admin

ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ’- (ಬ್ಯಾಗ್ ರಹಿತ ದಿನ – No Bag Day) – ಕಾರ್ಯಕ್ರಮದ ವರದಿಯನ್ನು ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸುವಂತೆ ಉಲ್ಲೇಖ-1 ರ ಪತ್ರದಲ್ಲಿ ಆದೇಶಿಸಲಾಗಿದೆ. ಅದರಂತೆ, ಪ್ರಸಕ್ತ ಸಾಲಿನಲ್ಲಿ ಕ್ರಮವಹಿಸಲು…

Read More

ಮಂಗಳೂರು ನಗರದಲ್ಲಿ ನಡೆದ ಬೆಚ್ಚಿಬೀಳಿಸುವ ದರೋಡೆ: ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ

ಮಂಗಳೂರು : ಚಿನ್ನದ ಅಂಗಡಿಯ ಕೆಲಸಗಾರನೊಬ್ಬನಿಂದ ಸುಮಾರು 1.5 ಕೋಟಿ ರೂ. ಬೆಲೆಗಾಳುವ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿರುವ ಆಘಾತಕಾರಿ ಘಟನೆ ಸೆ.26ರಂದು ರಾತ್ರಿ ಮಂಗಳೂರು ನಗರದ ಮಧ್ಯಭಾಗದಲ್ಲೆ ನಡೆದಿದೆ. ನಗರದ ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8.30ರ ವೇಳೆಗೆ ಅಂಗಡಿಯಿಂದ ವಾರದಲ್ಲಿ ಶೇಖರಣೆಯಾದ ಸುಮಾರು 1.5…

Read More

ಉಡುಪಿ: ಸೈಫ್ ಕೊಲೆ, ಮೂವರು ಆರೋಪಿಗಳ ಬಂಧನ..!!

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮಿಷನ್ ಕಂಪೌಂಡ್ ನಿವಾಸಿ  ಮಹಮದ್‌ ಫೈಸಲ್‌ ಖಾನ್ ‌(27), ಕರಂಬಳ್ಳಿ ಜನತಾ ಕಾಲೊನಿಯ ಮೊಹಮದ್‌ ಶರೀಫ್‌ (37) ಮತ್ತು ಮಂಗಳೂರಿನ ಕೃಷ್ಣಾಪುರದ ಅಬ್ದುಲ್‌ ಶುಕುರ್‌ (43) ಎಂಬವರನ್ನು ದಸ್ತಗಿರಿ ಮಾಡಲಾಗಿದೆ.  ಆರೋಪಿಗಳನ್ನು ಉಡುಪಿಯ ಜೆ ಎಂ ಎಫ್ ಸಿ  ನ್ಯಾಯಾಧೀಶರೆದುರು ಹಾಜರುಪಡಿಸಲಾಗಿದ್ದು ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.  ಕೊಲೆ, ಹಲ್ಲೆ ಪ್ರಕಣಗಳಲ್ಲಿ ತೊಡಗಿ ರೌಡಿ ಶೀಟರ್ ಆಗಿದ್ದ ಸೈಫುದ್ದೀನ್ ಅವರನ್ನು ಆರೋಪಿಗಳು…

Read More

ಪುತ್ತೂರು: ಅತ್ಯಾಚಾರ-ವಂಚನೆ ಪ್ರಕರಣ- ಶ್ರೀಕೃಷ್ಣ ಜೆ. ರಾವ್‌ ಮಗುವಿನ ತಂದೆ- ಡಿಎನ್‌ಎ ವರದಿ ಬಹಿರಂಗ

