admin

ಗಾನ ಗಂಧರ್ವನಿಗೆ ಮಂಗಳೂರಿನಲ್ಲಿ ಸಂಗೀತ ಶ್ರದ್ಧಾಂಜಲಿ – 270 ಹಾಡುಗಳ ಗಾಯನದ ಮೂಲಕ ಯಶವಂತ್ ಎಂ.ಜಿ. ವಿಶ್ವದಾಖಲೆ

ಮಂಗಳೂರು: ಗಾನ ಗಂಧರ್ವ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಜನ್ಮದಿನ. ಈ ಹಿನ್ನೆಲೆ ಬುಧವಾರ ಮಂಗಳೂರಿನಲ್ಲಿ ಗಾಯಕ ಯಶವಂತ ಎಂ.ಜಿ. ವಿಶೇಷ ಪ್ರಯತ್ನದ ಮೂಲಕ ದಾಖಲೆ ಮಾಡಿದ್ದಾರೆ. ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ 270 ಹಾಡುಗಳನ್ನು ನಿರಂತರ 24 ಗಂಟೆಗಳ ಕಾಲ ಹಾಡುವ ಮೂಲಕ ಗೋಲ್ಡನ್​ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ಗಾಯಕ ಮಂಗಳೂರಿನ ಯಶವಂತ ಎಂ.ಜಿ. ದಾಖಲೆ ಬರೆದಿದ್ದಾರೆ.ಬಾಲಗಾನ ಯಶೋಯನ ಎಂಬ ಹೆಸರಿನ ಈ ಕಾರ್ಯಕ್ರಮವು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಟೌನ್ ಹಾಲ್‌ನಲ್ಲಿ ಪ್ರಾರಂಭವಾಗಿ ಬುಧವಾರ ಮಧ್ಯಾಹ್ನ 3…

Read More

ಜೋಲಿ ತೊಟ್ಟಿಲಿನಲ್ಲಿ ಸೀರೆ ಸಿಕ್ಕಿ ಹಾಕಿಕೊಂಡು ಮಗು ಸಾವು

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದು, ನಿಟ್ಟೂರಿನಲ್ಲಿ ಗಂಗಾಧರ್ ಒಡೆತನದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಜೂನ್ 4 ರಂದು ಬೆಳಿಗ್ಗೆ 9.30 ರ ಸುಮಾರಿಗೆ, ಅಯ್ಯಪ್ಪ ತನ್ನ ಪತ್ನಿ ಮತ್ತು ಒಂದು ವರ್ಷದ ಮಗಳು ಕಾಳಮ್ಮ ಅವರನ್ನು ಬಟ್ಟೆಯ ತೊಟ್ಟಿಲಿನಲ್ಲಿ (ಜೋಲಿ) ಮಲಗಿಸಿ ಕೆಲಸಕ್ಕೆ ಹೋಗಿದ್ದರು.ಅವರು ಬೆಳಿಗ್ಗೆ…

Read More

ನಂದಿನಿ ನದಿ ಮಾಲಿನ್ಯ: ಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ತ್ಯಾಜ್ಯದಿಂದ ಸುರತ್ಕಲ್ ಖಂಡಿಗೆ ಬಳಿ ನಂದಿನಿ ನದಿ ಮಲಿನವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು. ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು, ಸ್ಥಳೀಯರ ಅಹವಾಲು ಆಲಿಸಿದರು. ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ತಿಳಿಸಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ನದಿ…

Read More

ಹಿಂದೂ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರ ದಾಳಿ

ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ಮಾಡಿದ್ದಾರೆ. ತನಿಖಾ ತಂಡವು ದಿನಾಂಕ : 04.06.2025 ರಂದು ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂಟ್ವಾಳ ಪುದು ಗ್ರಾಮದ ನಿವಾಸಿ ಭರತ್…

Read More

ಕರ್ನಾಟಕ ರಾಜ್ಯ ಕುಲಾಲ/ಕುಂಬಾರ ಸಮುದಾಯದ ಏಕೈಕ ನೋಂದಾಯಿತ ಸಂಸ್ಥೆಗೆ ನೂತನ ಶಕ್ತಿ

ಮಂಗಳೂರು :ಕರ್ನಾಟಕ ರಾಜ್ಯ ಕುಲಾಲರ /ಕುಂಬಾರರ ಯುವ ವೇದಿಕೆಗಳ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ. ಮಂಗಳೂರು ಇದರ ರಾಜ್ಯ, ವಿಭಾಗ, ಜಿಲ್ಲೆ ಹಾಗೂ ವಿಧಾನಸಭಾ/ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೊಡುವಂತೆ ರಾಜ್ಯ, ವಿಭಾಗ ಹಾಗೂ ಜಿಲ್ಲಾ ನಾಯಕರುಗಳಿಗೆ ನೋಂದಾಯಿತ ಕೇಂದ್ರಸಮಿತಿಯಿಂದ ಅಧಿಕಾರ ಹಸ್ತಾಂತರ 15 ವರ್ಷಗಳ ಸೇವೆ ಸಲ್ಲಿಸಿದ ಬಳಿಕ ನೊಂದಾವಣೆ ಗೊಂಡು, 15 ವರ್ಷಗಳಲ್ಲಿ ಮಾಡಿದ ಸಮಾಜ ಮುಖೀ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ…

