admin

ಖ್ಯಾತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಕ್ಷೇತ್ರಕ್ಕೆ ಭೇಟಿ

ಉಡುಪಿ: ಖ್ಯಾತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಗದ್ದುಗೆ ಪ್ರತಿಷ್ಠೆಯ ಸಂದರ್ಭದಲ್ಲಿ ದೇವಾಲಯಕ್ಕೆ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆ ಭಾರತ ಟಿ -20 ತಂಡದ ಕ್ಯಾಪ್ಟನ್ ಆಗಮಿಸಿದರು. ಈ ಹಿಂದೆಯೂ ಕ್ಷೇತ್ರಕ್ಕೆ ಬಂದು ದೇಗುಲಕ್ಕೆ ಕಂಬವನ್ನು ಸೇವಾ ರೂಪದಲ್ಲಿ ದಂಪತಿ ಕೊಟ್ಟಿದ್ದರು. ಸೂರ್ಯ ಕುಮಾರ್ ಯಾದವ್ ಪತ್ನಿ ಕರಾವಳಿ ಮೂಲದವರು. ನಿರ್ಮಾಣ ಹಂತದಲ್ಲಿದ್ದ ಕಾಪು ಮಾರಿಯಮ್ಮನ ಗುಡಿಯನ್ನು ಕಂಡು ಸೂರ್ಯ ಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದರು. ಬ್ರಹ್ಮಕಲಶೋತ್ಸವದ ವೇಳೆ ದೇಗುಲಕ್ಕೆ ಬರುವುದಾಗಿ ಯಾದವ್ ಹೇಳಿದ್ದರು. ಟಿ…

Read More

ಬೆಳ್ತಂಗಡಿ: ನವವಿವಾಹಿತೆ ಆತ್ಮಹತ್ಯೆ..!! ಸಾವಿನ ಸುತ್ತ ಅನುಮಾನದ ಹುತ್ತ

ಬೆಳ್ತಂಗಡಿ: ಕಣಿಯೂರು ನಿವಾಸಿ ಮತ್ತು ನವವಿವಾಹಿತೆ ಪೂಜಾಶ್ರೀ (23) ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ ಮೂಲತ: ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ಮನೆಯ ವಾರಿಜ ಮತ್ತು ಸೇಸಪ್ಪ ಪೂಜಾರಿ ದಂಪತಿಯ ಪುತ್ರಿ. ಅವರು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಪೂಜಾಶ್ರೀ ಕೆಲಸ ಹುಡುಕುತ್ತಿದ್ದರು ಎಂದು ತಿಳಿದುಬಂದಿದೆ. ಇದೇ ನೆಪದಲ್ಲಿ ಪತಿ ಪ್ರಕಾಶ್ ಅವರು ಪೂಜಾಶ್ರೀಯನ್ನು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕಳುಹಿಸಿದ್ದರು….

Read More

ಡ್ರ್ಯಾಗನ್ ಹಣ್ಣಿನ ಆರೋಗ್ಯ ಪ್ರಯೋಜನಗಳು..!

ಡ್ರ್ಯಾಗನ್ ಹಣ್ಣನ್ನ ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಆರೋಗ್ಯವಾಗಿರಲು ಬಯಸುವವರು ನಿಯಮಿತವಾಗಿ ಈ ಹಣ್ಣನ್ನ ತಿನ್ನಬೇಕು. ಡ್ರ್ಯಾಗನ್ ಹಣ್ಣು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ದೊಡ್ಡ ಪ್ರಮಾಣದ ಫೈಬರ್ ಜೊತೆಗೆ ಇದು ಫೈಟೊನ್ಯೂಟ್ರಿಯೆಂಟ್‌’ಗಳು, ವಿಟಮಿನ್‌’ಗಳು, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಕ್ಯಾರೋಟಿನ್ ಮತ್ತು ಪ್ರೋಟೀನ್‌’ಗಳಲ್ಲಿ ಸಮೃದ್ಧವಾಗಿದೆ. ಈ ಡ್ರ್ಯಾಗನ್ ಹಣ್ಣು ಮಧುಮೇಹ, ಕ್ಯಾನ್ಸರ್, ಡೆಂಗ್ಯೂ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಹಾಗಾದ್ರೆ, ಈ ಡ್ರ್ಯಾಗನ್ ಫ್ರೂಟ್ ಮಧುಮೇಹವನ್ನ ಹೇಗೆ ನಿಯಂತ್ರಿಸುತ್ತದೆ ಎಂಬುದನ್ನ ತಿಳಿಯೋಣ. ಡ್ರ್ಯಾಗನ್‌ ಫ್ರೂಟ್ ಪೋಷಕಾಂಶಗಳ…