ಪುತ್ತೂರು: ವಿವಾಹದ ಭರವಸೆ ನೀಡಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಯುವತಿಯನ್ನು ವಂಚಿಸಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಲಭಿಸಿದೆ. ಬಿಜೆಪಿ ನಾಯಕನ ಪುತ್ರ ಆರೋಪಿ ಶ್ರೀಕೃಷ್ಣ ಜೆ. ರಾವ್‌ ಅವರೇ ಮಗುವಿನ ತಂದೆ ಎಂದು ಡಿಎನ್‌ಎ ಪರೀಕ್ಷಾ ವರದಿಯಿಂದ ಸ್ಪಷ್ಟಗೊಂಡಿದೆ.ಶನಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು ಈ ಡಿಎನ್‌ಎ ವರದಿಯ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿದರು. ವರದಿಯಲ್ಲಿ ಮಗುವಿನ ಮತ್ತು ಆರೋಪಿ ಶ್ರೀಕೃಷ್ಣನ ರಕ್ತದ ಮಾದರಿ ಸಂಪೂರ್ಣವಾಗಿ ಹೊಂದಿಕೆಯಾಗಿದೆ…

Read More

ಮಂಗಳೂರು: ಗಾಂಜಾ ಮಾರಾಟಕ್ಕೆ ಇಳಿದ ಕೇರಳದ ವಿದ್ಯಾರ್ಥಿಗಳು : 11 ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ದಕ್ಷಿಣ ಠಾಣಾ ಪೊಲೀಸ್‌ಗಳು ಶನಿವಾರ (ಸೆಪ್ಟೆಂಬರ್ 26) ಸಂಜೆ ದೊಡ್ಡ ಮಟ್ಟದ ಮಾದಕ ವಸ್ತು ದಾಳಿ ನಡೆಸಿ 12.2 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, 11 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಸಂಜೆ 7.45ರ ಸುಮಾರಿಗೆ ದಕ್ಷಿಣ ಠಾಣಾ ಅಪರಾಧ ಪತ್ತೆ ಸಿಬ್ಬಂದಿಗಳಿಗೆ ಕೇರಳ ಮೂಲದ ಕೆಲವರು ಅತ್ತಾವರ ಕಾಪ್ರಿಗುಡ್ಡೆಯ ಕಿಂಗ್ಸ್ ಕೋರ್ಟ್ ಅಪಾರ್ಟ್‌ಮೆಂಟ್‌ನ ಪ್ಲಾಟ್ ನಂ. G1ರಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಶೀತಲ್…

Read More

ಉಳ್ಳಾಲ: ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಳ್ಳಾಲ: ಕಡಲ ತೀರದಲ್ಲಿ ಮೀನಿಗೆಂದು ಗಾಳ ಹಾಕುತ್ತಿದ್ದ ತಂಡವೊಂದಕ್ಕೆ ಕಲ್ಲುಗಳ ಮಧ್ಯೆ ಕೊಳೆತ ಮೃತದೇಹ ಸಿಲುಕಿರುವುದು ಗೋಚರಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ ನೀಡಿದ್ದರು. ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಹೆಗಲ ಮೇಲೆ ಇಟ್ಟುಕೊಂಡು 3-4 ಕಿ.ಮೀ ದೂರ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದು ಪೊಲೀಸರಿಗೆ ಸಹಕರಿಸಿದ್ದಾರೆ. ಸುಮಾರು 40-45…

Read More

ಮಲ್ಪೆ: AKMS ಬಸ್ ಮಾಲಕ ಸೈಫ್ ಯಾನೆ ಸೈಫುದ್ದೀನ್ ಬರ್ಬರ ಹತ್ಯೆ

ಉಡುಪಿ:  ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ ಶನಿವಾರ ಮಲ್ಪೆ ಸಮೀಪದ ಕೊಡವೂರು ಬಳಿ ನಡೆದಿದೆ. ಮಣಿಪಾಲದಲ್ಲಿ ಸಾರಿಗೆ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದ ಸೈಫುದ್ದೀನ್, ಅಪರಿಚಿತ ದಾಳಿಕೋರರು ಗುಂಡು ಹಾರಿಸಿದಾಗ ದಾಳಿಗೆ ಗುರಿಯಾದರು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಗುಂಡೇಟಿನ ಬಳಿಕ ಆರೋಪಿಗಳು ಅವರನ್ನು ಮತ್ತಷ್ಟು ಹಲ್ಲೆಗೊಳಪಡಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿದ್ದು ಮಾಹಿತಿ ಪಡೆದಿದ್ದಾರೆ. ಪ್ರಕರಣದ…

Read More

ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಸೈಬರ್ ವಂಚನೆಯಿಂದ ಪಾರಾಗಲು ಜಸ್ಟ್ ಹೀಗೆ ಮಾಡಿ.!

