admin

ಬಂಟ್ವಾಳ: ಆಟವಾಡುತ್ತಿದ್ದ ಬಾಲಕಿಯ ಅತ್ಯಾಚಾರಗೈದ ಆರೋಪಿ ಅರೆಸ್ಟ್

ಬಂಟ್ವಾಳ: ಆಟವಾಡುತ್ತಿದ್ದ ಬಾಲಕಿಯ ವಾಸ್ತವ್ಯವಿರದ ಮನೆಯೊಂದರ ಹಿಂದೆ ಕರೆದೊಯ್ದು ಬಲಾತ್ಕಾರವಾಗಿ ಅತ್ಯಾಚಾರಗೈದ ಆರೋಪಿತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇರಾ ಗ್ರಾಮದ ಸೂತ್ರಬೈಲು ನಿವಾಸಿ ಅಬೂಬಕರ್ (50) ಬಂಧಿತ ಆರೋಪಿ. ಬಾಲಕಿ ಆಟವಾಡುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ನೆರೆಮನೆಯ ನಿವಾಸಿ ಅಬೂಬಕರ್ ಅಲ್ಲಿಯೇ ಯಾರು ವಾಸ್ತವ್ಯವಿರದ ಮನೆಯ ಹಿಂಭಾಗಕ್ಕೆ ಆಕೆಯನ್ನು ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ನೀಡಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಉಡುಪಿ: ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದು ಯುವಕ ಪರಾರಿ- ಯುವತಿ ಗಂಭೀರ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಚೂರಿ ಇರಿದು ಇದೀಗ ಪರಾರಿಯಾಗಿದ್ದಾನೆ. ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ ಮನೆಯವರು ಇದಕ್ಕೆ ಒಪ್ಪದಂತಹ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ…

Read More

ರಾಮ ಕ್ಷತ್ರೀಯ ಸೇವಾ ಸಂಘದಿಂದ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತೂರುರವರಿಗೆ “ಪೌರ ಸನ್ಮಾನ”

ಮಂಗಳೂರು: ರಾಮ ಕ್ಷತ್ರೀಯ ಸೇವಾ ಸಂಘದಿಂದ ಸಮಾಜ ಮುಖೀ ವೈದ್ಯಕೀಯ ಸೇವೆ, ಶಿಕ್ಷಣ, ಸಾಹಿತ್ಯ, ಸಂಘಟನೆ, ಬರಹ ಭಾಷಣ ಹೋರಾಟಗಳಿಂದಲೇ ಸಮಾಜ ವಿಜ್ಞಾನಿ ಎಂಬ ಹೆಗ್ಗಳಿಕೆಯಿಂದ ಪ್ರತಿಷ್ಠಿತ ಡಾ ಬಿ ಸಿ ರಾಯ್ ರಾಷ್ಟ್ರ ಪುರಸ್ಕಾರ ಹಾಗು ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪುರಸ್ಕಾರ ಪಡೆದ ಕರ್ನಾಟಕ ರಾಜ್ಯದ ಏಕಮಾತ್ರ ವೈದ್ಯ ಕುಲಾಲ-ಕುಂಬಾರ ಸಮುದಾಯದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಇವರಿಗೆ “ಪೌರ ಸನ್ಮಾನ” ಕಾರ್ಯಕ್ರಮವು ದಿನಾಂಕ ಸೆ. 28 ರಂದು ಪಾಲೆಮಾರ್ ಗಾರ್ಡನ್, ಮೋರ್ಗನ್ಸ್…

Read More

ಮೂಡುಬಿದಿರೆ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ- ಆರೋಪಿಯ  ಬಂಧನ

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್ ಒಬ್ಬನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ. ಈತ ಉಡುಪಿ ಮೂಲದ ಯುವತಿಯೊಬ್ಬಳೊಂದಿಗೆ ಇನ್ಸ್ಟಾ ಗ್ರಾಂನಲ್ಲಿ ಸಲುಗೆ ಬೆಳೆಸಿ, ಬಳಿಕ ದೈಹಿಕವಾಗಿ ಆಕೆಯನ್ನು ಬಳಸಿಕೊಂಡಿದ್ದಾನೆ. ಆದರೆ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ…

