ಬೆಳ್ತಂಗಡಿ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದೂ ಯುವಕನನ್ನು ವಿವಾಹವಾಗಿ ಪತ್ತೆ
ಬೆಳ್ತಂಗಡಿ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನೊಂದಿಗೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹರೀಶ್ ಗೌಡ (24) ಮತ್ತು ಸುಹಾನ (19) ಪ್ರೀತಿಸಿ ಮದುವೆಯಾದ ಹಿಂದೂ-ಮುಸ್ಲಿಂ ಜೋಡಿ. ಹರೀಶ್ ಗೌಡ ಹಾಗೂ ಸುಹಾನ ಫೇಸ್ಬುಕ್ನಲ್ಲಿ ಪರಿಚಿತರಾಗಿದ್ದರು. ಬಳಿಕ ಇಬ್ಬರೂ ಪ್ರೀತಿಯ ಬಲೆಗೆ ಬಿದ್ದಿದ್ದರು. ಇತ್ತೀಚೆಗೆ ಕಂಪ್ಯೂಟರ್ ಕ್ಲಾಸ್ಗೆ ಹೋಗಿದ್ದ ಸುಹಾನ ನಾಪತ್ತೆ ಆಗಿದ್ದಳು. ಆದ್ದರಿಂದ ಆಕೆಯ ಮನೆಯವರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ…