Read More

ರಾಜ್ಯದಲ್ಲಿ ಹಕ್ಕಿಜ್ವರ ಭೀತಿ : ಕೋಳಿಮಾಂಸದ ಬೆಲೆ 200 ರೂ.ಗೆ ಇಳಿಕೆ

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿಂದ ಕೆಲವು ಕಡೆಗಳಲ್ಲಿ ಜನರು ಚಿಕನ್‌ ತಿನ್ನಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಚಿಕನ್‌ ಬೆಲೆ ಇಳಿಕೆ ಆಗಿದ್ದು, ಒಂದಷ್ಟು ಜನ ಯಾವುದಕ್ಕೂ ಹೆದರದೆ ಖರೀದಿಗೆ ಮುಗಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 70 ರೂ. ಚಿಕನ್‌ ರೇಟ್‌ ಕಡಿಮೆಯಾಗಿದ್ದು, ಮಟನ್‌ ಗೆ ಫುಲ್‌ ಡಿಮ್ಯಾಂಡ್‌ ಬಂದಿದೆ. 270 ರೂ. ಇದ್ದ ಚಿಕನ್‌ ದರ ಇದೀಗ 200 ರೂ. ತಲುಪಿದೆ. ಗ್ರಾಮಾಂತರದಲ್ಲಿ ಬೆಲೆ ಪ್ರತಿ ಕೇಜಿಗೆ 240 ರೂ. ರಿಂದ180ರೂ.ಗೆ ಇಳಿಕೆ ಕಂಡಿದೆ.

Read More

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ಗೆ ಆಟೋ ರಿಕ್ಷಾ ಡಿಕ್ಕಿ; ಇಬ್ಬರು ಸಾವು

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕ…

Read More

ಪಾಸ್‌ಪೋರ್ಟ್ ಮಾಡಿಸಲು ಇನ್ಮುಂದೆ ಜನನ ಪ್ರಮಾಣಪತ್ರ ಕಡ್ಡಾಯ..!

ಭಾರತದಲ್ಲಿ ಪಾಸ್‌ಪೋರ್ಟ್ ವಿದೇಶ ಪ್ರವಾಸಕ್ಕಾಗಿ ಪ್ರಮುಖ ದಾಖಲೆಯಾಗಿದೆ. ಇದು ಇಲ್ಲದೆ, ನೀವು ವೀಸಾಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ನೀವು ಪಾಸ್‌ಪೋರ್ಟ್ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ವಿದೇಶಾಂಗ ಸಚಿವಾಲಯ ಫೆ. 24ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ಈ ಕುರಿತು ಆದೇಶವನ್ನು ಹೊರಡಿಸಿದೆ. ಪಾಸ್‌ಪೋರ್ಟ್ ಕಾಯ್ದೆ 1967ರ ಸೆಕ್ಷನ್ 24ರ ನಿಬಂಧನೆಗಳ ಅಡಿಯಲ್ಲಿ ಪಾಸ್‌ಪೋರ್ಟ್ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಮಾಹಿತಿಯನ್ನು ತಿಳಿಸಲಾಗಿದೆ. ಭಾರತದಲ್ಲಿ ಪಾಸ್‌ಪೋರ್ಟ್ ಪಡೆಯಲು ಇರುವ ನಿಯಮಗಳಿಗೆ ತಿದ್ದುಪಡಿ…

Read More

ವಿಟ್ಲ: ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ..!

ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು. ಇಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ ಸಿಬ್ಬಂದಿಗಳು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ ವಿಟ್ಲ ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ…

Read More

ಉಡುಪಿ: ಸಾಲದ ಕಂತು ಪಾವತಿಸುವಂತೆ ಮನೆಯೊಳಗೆ ಅಕ್ರಮ ಪ್ರವೇಶಿಸಿ ಕಿರುಕುಳ- FIR ದಾಖಲು

ಉಡುಪಿ: ಸಾಲದ ಕಂತು ಪಾವತಿಸುವಂತೆ ಮನೆಯೊಳಗೆ ಅಕ್ರಮ ಪ್ರವೇಶಿಸಿ ಅವಾಚ್ಯವಾಗಿ ಬೈದು ಅವಮಾನಿಸಿರುವ ಬಗ್ಗೆ ಸೊಸೈಟಿಯ ಸಿಬ್ಬಂದಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಮೈಕ್ರೋ ಲೋನ್ ಆ್ಯಂಡ್ ಸ್ಮಾಲ್ ಲೋನ್ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ. ಬಿಜೂರು ಗ್ರಾಮದ ಕಮಲಾಕ್ಷಿ(39) ಎಂಬವರು ಸೇಫ್‌ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಬೈಂದೂರು ಶಾಖೆಯಿಂದ 40000ರೂ. ಸಾಲವನ್ನು ಪಡೆದುಕೊಂಡಿದ್ದು ಇತ್ತೀಚೆಗೆ ಸಾಲದ ಕಂತು ಕಟ್ಟಲು ಕಷ್ಟ ಸಾಧ್ಯವಾಗಿತ್ತು. ಇದರಿಂದ ಯೋಗೀಶ್, ಮ್ಯಾನೇಜರ್, ಜನಾರ್ದನ್, ಸುಜಾತ ಎಂಬವರು ಪದೇ ಪದೇ ಮನೆಗೆ ಬಂದು…

Read More

ಮಹಿಳೆಯರನ್ನು ಬೆದರಿಸಿ ಹಣ ಸುಲಿಗೆ – ಆರೋಪಿ ಅರೆಸ್ಟ್

ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್‌ ಹೊಸ್ಮಾರು (36) ಎಂದು ಗುರುತಿಸಲಾಗಿದೆ. ಈತ ಸೋಷಿಯಲ್‌ ಮೀಡಿಯಾದ ಮೂಲಕ ಯುವತಿಯರ ಮತ್ತು ಮಹಿಳೆಯರ ಮೊಬೈಲ್‌ ನಂಬರ್‌ ಸಂಪಾದಿಸಿ ಫೋನ್‌ ಮಾಡಿ ನಿಮ್ಮ ಅಶ್ಲೀಲ ವೀಡಿಯೊ ಇದೆ, ಹಣ ಕೊಡದಿದ್ದರೆ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಈ ರೀತಿ ಹಲವು ಯುವತಿಯರಿಂದ ಹಣ ಸುಲಿಗೆ…

Read More

ಕೊಣಾಜೆ: ಅಂಗಡಿಗೆ ನುಗ್ಗಿ ನಗದು-ಸಾಮಗ್ರಿ ಕಳವು; ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲು

ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೌಡುಗೋಳಿಯ ವಸಂತ ಎಂಬವರ ಮಾಲಕತ್ವದ ಅಂಗಡಿಗೆ ಸುಮಾರು ಎರಡೂವರೆ ಗಂಟೆ ರಾತ್ರಿ ರಾಡ್ ಸಮೇತ ನುಗ್ಗಿದ ದಡೂತಿ ದೇಹದ ಕಳ್ಳ ಹೊರಗಡೆಯ ಕಬ್ಬಿಣದ ಬಾಗಿಲಿಗೆ ಒಳಗೂ ಹೊರಗೂ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ್ದಾನೆ. ಅಲ್ಲಿಂದ ಕ್ಯಾಶ್ ಕೌಂಟರ್ ಇರುವ ಕೊಠಡಿಯ ಮರದ ಬಾಗಿಲಿನ ಬೀಗ…

Read More