admin

ಲೋಕಸಭೆಯಲ್ಲಿ `ವಕ್ಫ್ ಮಸೂದೆ’ ಅಂಗೀಕಾರ : ಇಂದೇ ರಾಜ್ಯಸಭೆಯಲ್ಲೂ ಮಂಡನೆ

ನವದೆಹಲಿ : ಸರ್ಕಾರ ಮತ್ತು ವಿರೋಧ ಪಕ್ಷದ ನಡುವಿನ ಬಿಸಿ ಚರ್ಚೆಯ ನಂತರ ಬುಧವಾರ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಲಾಯಿತು. ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಮಸೂದೆಯನ್ನು ಅಂಗೀಕರಿಸಲು ಸದನವು ಮಧ್ಯರಾತ್ರಿಯ ನಂತರವೂ ಮುಂದುವರಿಯಿತು. ಮಸೂದೆಯು ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷಗಳು ಎತ್ತಿದ ಆಕ್ಷೇಪಣೆಗಳು ಸೇರಿದಂತೆ ಪ್ರತಿಯೊಂದು ಆಕ್ಷೇಪಣೆಗೂ ಸರ್ಕಾರ ಪ್ರತಿಕ್ರಿಯಿಸಿತು ಮತ್ತು ಆತಂಕಗಳನ್ನು ನಿವಾರಿಸಿತು. ಈ ಮಸೂದೆಯನ್ನು ಮುಸ್ಲಿಮರ ಮಸೀದಿಗಳು ಮತ್ತು ದರ್ಗಾಗಳನ್ನು…

Read More

ಐಸ್ ಕ್ರೀಮ್ ತಯಾರಿಸಲು `ಡಿಟರ್ಜೆಂಟ್ ಪೌಡರ್’ ಬಳಕೆ.!

ಬೆಂಗಳೂರು: ಬೆಂಗಳೂರಿನಲ್ಲಿ ಐಸ್ ಕ್ರೀಂ ಮತ್ತು ತಂಪು ಪಾನೀಯಗಳ ತಯಾರಿಕೆಯಲ್ಲಿ ಅಪಾಯಕಾರಿ ಉಲ್ಲಂಘನೆಗಳು ನಡೆದಿವೆ ಎಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (Karnataka’s Food Safety and Drug Administration Department -FDA) ನಡೆಸಿದ ಆಹಾರ ಸುರಕ್ಷತಾ ತನಿಖೆಯಿಂದ ತಿಳಿದುಬಂದಿದೆ. ಹಲವಾರು ಉತ್ಪನ್ನಗಳಲ್ಲಿ ಡಿಟರ್ಜೆಂಟ್ ಪೌಡರ್ ಮತ್ತು ಫಾಸ್ಪರಿಕ್ ಆಮ್ಲದಂತಹ ಅಪಾಯಕಾರಿ ಪದಾರ್ಥಗಳು ಇರುವುದು ಗಂಭೀರ ಆರೋಗ್ಯ ಕಳವಳವನ್ನುಂಟುಮಾಡಿದೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಎಫ್‌ಡಿಎ ತಪಾಸಣೆಯಿಂದ ಪತ್ತೆ 220 ಚಿಲ್ಲರೆ ಮಾರಾಟ ಮಳಿಗೆಗಳ…

Read More

ಪ್ರತಿಪಕ್ಷಗಳ ಸಂಘರ್ಷದ ನಡುವೆಯೇ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ:ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 1995 ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಮಂಡಿಸಿದರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ತಮ್ಮ ಸಂಸದರ ಉಪಸ್ಥಿತಿಯನ್ನು ಮತದಾನಕ್ಕೆ ಖಚಿತಪಡಿಸಿಕೊಳ್ಳಲು ವಿಪ್ಗಳನ್ನು ಹೊರಡಿಸಿದವು, ಇದು ಶಾಸನದ ಮಹತ್ವವನ್ನು ಸೂಚಿಸುತ್ತದೆ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮತ್ತು ಪ್ರತಿಪಕ್ಷ ಬಿಜೆಪಿ ಬಣದ ನಡುವಿನ ಮುಖಾಮುಖಿಯ ಮಧ್ಯೆ,…

Read More

ಉಡುಪಿ: ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆಯಾಗಲು ಯತ್ನಿಸಿರುವ ಮುಹಮ್ಮದ್ ಅಕ್ರಮ್ಗೆ ಪಿಎಫ್ಐ ನಂಟು – ಎನ್.ಐ.ಎ ತನಿಖೆಗೆ VHP ಆಗ್ರಹ

