ಕಟ್ಟಡ ಧ್ವಂಸ ಆರೋಪ : ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ದೂರು
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಉಜಿರೆ ನಿವಾಸಿ ದಿ| ಜಯಶ್ರೀ ಹೊಳ್ಳ ಅವರ ಪುತ್ರ ವಿಜಯ ರಾಘವೇಂದ್ರ ದೂರು ನೀಡಿದವರು. ಇವರ ಅಜ್ಜ ವಿಷ್ಣಯ್ಯ ಹೊಳ್ಳ ಎಂಬವರಿಗೆ ದೇಗುಲದಿಂದ ಬಾಡಿಗೆಗೆ ನೀಡಿದ ಸ್ಥಳದಲ್ಲಿ ವಿಷ್ಣಯ್ಯ…

