admin

ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡ ಮಾಲ್ ಹತ್ತಿರ ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲೈವ್ ಬ್ಯಾಂಡ್ ಪ್ರದರ್ಶನವನ್ನು ನೋಡಿ ಹೊರಬಂದ ನಂತರ, ಶೇಖ್ ಹೈದರ್ ಅಲಿ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಬೈಕ್ ಅನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಹೈದರ್ ಅಲಿಯನ್ನು ಪೊಲೀಸರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿಯೇ ಅವರು ಸಾವನ್ನಪ್ಪಿದರು. ಘಟನೆ ಬಳಿಕ, ಬೌರಿಂಗ್ ಆಸ್ಪತ್ರೆ ಬಳಿ…

Read More

ICC Champions Trophy 2025: ನಾಳೆ ಭಾರತ- ಪಾಕ್‌ ನಡುವೆ ಹಣಾಹಣಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿ ಯಲ್ಲಿ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಾಳೆ (ಫೆ.23, ಭಾನುವಾರ) ಮಧ್ಯಾಹ್ನ 2.30ಕ್ಕೆ (ಭಾರತೀಯ ಕಾಲಮಾನ) ಸರಿಯಾಗಿ ಪಂದ್ಯ ಆರಂಭವಾಗಲಿದೆ. ಈ ಹಿಂದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು ಐದು ಬಾರಿ ಮುಖಾಮುಖಿಯಾಗಿವೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಬಾರಿಯ ಚಾಂಪಿಯನ್ (2002, 2013) ಭಾರತದ ವಿರುದ್ಧ ಪಾಕಿಸ್ತಾನ…

Read More

ವಿಧ್ವಂಸಕ ಕೃತ್ಯಕ್ಕೆ ಸಂಚು; ರೈಲು ಹಳಿಯ ಮೇಲೆ ಟೆಲಿಫೋನ್ ಕಂಬ ಇಟ್ಟ ದುಷ್ಕರ್ಮಿಗಳು

ಕೇರಳ : ರೈಲು ಅಪಘಾತಗಳು ನಡೆಸಲು ಹಲವು ವಿಧ್ವಂಸಕ ಕೃತ್ಯಗಳು ನಡೆದಿರುವ ಘಟನೆ ದೇಶದಲ್ಲಿ ಸಾಕಷ್ಟು ಕಡೆಯಲ್ಲಿ ಬೆಳಕಿಗೆ ಬಂದಿದೆ. ಇಂತಹುದೇ ಒಂದು ಘಟನೆ ಫೆ.22ರ ಶನಿವಾರ ನಸುಕಿನ ಜಾವ 3.30 ರ ಸುಮಾರಿಗೆ ಕೇರಳದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕೇರಳದ ಕೊಲ್ಲಂನ ಕುಂದರಾದಲ್ಲಿ ದುಷ್ಕರ್ಮಿಗಳು ರೈಲ್ವೇ ಹಳಿಗೆ ಅಡ್ಡಲಾಗಿ ಟೆಲಿಫೋನ್ ಕಂಬ ಹಾಕಿ ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ಕೊಲ್ಲಂನ ಕುಂದರಾದ ಆರುಮುರಿಕಡ(arumurikkada) ಎಂಬಲ್ಲಿ ಹಳೆಯ ಅಗ್ನಿಶಾಮಕ ದಳದ ಸ್ಟೇಷನ್ ಸಮೀಪ ಈ ಘಟನೆ…

Read More

ಕಾಪು: ಕಿಡಿಗೇಡಿಗಳಿಂದ ಕ್ರೈಸ್ತ ಶಿಲುಬೆ ಧ್ವಂಸ- ದೂರು ದಾಖಲು

ಕಾಪು: ಕಾಪು ತಾಲೂಕು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬೆಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ಧ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. ಈ ಪವಿತ್ರ ಶಿಲುಬೆಯು ಕ್ರೈಸ್ತ ಸಮುದಾಯದ ಹಾಗೂ ಕುಟುಂಬದ ಪೂಜಾ ಸ್ಥಳವಾಗಿದೆ. ಈ ಕೃತ್ಯದಿಂದ ತಮಗೆ ಅಘಾತವಾಗಿದ್ದು ಕ್ರೈಸ್ತ ಧರ್ಮಕ್ಕೆ ಅಪಮಾನವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಷಯವನ್ನು…

