admin

ಬಾಲಿವುಡ್ ನಟ ಸಂಜಯ್ ದತ್ ಗೆ 72 ಕೋಟಿ ರೂಪಾಯಿಯ ಆಸ್ತಿ ಉಯಿಲು ಮಾಡಿ ಹೋದ ಮಹಿಳಾ ಅಭಿಮಾನಿ..!

ಹೊಸದಿಲ್ಲಿ: ಬಾಲಿವುಡ್ ನಟ ಸಂಜಯ್ ದತ್ ಅವರ ಮಹಿಳಾ ಅಭಿಮಾನಿಯೊಬ್ಬರು ತಮ್ಮ ನಿಧನಕ್ಕೂ ಮುನ್ನ 72 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಉಯಿಲು ಮಾಡಿ ಹೋಗಿರುವುದು ಅಚ್ಚರಿ ಮೂಡಿಸಿದೆ. ‘ರಾಕಿ’ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ ಸಂಜಯ್ ದತ್ 135ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಆರಂಭದ ದಿನಗಳ ವರ್ಚಸ್ಸು ಹಲವಾರು ಹೃದಯಗಳನ್ನು ಗೆದ್ದಿತ್ತು. ಈ ಪೈಕಿ ಓರ್ವ ಮಹಿಳಾ ಅಭಿಮಾನಿಯು ತಾವು ನಿಧನರಾಗುವುದಕ್ಕೂ ಮುನ್ನ ಹಲವಾರು ಕೋಟಿ ಮೌಲ್ಯದ…

Read More

1 ವರ್ಷದ ಹಿಂದೆ ನಡೆದ ಕೊಲೆ ಪ್ರಕರಣ – ಮೂವರು ಆರೋಪಿಗಳ ಬಂಧನ…!

ಉಡುಪಿ: ನಗರದ ಸಮೀಪದ ಕರಾವಳಿ ಜಕ್ಷಂನ್ ನಲ್ಲಿ 1 ವರ್ಷದ 4 ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕನಕಪ್ಪ ಹನುಮಂತ ರೋಡಿ(46),  ಯಮನೂರ ತಿಪ್ಪಣ್ಣ ಮಾರಣ ಬಸರಿ(24), ಯಮನೂರಪ್ಪ ಜೇಡಿ,@ ರೊಡ್ಡ ಯಮನೂರಪ್ಪ (26) ಎಂದು ಗುರುತಿಸಲಾಗಿದೆ. ಘಟನೆ ವಿವರ: ಫಿರ್ಯಾದುದಾರರಾದ ಸುರೇಶ್‌ ಕುಮಾರ್‌(57), ತಂದೆ: ದಿ|| ತಿಮ್ಮಯ್ಯ, ಕೆಳಾರ್ಕಳಬೆಟ್ಟು, ಉಡುಪಿರವರು ಸಿ.ಎಸ್‌.ಕೆ ಸೆಕ್ಯೂರಿಟಿ ಸರ್ವೀಸ್‌ ನಡೆಸಿಕೊಂಡಿದ್ದು, ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್‌ ಬಳಿ…

Read More

ಛತ್ತೀಸ್‌ಗಢದಲ್ಲಿ 31 ನಕ್ಸಲರ ಹತ್ಯೆ

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖಾಮುಖಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ…

Read More

ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭ

ಬೆಂಗಳೂರು: ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಶೋ ಕಾರ್ಯಕ್ರಮವು ಯಲಹಂಕದ ವಾಯು ನೆಲೆಯಲ್ಲಿ ಜರುಗಲಿದೆ. ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ಏರೋ ಇಂಡಿಯಾ ಶೋ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ಏರ್ ಶೋ ನಡೆಯಲಿದ್ದು, ಕಾರ್ಯಕ್ರಮಕ್ಕೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ಜೊತೆಗೆ ದೇಶ, ವಿದೇಶದ ವಾಯುಪಡೆಯ ವಿಮಾನಗಳು ಜನರ…

Read More

ಮೂಲ್ಕಿ: ಸ್ಕೂಟರ್ ಗೆ ಟೆಂಪೋ ರಿಕ್ಷಾ ಡಿಕ್ಕಿ- ಸ್ಕೂಟರ್ ಸವಾರೆ ಮಮತಾ ಬಂಗೇರ ಕೊನೆಯುಸಿರು

ಮೂಲ್ಕಿ: ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಟೆಂಪೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಮತಾ ಬಂಗೇರ ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮುಂಬಯಿಯಲ್ಲಿ…

