admin

ವರ್ಕ್ ಫ್ರಮ್ ಹೋಮ್:‌ ಕರೆ ನಂಬಿ 12 ಲಕ್ಷ ಕಳೆದುಕೊಂಡರು..

ಮಂಗಳೂರು: ಮನೆಯಲ್ಲೇ ಕುಳಿತು ದಿನಕ್ಕೆ2-3 ಸಾವಿರ ರೂ. ಸಂಪಾದಿಸಬಹುದು ಎಂದು ಬಂದ ಕರೆಯನ್ನು ನಂಬಿ ವ್ಯಕ್ತಿಯೊಬ್ಬರು 12,15,012 ರೂ. ಕಳೆದುಕೊಂಡ ಘಟನೆ ನಡೆದಿದೆ. ದೂರುದಾರರಿಗೆ ಮಾ.30 ರಂದು ಕರೆ ಬಂದಿದ್ದು, ಕರೆ ಮಾಡಿದಾಕೆ ಪ್ರೀತಿ ಶರ್ಮಾ ಎಂದು ಪರಿಚಯಿಸಿಕೊಂಡು ದಿನಕ್ಕೆ ೨-೩ ಸಾವಿರ ರೂ. ಸಂಪಾದನೆ ಮಾಡಲು ಅವಕಾಶವಿದೆ. ಡಾಟಾ ಕ್ಲಿಕ್ ಎಂಬ ಸಂಸ್ಥೆಯಿಂದ ಈ ಕೆಲಸವನ್ನು ಮಾಡುವುದಾಗಿ ಹಾಗೂ ಇದು ಯೂನೋ ಕಾಯಿನ್ ಟೆಕ್ನಾಲಜಿ ಎಂಬ ಸಂಸ್ಥೆಯ ಸಹ ಸಂಸ್ಥೆ ಎಂದು ತಿಳಿಸಿದ್ದಾಳೆ. ಬಳಿಕ ಅವರ…

Read More

ಬೆಳ್ತಂಗಡಿ: ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ..! ಚಾಲಕ ಪರಾರಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನರ್ಸರಿ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಎ. 24ರಂದು ಸುಲ್ಕೇರಿ ನರ್ಸರಿ ಬಳಿ ನಡೆದಿದೆ. ಲಾರಿ ಚಾಲಕನ ದುಡುಕುತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ನಾರಾವಿ ಕಡೆಯಿಂದ ಬರುತ್ತಿದ್ದ ಕಾಯರ್ತಡ್ಕ ಗ್ರಾಮದ ಕಳಂಜ ಮರಕಡ ನಿವಾಸಿ ಗಣೇಶ್ ಗೌಡ (49ವ)ರವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಅಪಘಾತದಿಂದ ಗಣೇಶ್ ಗೌಡರ ವಾಹನ ಜಖಂಗೊಂಡಿದರ ಜೊತೆಗೆ ಗಾಯವಾಗಿದೆ ಎನ್ನಲಾಗಿದೆ. ಉಜಿರೆಯ ಖಾಸಗಿ…

Read More

ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ : ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಬೇಟೆ ಆರಂಭವಾಗಿದ್ದು, ಎಲ್‌ಒಸಿಯಲ್ಲಿ ರಾತ್ರಿಯಿಡೀ ಗುಂಡಿನ ಚಕಮಕಿ ಮುಂದುವರೆದಿದ್ದು, ಕುಲ್ಗಾಮ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ  ಇಬ್ಬರು ಭಯೋತ್ಪಾದಕರ ಬಂಧನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಥೋಕರ್ಪೋರಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಬಂಧಿಸಿವೆ. ಈ ಮಾಹಿತಿ ಪೊಲೀಸ್ ಮೂಲಗಳಿಂದ ಬಂದಿದೆ.

Read More

ಮಂಗಳೂರಿನಲ್ಲಿ ಪಾಕಿಸ್ಥಾನದ ಮೂವರು ವಿವಾಹಿತ ಮಹಿಳೆಯರು

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ. ಈ ಪೈಕಿ ಒಬ್ಬರು ನಗರದ ಫಳ್ನೀರ್, ಇನ್ನೊಬ್ಬರು ವಾಮಂಜೂರಿನಲ್ಲಿ ನೆಲೆಸಿದ್ದಾರೆ. ಇನ್ನೊಬ್ಬ ಮಹಿಳೆಯ ವಾಸಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಜಿಲ್ಲಾ…

Read More

ಪಹಲ್ಗಾಂ ಭಯೋತ್ಪಾದಕ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ವ್ಯಕ್ತಿಯ ಅರೆಸ್ಟ್..!!

