ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ದರೋಡೆ ಪ್ರಕರಣ- ಇಬ್ಬರು ಪೊಲೀಸ್ ವಶಕ್ಕೆ
ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹಾಡ ಹಗಲೇ ಕೇರಳದ ಉದ್ಯಮಿಯ ಹಣ ಹಾಗೂ ಆತನ ಕಾರನ್ನು ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೇರಳದ ತ್ರಿಶೂರಿನ ರಜಿನ್ ಮತ್ತು ಪ್ರಮೋದ್ ಎಂದು ತಿಳಿದುಬಂದಿದೆ. ರಜಿನ್ ಮೂಲಕವೇ ದರೋಡೆಕೋರರು ವಾಹನ ಬಾಡಿಗೆ ಪಡೆದಿದ್ದರು. ರಜಿನನ್ನು ಸದ್ಯ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಇನ್ನೋರ್ವ ಆರೋಪಿ ಪ್ರಮೋದ್ ನನ್ನು ತ್ರಿಶೂರಿನಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಜಿನ್ ಮತ್ತು…

