admin

ಮಂಗಳೂರು: ಜೋಡಿ ಕೊಲೆ ಪ್ರಕರಣ-ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳ ಕಾಸರಗೋಡಿನ ಚೆರ್ಕಳ ಎಂಬಲ್ಲಿನ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಇರ್ಷಾದ್ (24) ಹಾಗೂ ಸಫ್ವಾನ್ (24) ಶಿಕ್ಷೆಗೊಳಗಾದ ಆರೋಪಿಗಳು. ಇವರು ನಾಫೀರ್ ಮತ್ತು ಫಾಹಿಮ್ ಎಂಬವರನ್ನು ಕೊಲೆಗೈದಿದ್ದರು. ನಾಫೀರ್ ಮತ್ತು ಫಾಹಿಮ್ ಗೆಳೆಯರಾಗಿದ್ದರು. ನಾಫೀರ್ ವಿದೇಶದಿಂದ ಚಿನ್ನದ ಗಟ್ಟಿಗಳನ್ನು ತಂದಿದ್ದ. ಅವುಗಳನ್ನು ಮಾರಾಟ…

Read More

ಬಂಟ್ವಾಳ: ಅಂಗಡಿ ಬೀಗ ಮುರಿದು ಕಳ್ಳತನ- ಆರೋಪಿ ಅರೆಸ್ಟ್

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ. 11ರಂದು ರಾತ್ರಿ ಕಳ್ಳರು ಅಂಗಡಿಯ ಶಟರ್ ಗೆ ಅಳವಡಿಸಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್ ನಲ್ಲಿದ್ದ ನಗದನ್ನು ಕಳವುಗೈದ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2025 ಕಲಂ: 331(4) 305 ಬಿ.ಎನ್‌. ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆ ನಡೆಸಲಾಗಿ ಆರೋಪಿಯಾದ…

Read More

SHOCKING : ರಾಜ್ಯದಲ್ಲಿ ಒಂದೇ ವರ್ಷ 958 ನಕಲಿ ವೈದ್ಯರು ಪತ್ತೆ.

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಒಂದೇ ವರ್ಷದಲ್ಲೇ ಬರೋಬ್ಬರಿ 958 ಮಂದಿ ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಒಂದು ವರ್ಷದಲ್ಲಿ 958 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದು, ನಕಲಿ ವೈದ್ಯರ ಕ್ಲಿನಿಕ್‌ಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಆರೋಗ್ಯ ಇಲಾಖೆ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು….

Read More

2000 ರೂಪಾಯಿಗಿಂತ ಮೇಲ್ಪಟ್ಟ UPI ಪಾವತಿಗಳಿಗೆ ಜಿಎಸ್‌ಟಿ ಹಾಕಲಾಗುತ್ತಾ? ಕೇಂದ್ರದ ಸ್ಪಷ್ಟನೆ ಹೀಗಿದೆ

ನವದೆಹಲಿ: ಯುಪಿಐ ಪಾವತಿ 2000 ರೂಪಾಯಿಗಿಂತ ಮೇಲ್ಪಟ್ಟ ವಹಿವಾಟಿಗೆ ಜಿಎಸ್‌ಟಿ ಶುಲ್ಕ ವಿಧಿಸಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ವೆಬ್‌ಸೈಟ್‌ಗಳಲ್ಲಿ ಆಗುತ್ತಿರುವ ಪ್ರಚಾರ ಕುರಿತಂತೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.2000 ರೂಪಾಯಿಗಿಂತ ಮೇಲ್ಪಟ್ಟ ಯುಪಿಐ ಪಾವತಿಗೆ ಜಿಎಸ್‌ಟಿ ಶುಲ್ಕ ಕುರಿತು ಹರಿದಾಡುತ್ತಿರುವ ಸುದ್ದಿ ಕುರಿತಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಇದೊಂದು ಸುಳ್ಳು ಸುದ್ದಿಯಾಗಿದ್ದು, ಯಾವುದೇ ಆಧಾರರಹಿತ ಮಾಹಿತಿಯನ್ನು ನಂಬಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು…

Read More

ಉಳ್ಳಾಲ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಬಂಧಿತರು 4 ದಿನ ಪೊಲೀಸ್ ಕಸ್ಟಡಿಗೆ