Read More

ಮಂಗಳೂರು:ಹಲವಾರು ರೈಲು ಸೇವೆಯಲ್ಲಿ ಬದಲಾವಣೆ

ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್‌ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣ ಕಾರ್ಯಗಳನ್ನು ನಿರ್ವಹಿಸುವ ಹಿನ್ನಲೆಯಲ್ಲಿ ವಿವಿಧ ರೈಲು ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಜೂ. 16 ರಂದು ಎರ್ನಾಕುಲಂ ಜಂಕಕ್ಷನ್‌ನಿಂದ ಸಂಜೆ 6.50ಕ್ಕೆ ಹೊರಡುವ 11098 ಎರ್ನಾಕುಲಂ ಜಂಕ್ಷನ್‌ -ಪುಣೆ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು 2 ಗಂಟೆಗಳ ಕಾಲ ವಿಳಂಬವಾಗಲಿದ್ದು, ರಾತ್ರಿ 8.50ಕ್ಕೆ ನಿಗದಿಯಾಗಿದೆ. ಜೂ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್‌-ಕೊಯಮತ್ತೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು(ನಂ.16324) 1 ಗಂಟೆ ಕಾಲ ವಿಳಂಬವಾಗಲಿದೆ. ಜೂ.7ರಂದು ಕೊಯಮತ್ತೂರು ಜಂಕ್ಷನ್‌ನಿಂದ ಹೊರಡುವ ಕೊಯಮತ್ತೂರು…

Read More

ಆದಿಶಕ್ತಿ ಕ್ಷೇತ್ರದಲ್ಲಿ ಮರುಕಳ್ಳತನ ಯತ್ನ ವಿಫಲ – ಕಳ್ಳ ಪೊಲೀಸರ ವಶಕ್ಕೆ

ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಬಂದು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ. ಈ ಹಿಂದೆ ಕಳ್ಳತನ ನಡೆದಾಗ ದೈವ ನೀಡಿದ್ದ ಅಭಯದಂತೆ ಕಳ್ಳ ಸಿಕ್ಕಿದ್ದು ದೈವದ ಕಾರಣಿಕ ಎಂದು ಜನರು ನಂಬಿದ್ದಾರೆ. ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ದೇವರ ಹುಂಡಿ ಹಾಗೂ ಕಲ್ಕುಡ ಕಲ್ಲುರ್ಟಿಯ ಕಾಣಿಕೆ ಡಬ್ಬಿಯಿಂದ ಮೇ…

Read More

ಸುಹಾಸ್ ಶೆಟ್ಟಿ ಹತ್ಯೆ ತನಿಖೆ ಪ್ರಗತಿ: ಮತ್ತೊಬ್ಬ ಆರೋಪಿಯ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಯೊಂದಿಗೆ ಕೊಲೆಗೆ ಸಂಚು ರೂಪಿಸಿದ ಮತ್ತು ಬಂಧನದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ.ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿವಂಗತ ಬಾವ ಅಬ್ದುಲ್ ರೆಹಮಾನ್ ಅವರ…

Read More

ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಪೊಲೀಸ್ ಕಾರ್ಯಾಚರಣೆ

ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ  1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್…

Read More

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ಜಿಲ್ಲಾಧ್ಯಕ್ಷರಾಗಿ ಲ| ಅನಿಲ್ ದಾಸ್ ಆವಿರೋದ ಆಯ್ಕೆ

ಕರ್ನಾಟಕ ರಾಜ್ಯ ಕುಲಾಲರ /ಕುಂಬಾರರ ಯುವ ವೇದಿಕೆಗಳ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ. ಮಂಗಳೂರು ಇದರ ರಾಜ್ಯ, ವಿಭಾಗ, ಜಿಲ್ಲೆ ಹಾಗೂ ವಿಧಾನಸಭಾ/ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೊಡುವಂತೆ ರಾಜ್ಯ, ವಿಭಾಗ ಹಾಗೂ ಜಿಲ್ಲಾ ನಾಯಕರುಗಳಿಗೆ ನೋಂದಾಯಿತ ಕೇಂದ್ರಸಮಿತಿಯಿಂದ ಅಧಿಕಾರ ಹಸ್ತಾಂತರ 15 ವರ್ಷಗಳ ಸೇವೆ ಸಲ್ಲಿಸಿದ ಬಳಿಕ ನೊಂದಾವಣೆ ಗೊಂಡು, 15 ವರ್ಷಗಳಲ್ಲಿ ಮಾಡಿದ ಸಮಾಜ ಮುಖೀ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಮುದಾಯದ…

Read More