Read More

ಉಳ್ಳಾಲ :ಬೆದರಿಕೆ, ಸುಳ್ಳು ಪ್ರಕರಣ ಆರೋಪ – ಓರ್ವ ಬಂಧನ

ಉಳ್ಳಾಲ: ವಿಕ್ರಂ ಮತ್ತು ವಿಶ್ವನಾಥ್‌ ಎಂಬವರ ನಡುವೆ ನಡೆದ ಜಗಳದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.ದಿನಾಂಕ 08-09-2025 ರಂದು ರಾತ್ರಿ ಉಚ್ಚಿಲ ರೈಲ್ವೇ ಕ್ರಾಸ್ ಬಳಿ ಕಾರು-ಸ್ಕೂಟರ್ ನಡುವೆ ತಕರಾರು ಉಂಟಾಗಿದ್ದು, ಬಳಿಕ ವಿಷಯ ಗಂಭೀರವಾಗಿ ಬೆಳೆದಿದೆ. ವಿಶ್ವನಾಥ್ ಹಾಗೂ ಅವರ ಕುಟುಂಬ ಸದಸ್ಯರು, ವಿಕ್ರಂ ವಿರುದ್ಧ ಬೆದರಿಕೆ ಹಾಕಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಅದಕ್ಕೆ ಪ್ರತಿಯಾಗಿ ವಿಕ್ರಂ ಕೂಡ ವಿಶ್ವನಾಥ್‌ ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ….

Read More

ಮೂಡುಬಿದಿರೆ: ಮಗನನ್ನು ಶಾಲೆಗೆ ಬಿಟ್ಟು ಬರಲು ಹೋದ ಮಹಿಳೆ ನಾಪತ್ತೆ-ದೂರು ದಾಖಲು

ಮೂಡುಬಿದಿರೆ: ಮಕ್ಕಳನ್ನು ಶಾಲೆಗೆ ಬಿಟ್ಟು ಬರಲು ಹೋದ ಮಹಿಳೆಯೊಬ್ಬರು ಸೆ.10ರಂದು ನಾಪತ್ತೆಯಾಗಿದ್ದಾರೆ. ಮೂಡುಬಿದಿರೆ ಕಡಂದಲೆ ಗ್ರಾಮದ ಪೂಪಾಡಿಕಲ್ಲಿನ ಪವಿತ್ರಾ (29) ನಾಪತ್ತೆಯಾದ ಮಹಿಳೆ. ಇವರು ಬುಧವಾರ ಬೆಳಿಗ್ಗೆ ತನ್ನ ಮಗ ಹಾಗೂ ತಂಗಿಯ ಮಗನನ್ನು ಕಡಂದಲೆ ವಿದ್ಯಾಗಿರಿ ಶಾಲೆಗೆ ಬಿಡಲು ಹೋಗಿದ್ದು ಬಳಿಕ ಮನೆಗೆ ಹಿಂದಿರುಗಲಿಲ್ಲ. ಮನೆಯವರು ಎಷ್ಟೇ ಕಾಲ್ ಮಾಡಿದ್ರೂ ಕೂಡಾ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆಸುಪಾಸಿನವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಇಂದು ಬೆಳಿಗ್ಗೆ ಪವಿತ್ರಾ ತಂದೆ ಕೇಶವ ಶೆಟ್ಟಿಗಾರ್ ಮೂಡುಬಿದಿರೆ…

Read More

ಬೆಳ್ತಂಗಡಿ: ಮಾದಕ ವಸ್ತು ಸೇವೆನೆ..!! ಇಬ್ಬರು ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ. ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು ಇಳಂತಿಲ ಗ್ರಾಮದ ರಿಫಾಯಿ ನಗರ ಮನೆ ನಿವಾಸಿ ಮಹಮ್ಮದ್ ಜಿಯಾದ್ (23) ಬಂಧಿತರು. ಇವರಿಬ್ಬರು ಉಪ್ಪಿನಂಗಡಿಯ ಹಿರೆಬಂಡಾಡಿ ಕ್ರಾಸ್ ರಸ್ತೆಯ ಬಳಿ ಶಾಲೆಯ ಹತ್ತಿರ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯಾಧಾರದಲ್ಲಿ ಗಸ್ತು ನಿರತ ಎಸೈ ಅವಿನಾಶ್ ಅವರ ತಂಡವು ಆರೋಪಿಗಳನ್ನು…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ನೀಡಿದ ಸಂಗೀತ ನಿರ್ದೇಶಕ ಇಳಯರಾಜ

