admin

ಬಜೆಟ್‌ ನಲ್ಲಿ ಪುತ್ತೂರಿಗೆ ಮೆಡಿಕಲ್‌ ಕಾಲೇಜ್‌ ಘೋಷಣೆ – ಅಶೋಕ್‌ ರೈಯವರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಕಾರ್ಯಕರ್ತರು‌

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ ನಲ್ಲಿ ಹೊಸ ಮೆಡಿಕಲ್‌ ಕಾಲೇಜ್‌ ಸ್ಥಾಪಿಸಲಾಗುವುದೆಂದು ಘೋಷಿಸುತ್ತಲೆ ಪುತ್ತೂರಿಗರ ಹರ್ಷಕ್ಕೆ ಎಲ್ಲೆ ಇಲ್ಲದಂತಾಗಿದೆ. ಇಂದಿನ ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜ್‌ ಘೋಷಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮೆಡಿಕಲ್‌ ಕಾಲೇಜ್‌ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿದ್ದರು. ಅವರ ಜತೆ ಬ್ಯಾಂಡ್‌ ವಾದನದ ತಂಡವು ತೆರಳಿತ್ತು. ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜ್‌ ಘೋಷಣೆಯಾಗುತ್ತಲೇ, ಪುತ್ತೂರಿನಿಂದ ತೆರಳಿದ ನೂರಾರು ಮಂದಿ ವಿಧಾನ ಸೌಧದ ಮುಂಭಾಗ ಕುಣಿದು ಕುಪ್ಪಳಿಸಿದರು. ಇದೆ ವೇಳೆ ಶಾಸಕ ಅಶೋಕ್‌ ರೈಯವರು…

Read More

ದಿಗಂತ್ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ನೀಡಲಿ : ಶರಣ್ ಪಂಪ್ ವೆಲ್

ಮಂಗಳೂರು: ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವಿ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರಾಜ್ಯಸರಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳಾಗಿದೆ ಅಲ್ಲದೆ ಫರಂಗಿಪೇಟೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಿದೆ. ಇದು ಪೋಲಿಸರ ವೈಫಲ್ಯವೋ ಗೊತ್ತಿಲ್ಲ. ಇದು ಬಹಳ ಗಂಭೀರ ಮತ್ತು ಆಘಾತಕಾರಿ ವಿಚಾರ ಆಗಿದೆ ಎಂದರು. ಸದ್ಯ ಈ ಪ್ರಕರಣವನ್ನು…

Read More

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್‌: ಇನ್ಮುಂದೆ ವಾರದ 6 ದಿನವೂ ಸಿಗಲಿದೆ ಮೊಟ್ಟೆ-ಬಾಳೆ ಹಣ್ಣು

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್‌ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್‌ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ…

Read More

ಉಡುಪಿ: ಮೊಬೈಲ್ ಕಸಿದುಕೊಂಡಿದ್ದಕ್ಕೆ ತಾಯಿ ಮೇಲೆ ಕೋಪ-ವಿದ್ಯಾರ್ಥಿನಿ ಆತ್ಮಹತ್ಯೆ!

ಉಡುಪಿ: ಮೊಬೈಲ್ ಕೊಡಲಿಲ್ಲ ಎಂಬ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಎಂಬವವರ ಪುತ್ರಿ ದಿಶಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮೊಬೈಲ್ ಹಿಡಿದುಕೊಂಡು ಕುಳಿತಿದ್ದ ಹಿನ್ನಲೆ ದಿಶಾಳ ತಾಯಿ ಗದರಿಸಿದ್ದು, ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಇರುವುದನ್ನು…

