admin

ಶ್ರೀಕಾಂತ್ ಶೆಟ್ಟಿ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಎಫ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಶ್ರೀಕಾಂತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, “ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ ಮಧ್ಯಂತರ…

Read More

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ 36 ಮಂದಿ ವಿರುದ್ಧ ಗಡಿಪಾರು ಪ್ರಕ್ರಿಯೆ ಆರಂಭ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ 36 ಮಂದಿ ರೌಡಿಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಬಂಟ್ವಾಳದ ಭರತ್ ಕುಮ್ಡೇಲ್ ಸೇರಿ 36 ಮಂದಿ ಲಿಸ್ಟ್ ನಲ್ಲಿದ್ದಾರೆ.ಬಂಟ್ವಾಳ ನಗರ ವ್ಯಾಪ್ತಿಯಿಂದ 4 ಮಂದಿ, ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯಿಂದ…

Read More

ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್‌ ಅಮೀನ್‌ ಬಂಧನ

ಕಾರ್ಕಳ : ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್‌ ಅವರನ್ನು ಜೂ. 2ರಂದು ಅಜೆಕಾರು ಪೊಲೀಸರು ಬಂಧನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಆರೋಪದ ಹಿನ್ನೆಲೆ ಅಜೆಕಾರು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಸೋಮವಾರ ಮುಂಜಾನೆ ಬಂಧಿಸಿದ್ದಾರೆ.

Read More

RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ `FIR’ ದಾಖಲು

ಮಂಗಳೂರು : ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್…

Read More

ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಿಂದ ಫೋಟೋ ತೆಗೆದು ದುರುಪಯೋಗ- ಪ್ರಕರಣ ದಾಖಲು

ಬಂಟ್ವಾಳ : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ ಪ್ರಸಾರ ಮಾಡಿದ ಬಗ್ಗೆ ವ್ಯಕ್ತಿಯೋರ್ವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಅಮ್ಮಾಡಿ ಗ್ರಾಮದ ಲೊರೆಟ್ರೊಪದವು ನಿವಾಸಿ ಪ್ರಜ್ವಲ್ ಶೆಟ್ಟಿ (29) ಅವರು ಪೊಲೀಸರಿಗೆ ದೂರು ನೀಡಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಂಡು, ಇತ್ತೀಚೆಗೆ ನಡೆದ ಯುವಕನ ಕೊಲೆ ಪ್ರಕರಣಕ್ಕೆ…

Read More

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ :ದ.ಕ ಜಿಲ್ಲಾಧ್ಯಕ್ಷರಾಗಿ ಲಯನ್ ಅನಿಲ್ ದಾಸ್,ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ನವೀನ ಮಜಲ್ ಆಯ್ಕೆ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾಗಿ ಶ್ರೀ ಲಯನ್ ಅನಿಲ್ ದಾಸ್ ರವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ನವೀನ ಮಜಲ್ ರವರು ಆವಿರೋದವಾಗಿ ಆಯ್ಕೆಯಾಗಿದ್ದಾರೆ.

Read More

ಬೆಳ್ತಂಗಡಿ: ಇನ್ಮುಂದೆ ಗಡಾಯಿಕಲ್ಲು ಪ್ರವಾಸಿತಾಣಕ್ಕೆ ನಿಷೇಧ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ಭೂಕುಸಿತ ಉಂಟಾಗಿ ಜೀವಹಾನಿ ಸಂಭವಿಸಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಜಿಲ್ಲೆಯ ಜಲಪಾತ, ಚಾರಣ ಪ್ರದೇಶಗಳಿಗೆ ನಿಷೇಧಿಸಲಾಗಿದೆ. ಬೆಳ್ತಂಗಡಿಯ ನರಸಿಂಹಗಡ ಕೋಟೆ, ಬೊಳ್ಳೆ, ಬಂಡಾಜೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶ ನಿಷೇಧಿಸಿ ಬೆಳ್ತಂಗಡಿ ವನ್ಯಜೀವಿ ವಿಭಾಗ ಆದೇಶ ನೀಡಿದೆ. ಗಡಾಯಿಕಲ್ಲಿಗೆ ಕೂಡಾ ಪ್ರವೇಶ ನಿರ್ಬಂಧವಾಗಿದೆ. ಪ್ರವಾಸಿಗರು ಮೋಜು ಮಸ್ತಿಯಲ್ಲಿ ಮೈಮರೆತು ಯಾವುದೇ ಅಪಾಯ ಸಂಭವಿಸದಂತೆ ಈ ಕ್ರಮ ಜರುಗಿಸಲಾಗಿದೆ.

Read More

ಬಂಟ್ವಾಳದ ಹಳೆಯ ಪ್ರಕರಣಕ್ಕೆ ಹೊಸ ಎಸ್ಪಿ ಬಂದ ಬೆನ್ನಲ್ಲೇ ಮರು ಜೀವ..!

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ 2024ರ ಡಿಸೆಂಬರ್ 29ರಂದು ಧಾರ್ಮಿಕ ಆಚರಣೆ ಮುಗಿಸಿ ಹಿಂತಿರುಗುತ್ತಿದ್ದ ಮುಸ್ಲಿಂ ಧರ್ಮಗುರುವಿನ ಮೇಲೆ ಕಲ್ಲು ತೂರಾಟ ನಡೆಸುವ ಮೂಲಕ ಕೊಲೆ ಯತ್ನ ನಡೆಸಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಉಪ್ಪಿನಂಗಡಿಯ ಸಿನಾನ್ ಪೈಝಿ ಎಂಬವರು ದಿನಾಂಕ 29.12.2024 ರಂದು ಮಧ್ಯಾಹ್ನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲಿನಲ್ಲಿ ಧಾರ್ಮಿಕ ಆಚರಣೆ ಮುಗಿಸಿ, ತಮ್ಮ ಬೈಕಿನಲ್ಲಿ ಉಪ್ಪಿನಂಗಡಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ…

Read More

ಮಂಗಳೂರು: ಕಾಂಗ್ರೆಸ್ ಪಕ್ಷದ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆಯ ನೋಟಿಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೋಮು ದಳ್ಳುರಿ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆಯ ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಶೆಟ್ಟಿಯಿಂದ ನೋಟಿಸ್ ಜಾರಿಗೊಳಿಸಲಾಗಿದ್ದು, ತಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಾಗಿ ಎಚ್ಚರಿಸಲಾಗಿದೆ. ಇನ್ನೂ ಶಿಸ್ತು ಉಲ್ಲಂಘನೆಯ ನೋಟಿಸ್…

Read More

ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕ್ರಮ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ

ಮಂಗಳೂರು: ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಅಪರಾಧ ಪ್ರಕರಣ ಮಾಡಿದ ಬಳಿಕ ಆರೋಪಿಗಳಿಗೆ ಆಶ್ರಯ ನೀಡುವುದು, ಆರ್ಥಿಕ ಸಹಾಯ ಮಾಡುವುದು, ಆಹಾರ, ಫೋನ್, ವಾಹನ ಇತ್ಯಾದಿ ರೂಪದಲ್ಲಿ ನೀಡಿದರೆ ಅವರನ್ನೂ ಕೂಡ ಆರೋಪಿಗಳನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೆಲವೊಂದು ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ….

Read More