ಉಡುಪಿ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಿ ದೇವರ ಬಗ್ಗೆ ತಮ್ಮ ಅಪಾರ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ದೈವಿಕ ತಾಯಿಯ ಮೇಲಿನ ಆಧ್ಯಾತ್ಮಿಕ ಗೌರವ ಮತ್ತು ಪ್ರೀತಿಗೆ ಹೆಸರುವಾಸಿಯಾಗಿರುವ ಇಳಯರಾಜ ಅವರು ಹಲವಾರು ವರ್ಷಗಳಿಂದ ದೇವಿಗೆ ಹಲವಾರು ಅಮೂಲ್ಯವಾದ ಆಭರಣಗಳನ್ನು ಅರ್ಪಿಸಿದ್ದಾರೆ. ವಜ್ರದ ಕಿರೀಟ ಸೇರಿದಂತೆ ಈ ಇತ್ತೀಚಿನ ಅರ್ಪಣೆಯು ಅವರ ಭಕ್ತಿ ಮತ್ತು ದೇವರನ್ನು ಭವ್ಯ ಮತ್ತು ಹೃತ್ಪೂರ್ವಕ ರೀತಿಯಲ್ಲಿ ಗೌರವಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದೇವಿ ಮತ್ತು ವೀರಭದ್ರ ದೇವರಿಗೆ…

Read More

ಮಂಗಳೂರು: ನಕಲಿ ಆಧಾರ್ ಕಾರ್ಡ್‌, RTC ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಖದೀಮರು ಅರೆಸ್ಟ್

ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿಗಳನ್ನು ಸೃಷ್ಟಿಸಿ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆಗಳನ್ನು ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳಿಂದ ಜಾಮೀನು ಪಡೆದುಕೊಳ್ಳಲು ಬಳಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೂಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಎಂಬವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಕಲಿ ಆಧಾರ್‌ ಕಾರ್ಡ್‌ ಮೂಲಕ ಇವರು ಭಾರಿ ವಂಚನೆ ನಡೆಸಿರುವ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ದಡ್ಡಲಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು…

Read More

ತಂದೆ, ತಾಯಿ ಯೋಗ ಕ್ಷೇಮ ನೋಡಿಕೊಳ್ಳದ ಮಕ್ಕಳಿಗೆ ಶಾಕ್ : ಜೀವನಾಂಶ ಮೊತ್ತ ಹೆಚ್ಚಳಕ್ಕೆ ಹೈಕೋರ್ಟ್ ಶಿಫಾರಸು

 ತಂದೆ-ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶದ ಮಿತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು ಮಾಡಿದೆ. 2007ರ ಪೋಷಕರ ಕಲ್ಯಾಣ ಕಾಯ್ದೆಯ ಸೆಕ್ಷನ್ 9ರ ಪರಿಶೀಲನೆ ಅಗತ್ಯವಿದೆ. ಮಕ್ಕಳು ನೀಡಬೇಕಾದ ಗರಿಷ್ಠ ಜೀವನಾಂಶದ ಮಿತಿ 10,000 ಇದೆ. 2007ರ ಜೀವನಾಂಶ ನಿರ್ವಹಣಾ ವೆಚ್ಚಕ್ಕೂ 2025ಕ್ಕೂ ವ್ಯತ್ಯಾಸವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಹಿನ್ನಲೆಯಲ್ಲಿ ಹಣದುಬ್ಬರವನ್ನು ಪರಿಗಣಿಸಿ ಜೀವನಾಂಶದ ಗರಿಷ್ಠ ಮಿತಿ ಹೆಚ್ಚಿಸಬೇಕು ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ. ಜೀವನಾಂಶ…

Read More