Read More

SBI ನಲ್ಲಿದೆ ಭರ್ಜರಿ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಇದು ಗೋಲ್ಡನ್ ಚಾನ್ಸ್​ ಎನ್ನಬಹುದು. ಮೂರು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಅರ್ಹತೆ, ಆಯ್ಕೆ, ಅರ್ಜಿ ಶುಲ್ಕ, ಆಯ್ಕೆಯ ಮಾಡನದಂಡಗಳು, ಪ್ರಮುಖ ದಿನಾಂಕ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ. ಉದ್ಯೋಗದ ಹೆಸರು– ಸಮಕಾಲೀನ ಲೆಕ್ಕ ಪರಿಶೋಧಕ (Concurrent Auditor) ಒಟ್ಟು ಉದ್ಯೋಗಗಳು- 1194 ಸ್ಯಾಲರಿ ಹೇಗಿದೆ- 45,000 ದಿಂದ 80,000 ರೂಪಾಯಿಗಳು ಕೆಲಸ ಮಾಡುವ ಸ್ಥಳ- ಭಾರತದ್ಯಾಂತ ವಯಸ್ಸಿನ ಮಿತಿ- 63 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಹತೆ- ಎಸ್‌ಬಿಐ…

Read More

ಗಮನಿಸಿ: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮಾ.31ರ ವರೆಗೆ ಅವಕಾಶ

ಬೆಂಗಳೂರು : ಎಲ್ಲಾ ರೀತಿಯ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ(ಎಚ್‍ಎಸ್‍ಆರ್‌ಪಿ) ಅಳವಡಿಸಲು ನೀಡಲಾಗಿದ್ದ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸುವಂತೆ ಸರಕಾರ ಆದೇಶ ಹೊರಡಿಸಿದೆ. ಎಪ್ರಿಲ್ 1, 2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‍ಎಸ್‍ಆರ್‌ಪಿ ಅಳವಡಿಸಲು 2023ರ ಆಗಸ್ಟ್ 8 ರವರೆಗೆ ಕಾಲಮಿತಿ ನೀಡಲಾಗಿತ್ತು. ಇದೀಗ 2025ರ ಮಾಚ್ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

Read More

ಮುಲ್ಕಿ: ಬಪ್ಪನಾಡು ಚೆಕ್‌ ಪೋಸ್ಟ್‌ ಬಳಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

ಮುಲ್ಕಿ: ಬಪ್ಪನಾಡು ಚೆಕ್‌ ಪೋಸ್ಟ್‌ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲೆಯ ಮಲ್ಟೆ ನಿವಾಸಿ ಮೊಹಮ್ಮದ್‌ ಸಲೀಂ(38) ಎಂದು ಗುರುತಿಸಲಾಗಿದೆ. ಈತ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ.ರಿಜ್ಡ್‌ ಕಾರು ( ಕೆಎ 19 ಎಂಪಿ 662)ನಲ್ಲಿ ಮಾದಕ ವಸ್ತುಗಳನ್ನು ಕಾರಿನ ಡ್ಯಾಶ್‌ ಬಾಕ್ಸ್‌ ನಲ್ಲಿ ಇರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದ. ಚೆಕ್‌…

Read More

ಮಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ..!

ಮಂಗಳೂರು: ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು…

Read More

ಮಂಗಳೂರು: ಬ್ಯಾಂಕ್ ಲಾಕರ್‌ನಲ್ಲಿಟ್ಟ 8 ಲಕ್ಷ ರೂ.ಗೆದ್ದಲು ಹಿಡಿದು ಪುಡಿ ಪುಡಿ..!

ಮಂಗಳೂರು: ಬ್ಯಾಂಕ್ ಲಾಕರ್ ಅತ್ಯಂತ ಸುರಕ್ಷಿತ ಇಲ್ಲಿಡುವ ದಾಖಲೆಗಳು ಮತ್ತು ಆಭರಣಗಳು ಅತ್ಯಂತ ಸುರಕ್ಷಿತವಾಗಿರುತ್ತದೆ ಎನ್ನುವುದು ಜನಸಾಮಾನ್ಯರ ನಂಬಿಕೆ ಹಾಗೂ ಬ್ಯಾಂಕ್ ಗಳು ನೀಡುವ ಖಾತರಿ. ಇದನ್ನು ನಂಬಿ ಲಾಕರ್ ನಲ್ಲಿ ನಗದು ಇಟ್ಟ ಗ್ರಾಹಕರೊಬ್ಬರು ಇದೀಗ ಪರಿತಪಿಸುವಂತಾಗಿದೆ. ಮಂಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ 8 ಲಕ್ಷ ರೂಪಾಯಿ ನೋಟುಗಳು ಗೆದ್ದಲು ಹಿಡಿದು ಪುಡಿಯಾಗಿವೆ. ಈ ಸಂಬಂಧ ಗ್ರಾಹಕರೊಬ್ಬರು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.ಆದರೆ ಬ್ಯಾಂಕ್ ಇದಕ್ಕೆ ನಾವು ಜವಾಬ್ದಾರರಲ್ಲ…

Read More

ಮೀನುಗಾರಿಕಾ ಬೋಟ್‌ಗೆ ಬೆಂಕಿ- ಲಕ್ಷಾಂತರ ರೂ.ನಷ್ಟ..!

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು…

Read More