ಮಂಗಳೂರು: ಹಿಂದಿನ ಅಪರಾಧ ಕೃತ್ಯವೊಂದನ್ನು ಉಲ್ಲೇಖಿಸಿ ಪಹಲ್ಗಾಂ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡಿದ್ದ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದ ಚೇತನ್ ಸಿಂಗ್ ಎಂಬಾತನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಈತ ಸಮರ್ಥಿಸಿಕೊಂಡಿದ್ದ.ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಇಂಥ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ನಿವಾಸಿ ಸತೀಶ್ ಕುಮಾರ್ ಎಂಬವರು…

Read More

ಎನ್ಕೌಂಟರ್ನಲ್ಲಿ ಎಲ್‌ಇಟಿ ಟಾಪ್ ಕಮಾಂಡರ್​ ಅಲ್ತಾಫ್ ಲಲ್ಲಿ ಫಿನಿಶ್..!!

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೋಯ್ಬಾ(ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆಗೀಡಾಗಿದ್ದಾನೆ. ಸೇನೆ ಮತ್ತು ಪೊಲೀಸರು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಜಂಟಿ ಕಾರ್ಯಾಚರಣೆಗೆ ಇಳಿದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಇದಕ್ಕೆ ಪ್ರತೀಯಾಗಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆಗೀಡಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ, ಉಗ್ರರನ್ನು ಸೆದೆಬಡಿಯುವ…

Read More

ಕಡಬ: ಬ್ರೈನ್ ಸ್ಟ್ರೋಕ್ ನಿಂದ ನಿಧನರಾದ ಖ್ಯಾತ ಕಬಡ್ಡಿ ಆಟಗಾರ

ಕಡಬ: ಕರಾವಳಿಯ ಹೆಸರಾಂತ ಆಟಗಾರ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರೋ ಕಬಡ್ಡಿಯಲ್ಲಿ ಲಕ್ಷಾಂತರ ಅಭಿಮಾನಿಗಳ ಗಮನ ಸೆಳೆದ ಕಡಬದ ಯುವ ಆಟಗಾರ ಕೋಕಿಲಾನಂದ ನಿಧನ ಹೊಂದಿದ್ದಾರೆ. ಬಡತನವಿದ್ದರೂ ಹೃದಯ ಶ್ರೀಮಂತಿಕೆ ಇದ್ದ ಇವರು ಕೆಲವು ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿ ಜೈಲಿಗೂ ಹೋಗಿ ಬಂದಿದ್ದರು. ಕಡಬ ನಿವಾಸಿಯಾಗಿದ್ದ ಇವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತಂದೆಗೆ ಹೃದಯದ ಖಾಯಿಲೆಯಿದ್ದು ತಾಯಿ ಕೂಡಾ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಪತ್ನಿ ಪಂಚಾಯತ್ ನಲ್ಲಿ ಮೂರು ದಿನ ಕೆಲಸ…

Read More

ಮಂಗಳೂರು: ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌..! ಪ್ರಕರಣ ದಾಖಲು

ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್…

Read More

ಮೂಡುಬಿದಿರೆ: ನಿಡ್ಡೋಡಿ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ

ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದವರು ಮರಳಿ ಬಂದಿರಲಿಲ್ಲ. ಅವರ ಅಣ್ಣ ತಿಮ್ಮಪ್ಪ ಮಡಿವಾಳ ಅವರು ತಂಗಿ ರೇವತಿ ಕಾಣೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ನೀಡಿದ್ದರು. ಸ್ಥಳೀಯ ಶುಂಠಿಲ ಪದವಿನ ನಿವಾಸಿಯಾದ ಶೇಖರ ಶೆಟ್ಟಿ ಅವರ ಮೇಲೆ…

Read More

ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಉಗ್ರರ ಮನೆಗಳು ಧ್ವಂಸ!

ಶ್ರೀನಗರ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ. ಹೌದು ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. 2018 ರಲ್ಲಿ ಆದಿಲ್ ಪಾಕಿಸ್ತಾನಕ್ಕೆ…

Read More