Read More

ಬಂಟ್ವಾಳ: ಹೈಕೋರ್ಟ್‌ ಮೆಟ್ಟಿಲೇರಿದ ಫರಂಗಿಪೇಟೆ ವಿದ್ಯಾರ್ಥಿ ದಿಗಂತ್‌ ನಾಪತ್ತೆ ಪ್ರಕರಣ

ಬಂಟ್ವಾಳ: ದೇವಸ್ಥಾನಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿ ಮೆನಯಿಂದ ಹೊರಟ ಫರಂಗಿಪೇಟೆಯ ಪಿಯು ವಿದ್ಯಾರ್ಥಿ ದಿಗಂತ್‌ ನಾಪತ್ತೆಯಾದ ಬಗ್ಗೆ ಫೆ.25 ರಂದು ಬೆಳಕಿಗೆ ಬಂದಿತ್ತು. ಇಷ್ಟು ದಿನಗಳಾದರೂ ಯಾವುದೇ ಸುಳಿವು ಸಿಗದಿರುವುದು ಎಲ್ಲೆಡೆ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿ ನಾಪತ್ತೆಯನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಕಳೆದ ಶನಿವಾರ ಬಂದ್‌ಗೆ ಕರೆ ನೀಡಿದ್ದವು. ನಾಪತ್ತೆಯಾದ ದಿಗಂತ್ ಹುಡುಕಾಟಕ್ಕೆ 7 ಪೊಲೀಸ್ ತಂಡ ರಚನೆ ಮಾಡಲಾಗಿದ್ದು, ಈ ಪ್ರಕರಣದ ಬಗ್ಗೆ ಶೂನ್ಯ ವೇಳೆಯಲ್ಲಿ ಸ್ಪೀಕರ್ ಯು.ಟಿ ಖಾದರ್…

Read More

ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್‌ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್

ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್…

Read More

ಉಡುಪಿ: ಪೊಲೀಸರ ಕಾರ್ಯಾಚರಣೆ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌..!

ಉಡುಪಿ: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಕಾರಿನಲ್ಲಿದ್ದ ಆತನ ಗೆಳತಿ ಸುಜೈನ್‌ (25) ಳನ್ನು ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆಕೆಯನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಬಂಧಿತೆ ಇಸಾಕ್ ನ ಗೆಳತಿ ಸುಜೈನ್ ಎಂದು ಗುರುತಿಸಲಾಗಿದೆ. ಕೇರಳ ಮೂಲಜ ಸುಜೈನ್ ಹಲವು ವರ್ಷಗಳಿಂದ ಉಡುಪಿ ಯಲ್ಲೇ ನೆಲೆಸಿದ್ದಳು. ಆಕೆಯ…

Read More

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಆಟೊರಿಕ್ಷಾದಲ್ಲಿ ಎಂಡಿಎಂಎ ಮಾರುತ್ತಿದ್ದ ಆರೋಪಿ ಅರೆಸ್ಟ್ 

ಮಂಗಳೂರು: ಆಟೊರಿಕ್ಷಾವೊಂದರಲ್ಲಿ  ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೊರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32)…

Read More

ವಿಟ್ಲ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಆಟೋ ರಿಕ್ಷಾ..!

ವಿಟ್ಲ: ಚಲಿಸುತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ವಿಟ್ಲ ಸಮೀಪದ ವೀರಕಂಭ ಗ್ರಾಮದ ಮಜ್ಜೋಣಿಯಲ್ಲಿ ನಡೆದಿದೆ. ಪುತ್ತೂರಿನಲ್ಲಿ ಕುಟುಂಬದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿ ಕಲ್ಲಡ್ಕ ಕಡೆ ತೆರಳುತ್ತಿದ ಆಟೋ ರಿಕ್ಷಾ ಮಜ್ಜೋಣಿ ಎಂಬಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ ಸೇರಿದಂತೆ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Read More

ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ..!!

ಉಡುಪಿ: ಇಲ್ಲಿನ ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೂಡುಬೆಳ್ಳೆಯ ಯುವಕ ಫೆಬ್ರವರಿ 27 ರಿಂದ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಫೆಬ್ರವರಿ 27 ರಂದು ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದ ಯುವಕ ಜಯಪ್ರಕಾಶ್ (26) ಆರು ದಿನ ಕಳೆದರೂ ಮನೆಗೆ ಹಿಂತಿರುಗಿಲ್ಲ. ಈ ಬಗ್ಗೆ ಆತನ ಕುಟುಂಬವು ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

Read More