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಸಂತ್ರಸ್ತೆ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಇಂದು ಯುವತಿಯ ಮೇಲೆ ಅತ್ಯಾಚಾರ ಎಸಗಲಾಗಿದೆಯಾ ಎಂಬ ವೈದ್ಯಕೀಯ ವರದಿ ಪೊಲೀಸರ ಕೈ ಸೇರಲಿದೆ. ಘಟನೆ ನಡೆದ 24 ಗಂಟೆಯೊಳಗೆ ಮೂಲ್ಕಿಯ ಆಟೋ ಚಾಲಕ ಪ್ರಭುರಾಜ್ (38), ಕುಂಪಲದ ಎಲೆಕ್ಟ್ರಿಷಿಯನ್ ಮಿಥುನ್ (30) ಮತ್ತು ಮಂಗಳೂರು ನಿವಾಸಿ ಮಣಿ (30)ಯನ್ನು ಪೊಲೀಸರು…

Read More

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವರ ಉತ್ಸವದ ವೇಳೆ ಮುರಿದುಬಿದ್ದ ರಥದ ಮೇಲ್ಭಾಗ

ಮುಲ್ಕಿ: ಇತಿಹಾಸ ಪ್ರಸಿದ್ದ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ನೆರವೇರಿದ್ದ ಬ್ರಹ್ಮರಥೋತ್ಸವದ ಸಂದರ್ಭ ದೇವರ ರಥ ಮುರಿದು ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40ರ ವೇಳೆಗೆ ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವ ಎಳೆಯುವ ವೇಳೆ ರಥದ ಚಕ್ರ ಹಾಗೂ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ಹಾಗೂ ರಥವನ್ನು ಎಳೆಯುತ್ತಿದ್ದ ಭಕ್ತರು ಪವಾಡಸದೃಷವಾಗಿ ಬಚಾವಾಗಿದ್ದಾರೆ. ಘಟನೆಯ ಬಳಿಕ ದೇವರ ಉತ್ಸವ ಮೂರ್ತಿಯನ್ನು ಚಂದ್ರ…

Read More

ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆ

ಕುಂದಾಪುರ : ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಮೇ 4ರಂದು ನಡೆಯಲಿರುವ ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ ಡಾ.ಅಣ್ಣಯ್ಯ ಕುಲಾಲ ಉಳ್ತೂರು ಆಯ್ಕೆಯಾಗಿದ್ದಾರೆ. ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟದ ಉಸಿರು, ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಣೂರು ಗೀತಾನಂದ ಫೌಂಡೇಷನ್, ಕೋಟತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಸಮ್ಮೇಳನಕ್ಕೆ ಸಹಕಾರ ನೀಡಲಿವೆ ಎಂದು ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಅಧ್ಯಕ್ಷ ಸತೀಶ ಬಾರಿಕೆರೆ,…

Read More

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್!! ಆಸ್ಪತ್ರೆಗೆ ದಾಖಲು

ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ…

Read More

ವಿಪರೀತ ಆನ್ಲೈನ್ ಗೇಮ್ ಚಟ: ಇಲಿ ಪಾಶಾಣ ಸೇವಿಸಿ ಯುವಕ ಸಾವು..!

ಭಟ್ಕಳ: ಆನ್ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕನೋರ್ವ ಜಿಗುಪ್ಸೆಗೊಳಗಾಗಿ ಪಾನಿಪುರಿಯೊಳಗೆ ಇಲಿ ಪಾಶಾಣ ಸೇರಿಸಿ ತಿಂದು ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಭಟ್ಕಳದ ನಿವಾಸಿ ಹತ್ತೊಂಭತ್ತು ವರ್ಷದ ಮಹಮ್ಮದ್ ನಿಹಾಲ್ ಮೃತ ದುರ್ದೈವಿ. ಈತ ಕಳೆದ ಮೂರು ವರ್ಷಗಳಿಂದ ವಿಪರೀತವಾಗಿ ಮೊಬೈಲ್ ಚಟ ಬೆಳೆಸಿಕೊಂಡಿದ್ದ. ನಾನಾ ರೀತಿಯ ಆನ್ಲೈನ್ ಗೇಮ್ ಆಡುವುದನ್ನು ಕೂಡಾ ರೂಢಿಸಿಕೊಂಡಿದ್ದ. ಹಣ ಹೂಡಿಕೆ ಮಾಡಿ ಆಡುತ್ತಿದ್ದ ಆಟದಲ್ಲಿ ಈತ ಹಣ ಕಳೆದುಕೊಂಡಿದ್ದ. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಆತ ಪಾನಿಪುರಿ ಜೊತೆಗೆ…

Read More

ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಾಗುತ್ತಿದೆ- ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ಸಿಎಂ ಆದ ಮೇಲೆ ಲವ್ ಜಿಹಾದ್ ಹೆಚ್ಚಾಗುತ್ತಿದೆ. ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ನ ಹಲ್ಕಟ್ ರಾಜಕಾರಣಕ್ಕೆ ಕಾರ್ಯಕರ್ತರು ಜೀವ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಪಕ್ಷ,…

Read More