನಾಥ್‌ಗೆ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ವೇಣು ಎಂಬಾತನ ಜೊತೆ ವಿವಾಹ ನಿಶ್ಚಯವಾಗಿತ್ತು. ಹಾಗಿದ್ದರೂ ಮಂಜುನಾಥ್ ಪದೇ ಪದೇ ಆಕೆಗೆ ಮೆಸೇಜ್ ಮಾಡಿ ಕಿರಿಕಿರಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೆಸೇಜ್…

Read More