Read More

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಅನಿಲ್ ದಾಸ್ ಮರು ಆಯ್ಕೆ

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಮಾಸಿಕ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಮತ್ತು ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಪುನರಾಯ್ಕೆ ಪ್ರಕ್ರಿಯೆಯು ನಗರದ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾಗಿ ಅನಿಲ್ ದಾಸ್ ರವರು ಮರು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಪ್ರಸಾದ್ ತೋಮಸ್ ಅರುಣ್ ಕುಮಾರ್ ಹಾಗೂ. ಇಫ್ತಿಕಾರ್ ಉಳ್ಳಾಲ್ ಆಯ್ಕೆಯಾದರು.ಪ್ರಧಾನ ಕಾರ್ಯದರ್ಶಿಯಾಗಿ ಆಜ್ಫರ್ ರಜಾಕ್, ಜೊತೆ ಕಾರ್ಯದರ್ಶಿಯಾಗಿ ಧನುಷ್ ಶೆಟ್ಟಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಕಿರಣ್ ಅಟ್ಟಲೂರ್ , ಕೋಶಾಧಿಕಾರಿಯಾಗಿ ಸುದೇಶ್ ಭಂಡಾರಿ…

Read More

ಕ್ಯಾನ್ಸರ್ ನಿವಾರಣೆಗೂ ಬೇಕು, ಚರ್ಮದ ಹೊಳಪಿಗೂ ಬೇಕು! ಮನೆಯಲ್ಲೇ ಬೆಳೆಯೋ ಈ ಹಣ್ಣಲ್ಲಿದೆ ಆರೋಗ್ಯದ ಖಜಾನೆ

ಪ್ರಕೃತಿಯು ಅದ್ಭುತವಾದ ಹಣ್ಣುಗಳು ಮತ್ತು ತರಕಾರಿಗಳಲ್ಲಿ ಹೇರಳವಾಗಿದೆ, ನಿಯಮಿತವಾಗಿ ಸೇವಿಸಿದರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ನಮ್ಮಲ್ಲಿ ಶಕ್ತಿಯನ್ನು ತುಂಬಿ ಚೈತನ್ಯವನ್ನು ಮರಳುವಂತೆ ಮಾಡುವ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ (Star Fruits) ಕೂಡಾ ಒಂದು. ಕ್ಯಾರಂಬೋಲಾ ಅಥಾವಾ ಸ್ಟಾರ್ ಫ್ರೂಟ್ ಅಥವಾ ಕಮ್ರಖ್ (Kamrakh) ಎಂದು ಕೂಡ ಇದನ್ನು ಕರೆಯುತ್ತಾರೆ. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಈ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳಿವೆ. ಈ ಕಮ್ರಖ್ ಹಣ್ಣು ತನ್ನದೇ ಆದ ಅದ್ಭುತ ಆಹಾರ ಸೇರ್ಪಡೆಯಾಗಿದೆ. ಬಾಲಿವುಡ್‌ನ ಅತ್ಯಂತ ಫಿಟೆಸ್ಟ್ ದಿವಾ ಶಿಲ್ಪಾ…

Read More

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ವಂಚನೆ – ಆರೋಪಿ ಅರೆಸ್ಟ್

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ 46,00,000 ರೂ. ಹಣವನ್ನು ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಜುನೈದ ವಿ ಕೆ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಯಾರೋ ಅಪಚಿರಿತ ವ್ಯಕ್ತಿ ವಾಟ್ಸ್ ಆ್ಯಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ, ದೂರುದಾರರಿಂದ ಹಂತ ಹಂತವಾಗಿ ಒಟ್ಟು…

Read More

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : 27 ವರ್ಷಗಳ ಬಳಿಕ ಬಿಜೆಪಿಗೆ ಪ್ರಚಂಡ ಗೆಲುವು

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದು, ಎಎಪಿಯ ಅರವಿಂದ್ ಕೇಜ್ರೀವಾಲ್ ಹೀನಾಯ ಸೋಲನುಭವಿಸಿದ್ದಾರೆ. ಮಾಳವೀಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದಾರೆ. ಬಿಜೆಪಿಯ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ದೆಹಲಿ ಸಿಎಂ ಆತಿಶಿ ಗೆಲುವು ಸಾಧಿಸಿದ್ದರೆ. ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ…

Read More

 Delhi Election 2025 : ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲು

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಒಂದರ ನಂತರ ಒಂದರಂತೆ ಹಿನ್ನಡೆಯನ್ನು ಎದುರಿಸುತ್ತಿದೆ. ಪಕ್ಷದ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರವಾಲ್ 3182 ಮತಗಳಿಂದ ಹೀನಾಯವಾಗಿ ಸೋತಿದ್ದಾರೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದು ಎಎಪಿಗೆ ಅರಗಿಸಿಕೊಳ್ಳಲಾರದ ತುತ್ತಾಗಿ ಪರಿಣಮಿಸಿದೆ. ಅಬಕಾರಿ ಹಗರಣ ಹಾಗೂ ಭ್ರಷ್ಟಾಚಾರ ಆರೋಪಗಳು ಕೇಜ್ರಿವಾಲ್ ಸೋಲಿಗೆ ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ. ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ…

Read More