ವಂಚನೆಯನ್ನು ತಪ್ಪಿಸಲು ನೀವು ಏನು ಮಾಡಬೇಕು? ಹಂತ 1 ವಂಚಕರು ಜನರನ್ನು ವಂಚಿಸಲು ಕರೆ ಮಾಡುತ್ತಾರೆ ಮತ್ತು ನಂತರ, ತಮ್ಮ ಮಾತುಗಳಿಂದ ನಿಮ್ಮನ್ನು ಆಮಿಷವೊಡ್ಡಿದ ನಂತರ, ಪೊಲೀಸರಂತೆ ಕರೆ ಮಾಡುತ್ತಾರೆ, ಅದು ನಕಲಿ. ಇದಲ್ಲದೆ, ಅವರು ನಿಮ್ಮನ್ನು ಸುಳ್ಳು ಆರೋಪಗಳಿಂದ ಕೂಡಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ಕರೆ ನಕಲಿ ಎಂದು ನೀವು ಸ್ವಲ್ಪವಾದರೂ ಅನುಮಾನಿಸಿದರೆ, ನೀವು ಮಾಡಬೇಕಾದ ಮೊದಲ ಕೆಲಸವೆಂದರೆ ಅದನ್ನು ಸಂಪರ್ಕ ಕಡಿತಗೊಳಿಸುವುದು. ಎರಡನೇ ಹಂತ ನೀವು ಮಾಡಬೇಕಾದ ಮುಂದಿನ ಕೆಲಸವೆಂದರೆ ನಿಮ್ಮ ಕುಟುಂಬ ಸದಸ್ಯರು, ಸ್ನೇಹಿತರು…

Read More

ಮಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ- ತಾಂತ್ರಿಕ ಸಹಾಯಕರು – 1 ಹುದ್ದೆ: ಬಿ.ಎಸ್ಸಿ. ಕೃಷಿ/ಬಿ.ಎಸ್ಸಿ ಹಾನರ್ಸ್ ಕೃಷಿ ಸ್ನಾತಕೋತ್ತರ ಪದವಿಯನ್ನು ನೋಂದಾಯಿತ ವಿಶ್ವವಿದ್ಯಾನಿಲಯದಡಿಯಲ್ಲಿ ಪಡೆದುಕೊಂಡಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಕೃಷಿ ಸಂಜೀವಿನಿ ತಾಂತ್ರಿಕ ಸಹಾಯಕರು – 1 ಹುದ್ದೆ : ಕೃಷಿ ಡಿಪ್ಲೋಮಾ ಹೊಂದಿರುವ ಅಥವಾ ಬಿ.ಎಸ್.ಸಿ(ಕೃಷಿ/ ತೋಟಗಾರಿಕೆ) ಪದವಿಯ ಜೊತೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಪಿ.ಎಂ.ಕಿಸಾನ್ ಯೋಜನೆಯಡಿ ತಾಂತ್ರಿಕ ಸಹಾಯಕರು-1 ಹುದ್ದೆ : ಬಿ.ಎಸ್ಸಿ. ಕೃಷಿ ಪದವಿದಾರರಿಗೆ ಮೊದಲ ಆದ್ಯತೆ ಇಲ್ಲವೆ…

Read More

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಏಪ್ರಿಲ್ ಗೆ ಹಾಕುತ್ತೇವೆ ಎಂದು ಉಡುಪಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಅನರ್ಹರು ಸ್ವಯಂ ಪ್ರೇರಿತವಾಗಿ ಬಿಬಿಎಲ್ ಕಾರ್ಡ್…

Read More