admin

ಶಾಂತಿ ಕದಡುವ ವಿಡಿಯೋ ವೈರಲ್- SDPI ಮುಖಂಡರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಇಂದು ಹಮ್ಮಿಕೊಳ್ಳಲಾದ “ಚಲೋ ಬೆಳಗಾವಿ” ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು‌ ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು…

Read More

ಕರ್ನಾಟಕದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್‌ಎಂ ಕೃಷ್ಣ ನಿಧನರಾಗಿದ್ದಾರೆ. ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎಸ್‌ಎಂ…

Read More

ಉಳ್ಳಾಲ: ಉಚ್ಚಿಲ ಹೆದ್ದಾರಿಯಲ್ಲಿ ಗ್ಯಾಸ್‌ ಟ್ಯಾಂಕರ್‌ನಿಂದ ಅನಿಲ ಸೊರಿಕೆ- ತಹಶೀಲ್ದಾರ್ ಅವರಿಂದ ಸೀಲ್ ಡೌನ್

ಉಳ್ಳಾಲ: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್‌ಪಿಎಲ್‌ ತಂಡ ಮತ್ತು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕ‌ರ್ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ…

Read More

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

ವೇಣೂರು: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ ಹಾಗೂ ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮವು ಡಿ.8ರಂದು ನಡೆಯಿತು. ವಿದ್ಯಾರ್ಥಿಗಳು ವಿದ್ಯೆಯೆಂಬ ಆಸ್ತಿಯನ್ನು ಜತನದಿಂದ ಸಂಪಾದಿಸಬೇಕು, ಜೊತೆಗೆ ಶಿಸ್ತು, ವಿನಯವನ್ನೂ ರೂಢಿಸಿಕೊಳ್ಳಬೇಕು ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹೇಳಿದರು.ಅವರು ವೇಣೂರು ಸನಿಹದ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಜರಗಿದ ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಮತ್ತು ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರಷ್ಟೇ ಸಾಲದು. ಆಗಾಗ್ಗೆ ಶಾಲೆಗೆ ಬಂದು ಮಕ್ಕಳ ವಿದ್ಯಾಭ್ಯಾಸದ…

Read More

ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಸಾವು..!

ವಿಟ್ಲ ಸಮೀಪ ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಸಂಭವಿಸಿದೆ ‌ ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ ಎಂದು ತಿಳಿಯಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Read More

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಆಂಬ್ಯುಲೆನ್ಸ್‌‌..!

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್‌‌ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆಂಬ್ಯುಲೆನ್ಸ್‌‌ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆಂಬ್ಯುಲೆನ್ಸ್‌‌ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ…

Read More

ಪೇರಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು..

ಅತ್ಯಂತ ರುಚಿಕರವಾಗಿದ್ದರೂ ಬಹುಕಾಲ ನಿರ್ಲಕ್ಷಿಸಲ್ಪಟ್ಟ ಹಣ್ಣು ಪೇರಳೆ. ಇತ್ತೀಚಿನ ವರ್ಷಗಳಲ್ಲಿ ಇದರ ಆರೋಗ್ಯದ ಪ್ರಯೋಜನಗಳು ಹೆಚ್ಚು ಬೆಳಕಿಗೆ ಬರುತ್ತಿದ್ದಂತೆ ಮೌಲ್ಯವೂ ಹೆಚ್ಚುತ್ತಿದೆ. ವಾಸ್ತವದಲ್ಲಿ ಬಹಳ ಆರೋಗ್ಯಕರ ಹಣ್ಣು ಎಂದು ಬಣ್ಣಿಸಲಾಗುವ ಸೇಬು, ದ್ರಾಕ್ಷಿ, ಬಾಳೆ ಹಣ್ಣಿಗಿಂತಲೂ ಪೇರಳೆ ಹಣ್ಣಿನ ಆರೋಗ್ಯದ ಪ್ರಯೋಜನಗಳು ಒಂದು ತೂಕ ಹೆಚ್ಚೇ ಎನ್ನಬಹುದು. ಮಧುಮೇಹ ನಿಯಂತ್ರಣಕ್ಕೆ ಸಹಕಾರಿಪೇರಳೆ ಹಣ್ಣು ಗ್ಲುಕೋಸ್ ಅನ್ನು ರಕ್ತಕ್ಕೆ ಬಿಟ್ಟುಕೊಡುವುದು ನಿಧಾನ. ಪೇರಳೆ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಹೊಂದಿದೆ. ಹಾಗಾಗಿ ಮಧುಮೇಹ ನಿಯಂತ್ರಣಕ್ಕೆ ಪೇರಳೆ ಸಹಕಾರಿಯಾಗಿದೆ. ಇದರಲ್ಲಿರುವ ಫೈಬರ್…

Read More

ಕೆಟ್ಟುನಿಂತ ಟ್ಯಾಂಕರ್ ಗೆ ಬೈಕ್ ಡಿಕ್ಕಿ- ಯುವಕ ಮೃತ್ಯು..!

ಉಡುಪಿ: ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22) ಎಂದು ಗುರುತಿಸಲಾಗಿದೆ. ಟೈಯರ್ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ನೀರಿನ ಟ್ಯಾಂಕ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮಣಿಪಾಲ ಠಾಣಾ…

Read More

ಮಂಗಳೂರು: ನಕಲಿ ಟ್ರೇಡಿಂಗ್ ಆ್ಯಪ್ ಬಳಸಿ 500% ಲಾಭಾಂಶದ ಆಮಿಷ – 46 ಲಕ್ಷ ರೂ ವಂಚನೆ

ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಶ್ರದ್ಧಾ ಬೆಲಾನಿ ಎಂಬ ಅಪರಿಚಿತಳು ARES MANAGEMENT CORPORATION ಪರವಾಗಿ ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿದ್ದಳು. ಅದರಂತೆ https://play.google.someco.shop/com.rehvu.dqlgdf/install.html ಎಂಬ ಲಿಂಕ್ ಒತ್ತಿ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ಬಳಿಕ ಅವರು H 777 ARES Stock Exchange Group…

Read More

ಮಂಗಳೂರು: ಏರ್‌ಪೋರ್ಟ್‌ನಲ್ಲಿ 50 ಲಕ್ಷ ರೂ ಮೌಲ್ಯದ ಚಿನ್ನ, ಇ-ಸಿಗರೇಟ್ ವಶಕ್ಕೆ

ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಇ-ಸಿಗರೇಟ್ ಅನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 1ರಂದು IX832/IX814 ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೇರಳದ ಕಾಸರಗೋಡಿನ ನಿವಾಸಿಗಳಾದ ಇಬ್ಬರು ಪ್ರಯಾಣಿಕರು ಅನುಮಾನಾಸ್ಪದವಾಗಿ ವಿಮಾನ ನಿಲ್ದಾಣದಲ್ಲಿ ವರ್ತಿಸಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಮಗ್ಲಿಂಗ್ ಬೆಳಕಿಗೆ ಬಂದಿದೆ. ಇಬ್ಬರಿಂದ ಅಕ್ರಮ ಸಾಗಾಟದ ಚಿನ್ನ ಮತ್ತು ಇ-ಸಿಗರೇಟ್ ವಶಪಡಿಸಲಾಗಿದೆ….

Read More