admin

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ- ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನುಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್‌ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂದು ಗುರುತಿಸಲಾಗಿದೆ. ಆರೋಪಿಗಳು ತಲವಾರು ಹಿಡಿದಿರುವ ಫೋಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು ಆರೋಪಿಗಳು ತಲವಾರು ಹಿಡಿದು ಫೋಟೋ…

Read More

ಇನ್ಮುಂದೆ ಉಡುಪಿಯಲ್ಲಿ ಪ್ರಿ ವೆಡ್ಡಿಂಗ್ ಪೋಸ್ಟ್ ವೆಡ್ಡಿಂಗ್ ಶೂಟ್ ಮಾಡುವಂತಿಲ್ಲ ..!

ಉಡುಪಿ : ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುನ್ನ ಪ್ರಿ ವೆಡ್ಡಿಂಗ್ ಶೂಟ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇವಸ್ಥಾನದ ಸೈಡ್‌ನಲ್ಲಿ ಫೋಟೋಶೂಟ್‌ ಮಾಡುವುದು ಹೆಚ್ಚಾಗುತ್ತಿದ್ದು, ಪ್ರಿ ವೆಡ್ಡಿಂಗ್ ಶೂಟ್ ಮಾಡುವುದಕ್ಕೆ ಕೆಲವೊಂದು ಧಾರ್ಮಿಕ ಕ್ಷೇತ್ರಗಳಲ್ಲಿ ವಿರೋಧ ಕೇಳಿ ಬರುತ್ತಿದೆ. ಇದೀಗ ಅಂತೆಯೇ ಉಡುಪಿಯ ಕೃಷ್ಣ ಮಠ ರಥ ಬೀದಿಯಲ್ಲಿ ಫೋಟೋಶೂಟ್ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಉಡುಪಿಯ ಕೃಷ್ಣ ಮಠವು ಒಂದು ಕಡೆ ಧಾರ್ಮಿಕತೆ ಆಚರಣೆ ನಡೆಯುವ ಸ್ಥಳವಾಗಿ ಗುರುತಿಸಿಕೊಂಡಿದೆ. ಆದರೆ ಅದೇ ಊರಿನ ಮತ್ತೊಂದೆಡೆ ವಿವಿಧ ಊರುಗಳಿಂದ ಬರುವ…

Read More

ಉಡುಪಿ : ಕಳವಾಗಿದ್ದ 27 ಮೊಬೈಲ್‌ಗಳು ವಾರೀಸುದಾರರಿಗೆ ಹಸ್ತಾಂತರ

ಉಡುಪಿ: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೂರು ತಿಂಗಳ ಅಂತರದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಒಟ್ಟು 27 ಮೊಬೈಲ್‌ಗಳನ್ನು ವಾರೀಸುದಾರರಿಗೆ ಹಸ್ತಾಂತರಿಸಲಾಯಿತು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಾಣೆಯಾದ ದೂರುಗಳನ್ನು ಸ್ವೀಕರಿಸಿದ್ದು, ನಂತರ ಆ ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ ಬ್ಲಾಕ್ ಮಾಡಲಾಗಿತ್ತು. 2025ನೇ ಸಾಲಿನಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 32 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ 4.5ಲಕ್ಷ ರೂ. ಎಂದು…

Read More

ಚೆಕ್‌ಬೌನ್ಸ್‌ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್​ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ…

Read More

ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಸಾವು..!

ಬಂಟ್ವಾಳ: ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಉಮರಗಿ ಶರಣಪ್ಪ(57) ಮೃತಪಟ್ಟವರಾಗಿದ್ದಾರೆ. ಬಂಟ್ವಾಳ ತಾಲೂಕಿನ ವಿವಿಧೆಡೆಯ ಸುಮಾರು 24 ಜನ ಮಂಗಳವಾರ ಮಧ್ಯಾಹ್ನದ ರೈಲಿನಲ್ಲಿ ಶಬರಿಮಲೆ ಯಾತ್ರೆಗೆ ತೆರಳಿದ್ದು, ಬುಧವಾರ ಮುಂಜಾನೆ ದೇವರ ದರ್ಶನಕ್ಕೆ ತೆರಳಲು ಹೋಗುತ್ತಿದ್ದಾಗ ಪಂಬ ಸನ್ನಿಧಿಯಲ್ಲಿ…

Read More

ಮಂಗಳೂರು : ಚೂರಿಯಿಂದ ಇರಿದು ಕೊಲೆಗೈದ ಪ್ರಕರಣ – ಮೂವರು ಆರೋಪಿಗಳಿಗೆ ಶಿಕ್ಷೆ

ಮಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನದ ಗಟ್ಟಿ ಮಾರಾಟದಲ್ಲಿ ತಕರಾರು ನಡೆದು ಇಬ್ಬರನ್ನು ಉಪಾಯದಿಂದ ಕರೆಸಿ ಮಲಗಿದಲ್ಲಿಗೆ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ ನಿವಾಸಿ ಎ.ಮುಹಮ್ಮದ್ ಇರ್ಷಾದ್ (35), ಎ.ಮುಹಮ್ಮದ್ ಸಫ್ವಾನ್ (35) ಶಿಕ್ಷೆಗೊಳಗಾದ ಅಪರಾಧಿಗಳು. ನಾಫೀರ್ ಹಾಗೂ ಪಹೀಮ್…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರಿನ ಡಾ. ಎನ್ ಎಸ್ ಎ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಇವರು ಅಳಪೆ ನಿವಾಸಿ.ಕುಲಶೇಕರ ಶ್ರೀ ವೀರನಾರಾಯಣ ದೇವಸ್ಥಾನದ ವಿಸ್ವಸ್ಥರಾದ ರಾಜೇಶ್ ಕುಲಾಲ್ ಮತ್ತು ಸುನೀತ ಆರ್ ಕುಲಾಲ್ದಂಪತಿಯ ಸುಪುತ್ರಿ.

Read More

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

ಹೈದರಾಬಾದ್‌: ಹೈದರಾಬಾದ್‌ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್‌ ಮುಜಾಹಿದಿನ್‌ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ ಅವರ ಪೀಠ ಭಯೋತ್ಪಾದಕರು ಗಲ್ಲು ಶಿಕ್ಷೆಯ ವಿರುದ್ಧ ಸಲ್ಲಿಸಿದ್ದ…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ: ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಿ.ಎಫ್ಎ. ಎಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರೇಯ ಪ್ರೇಮಾನಂದ ಕುಲಾಲ್ ಕೊಡಿಕಲ್ ಅವರು ವಿಜ್ಞಾನ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಡಿಕಲ್ ನಿವಾಸಿ. ಶ್ರೀ ವೀರನಾರಾಯಣ ಸೇವಾ ಟ್ರಸ್ಟಿನ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಮತ್ತು ಸ್ರವಂತಿ ಪಿ ಕುಲಾಲ್ ದಂಪತಿಯ ಸುಪುತ್ರಿ.

Read More

ಮೂಡುಬಿದಿರೆ: ಸರಕಳ್ಳತನ ಪ್ರಕರಣ- ಆರೋಪಿಯ ಬಂಧನ

ಮಂಗಳೂರು: ಮೂಡುಬಿದಿರೆಯ ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ ಆರೋಪಿ ಪ್ರಶಾಂತ್ ಸಾಲಿಯನ್ ಯಾನೆ ಪಚ್ಚು (34) ಬಂಧಿತ ಆರೋಪಿ. ಆರೋಪಿ ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ. ಆಗಬಹುದು…

Read More