ಉಡುಪಿಯ ಜಿನಾ ಎಂಬ ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆಯಾಗಲು ಯತ್ನಿಸಿರುವ ಮುಹಮ್ಮದ್ ಅಕ್ರಮ್ಗೆ ಪಿಎಫ್ಐ ನಂಟಿದ್ದು, ಈ ಕುರಿತು ಕೇಂದ್ರ ಸರಕಾರ ಎನ್ಐಎ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವತಿಯು 9ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡು ಲವ್ ಜಿಹಾದ್ ಬಲೆಗೆ ಬೀಳಿಸಿ ಕೊಂಡು, ಆಶ್ಲೀಲ ಪೋಟೊಗಳನ್ನು ಚಿತ್ರಿಸಿ ಬೆದರಿಸಿದ್ದನು. ಆಗ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಾದ…

Read More

ಬೆಳ್ತಂಗಡಿ: ಕಾಡಿನಲ್ಲಿ ಶಿಶು ಪತ್ತೆ ಪ್ರಕರಣ- ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಶಿಶುವನ್ನು ಪುತ್ತೂರಿನ ನೆಲ್ಲಿಕಟ್ಟೆಯ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರಕ್ಕೆ ಆರೈಕೆಗಾಗಿ ದಾಖಲಿಸಲಾಗಿದೆ. ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ…

Read More

ಸೆಲ್ಫಿ ವಿಡಿಯೋ ಮಾಡಿ ಅತ್ತೆ, ನಾದಿನಿ, ಮಗಳ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತು ನಾದಿನಿ ಸಿಂಧು(24) ಮೇಲೆ ಖಾಸಗಿ ಶಾಲೆಯ ವಾಹನ ಚಾಲಕ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಘಟನೆಯಲ್ಲಿ ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹತ್ಯೆ ಬಳಿಕ ರತ್ನಾಕರ ತಾನೂ ಗುಂಡು…

Read More

ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಪ್ರಥಮ- ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಭಾಜರಾಗಿದ್ದು. ಲಯನ್ಸ್ ಕ್ಲಬ್ ಪಂಪ್ ವೆಲ್ ಕಲ್ಪವ್ರಕ್ಷಕ್ಕೆ ಲಯನ್ಸ್ ಗವರ್ನರ್ ಭಾರತಿ ಬಿ.ಎಂ ಇವರ ಭೇಟಿ ಸಂದರ್ಭದಲ್ಲಿ ಸತೀಶ್ ಇರಾ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ ಎಮ್, ಕ್ಲಬ್ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾರ್ಯದರ್ಶಿ ರಮ್ಯಾ ಶೆಟ್ಟಿ, ಕೋಶಾಧಿಕಾರಿ ವೀಣಾ ಮಂಗಳ,…

Read More

ಮಂಗಳೂರು: ಮೂಡ ಆಯುಕ್ತರಿಗೆ ಜೀವ ಬೆದರಿಕೆ- ಪ್ರಕರಣ ದಾಖಲು

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತರಿಗೆ ಇಬ್ಬರು ಬ್ರೋಕರ್‌ಗಳು ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೂಡಾ ಆಯುಕ್ತೆ ಉರ್ವ ಠಾಣೆಗೆ ದೂರು ನೀಡಿದ್ದಾರೆ. ಜನವರಿ 7 ರಂದು ಸಿಬ್ಬಂದಿ ಊಟಕ್ಕೆ ಹೋದ ಸಮಯದಲ್ಲಿ ಮುಡಾ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಮೇಜಿನ ಮೇಲಿದ್ದ ಕಡತಗಳನ್ನು ವಿರೂಪಗೊಳಿಸಿದ ಆರೋಪ, ಅಲ್ಲದೆ ಮೂಡಾದಲ್ಲಿ ನಡೆದಿರುವ ಕೆಲವು ವಿದ್ಯಾಮಾನ, ಮುಡಾ ಕಚೇರಿಯಲ್ಲಿನ ಏಕ-ಸ್ಥಳ ಅನುಮೋದನೆಗಳು ಮತ್ತು ಇತರ ಕೆಲಸಗಳಿಗೆ ಸಂಬಂಧಿಸಿದ…

Read More

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈಗೆ ಗೇಟ್ ಪಾಸ್ ಸಾಧ್ಯತೆ…?

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪಕ್ಷಕ್ಕೆ ಒಂದು ಇಮೇಜ್ ತಂದು ಕೊಟ್ಟಿದ್ದ ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಸಾದ್ಯತೆ ಇದೆ ಎಂದು ವರದಿಯಾಗಿದೆ. 2026ರಲ್ಲಿ ತಮಿಳು ನಾಡಿನಲ್ಲಿ ಚುನಾವಣೆ ಹಿನ್ನಲೆ ಜಾತಿ ಲೆಕ್ಕಾಚಾರದ ವಿಚಾರವಾಗಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2026ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುವ ಸಾಧ್ಯತೆ ಹಿನ್ನಲೆ ಬಿಜೆಪಿ…

Read More

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು  ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ…

Read More