ಕೋರ್ಟ್ ಆದೇಶವನ್ನು ಪಾಲಿಸದೆ ಮಠದ ಜಾಗ ತೆರವು: ವಕ್ಫ್ ಅಧಿಕಾರಿ ಅಮಾನತು
ಚಿಕ್ಕಮಗಳೂರು: ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಸತ್ತಾರ್ ಷಾ ಹುಸೇನ್ ಅವರನ್ನು ಅಮಾನತುಗೊಳಿಸಲಾಗಿದೆ. ಇದಕ್ಕೆ ಕಾರಣ, ಕೋರ್ಟ್ ಆದೇಶವನ್ನು ಸ್ಥಳೀಯ ಆಡಳಿತಕ್ಕೆ ತಿಳಿಸದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವುಗೊಳಿಸಿದ ಪ್ರಕರಣ. ಈ ಘಟನೆಗೆ ಸಂಬಂಧಿಸಿದಂತೆ ವಕ್ಫ್ ಅಧಿಕಾರಿ ಸೇರಿದಂತೆ 14 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಸಿಇಓ ಜೀಲಾನಿ ಮೊಕಾಶಿ ಅವರು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಘಟನೆಯ ನೆಪದಲ್ಲಿ, ಮುಸ್ಲಿಂ ಸಮುದಾಯದವರು ಮೇ 5ರಂದು ಚಿಕ್ಕಮಗಳೂರು…

