admin

ಬಂಟ್ವಾಳ : ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ಧಕ ಇಟ್ಟು ಆಜಾನ್ – ಪ್ರಕರಣ ದಾಖಲಿಸಿದ ಪೊಲೀಸರು

ಬಂಟ್ವಾಳ : ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡ ಇದಾಗಿದ್ದು, ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಝಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದ ದೂರಿನಂತೆ ಈ ಬಗ್ಗೆ…

Read More

ಮಂಗಳೂರು: ಅಪ್ರಾಪ್ತನಿಗೆ ಸ್ಕೂಟರ್ ಚಲಾಯಿಸಲು ನೀಡಿದ ಪೋಷಕರಿಗೆ 27,500 ರೂ. ದಂಡ

ಮಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ಸ್ಕೂಟರ್ ನೀಡುವ ಪೋಷಕರೇ ಎಚ್ಚರ, ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ಕೋರ್ಟ್ ಬರೋಬ್ಬರಿ 27 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಮಂಗಳೂರಿನ ಬಜಪೆ ಪೇಟೆಯಲ್ಲಿ ವಾಹನ ತಪಾಸಣೆ ವೇಳೆ ಟ್ರಿಪಲ್ ರೈಡ್ ಮಾಡಿಕೊಂಡು ಬಂದ ಸ್ಕೂಟರ್ ಸವಾರ ಅಪ್ರಾಪ್ತ ಎಂಬುದು ಪತ್ತೆಯಾದ ಹಿನ್ನೆಲೆಯಲ್ಲಿ ಆತನ ತಂದೆಗೆ 27,500 ರು. ದಂಡ ವಿಧಿಸಲಾಗಿದೆ. ಆ. 25ರಂದು ಬಜಪೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಟ್ರಿಪಲ್ ರೈಡ್‌ನಲ್ಲಿ ಆಗಮಿಸಿದ ಸ್ಕೂಟರ್‌ನ್ನು…

Read More

ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಲೋಗೋ, ಲಾಂಛನ ನಿಷೇಧ : ನಿಯಮ ಉಲ್ಲಂಘಿಸಿದ್ರೆ 1,000 ರೂ.ದಂಡ.!

ಬೆಂಗಳೂರು: ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಲೋಗೋ, ಲಾಂಛನ ಹಾಕುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 2019 ರಿಂದ ಕರ್ನಾಟಕ ಸಾರಿಗೆ ಇಲಾಖೆಯು ವಾಹನಗಳ ಮೇಲೆ ಸರ್ಕಾರಿ ಲಾಂಛನಗಳು, ಹೆಸರುಗಳು ಮತ್ತು ಲೋಗೋಗಳನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಸುಮಾರು 15,000 ವಾಹನ ಚಾಲಕರಿಗೆ ದಂಡ ವಿಧಿಸಿದೆ. ಅಧಿಕೃತ ದತ್ತಾಂಶದ ಪ್ರಕಾರ, ಡಿಸೆಂಬರ್ 28, 2019 ಮತ್ತು ಜುಲೈ 31, 2025 ರ…

Read More

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ- ಕಾನ್ಸ್‌ಟೇಬಲ್ ಅರೆಸ್ಟ್

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಯಾಗಿರುವ ಕೋಮು ಸಂಘರ್ಷ ವಿರೋಧಿ ದಳದಲ್ಲಿ (ಎಸ್‌ಎಎಫ್) ಕಾನ್ಸ್‌ಟೇಬಲ್ ಆಗಿರುವ ಸಿದ್ದೇಗೌಡ ಎಂಬವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗ್ತಿದೆ. ಯುವತಿ ದೂರಿನ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿ ಸಿದ್ದೇಗೌಡನನ್ನು…

Read More

ಲಂಚ ಸ್ವೀಕರಿಸುತ್ತಿದ್ದ ಆರೋಪ: ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್‌ ಅವರು ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸಾ, ಬಿಲ್ ಕಲೆಕ್ಟರ್ ವಿಲಿಯಂ ಎಂಬವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ದೂರುದಾರರ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ 1 ಎಕ್ರೆ ಕೃಷಿ ಜಮೀನು ಇದ್ದು, ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಪೆರುವಾಯಿ ಗ್ರಾಮ ಪಂಚಾಯತ್‌ಗೆ ಸರ್ಕಾರದ ವಿಶೇಷ ಘಟಕ ಯೋಜನೆ…

Read More

ಧರ್ಮಸ್ಥಳ ಕೇಸ್ : ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್‌ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್…

Read More

7 ವರ್ಷಗಳ ಬಳಿಕ ಭಾರತದಲ್ಲಿ ಇಂದು ಅಪರೂಪದ ರಕ್ತ ಚಂದ್ರ ಗ್ರಹಣ

ಬೆಂಗಳೂರು: ಇಂದು ರಾತ್ರಿ ನಭೋ ಮಂಡಲದಲ್ಲಿ  ಅಪರೂಪದ ಕೌತುಕದ ರಕ್ತ ಚಂದನ ಚಂದ್ರಗ್ರಹಣ ಸಂಭವಿಸಲಿದೆ. ಸುದೀರ್ಘ 3 ಗಂಟೆ 28 ನಿಮಿಷಗಳ ಕಾಲ ನಡೆಯುವ ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ನೆರಳಿನಾಟಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ಭಾರತವಲ್ಲದೇ , ಏಷ್ಯಾ, ಆಫ್ರಿಕಾ,  ಆಸ್ಟ್ರೇಲಿಯಾ, ಯೂರೋಪ್ ಸೇರಿ ಬಹುತೇಕ ವಿಶ್ವದ ಶೇ .85ರಷ್ಟು ಮಂದಿ ಸೆ. 7ರ ರವಿವಾರ ತಡರಾತ್ರಿ ಸಂಭವಿಸಲಿರುವ ಅತೀ ಅಪರೂಪದ ರಕ್ತ ಚಂದ್ರಗ್ರಹಣವನ್ನು ವೀಕ್ಷಿಸಬಹುದಾಗಿದೆ. ಏಷ್ಯಾ ಹಾಗೂ ಆಸ್ಟ್ರೇಲಿಯಾದಲ್ಲಿ ಆರಂಭದಿಂದ ಅಂತ್ಯದವರೆಗೂ ಉತ್ತಮವಾಗಿ…

Read More

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ದಾಖಲೆ ರೆಡಿ ಇಟ್ಟುಕೊಟ್ಟಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಎಸ್ಕಾಂ ಇಲಾಖೆಯಿಂದ ಪ್ರತಿ ಮನೆಗೂ ಯು.ಹೆಚ್.ಐ.ಡಿ (UHID) ನಂಬರ್ ಜನರೇಟ್ ಮಾಡಿ, ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ನೀವು ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಈಗಾಗಲೇ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮುಂದಿನ ದಿನಗಳಲ್ಲಿ ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು…

Read More

ಮಾಸ್ಕ್ ಮ್ಯಾನ್ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ..!! ಶಿವಮೊಗ್ಗ ಜೈಲಿಗೆ ಶಿಫ್ಟ್

ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಎಸ್ಐಟಿ ವಶಕ್ಕೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಳ್ತಂಗಡಿಯ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಚಿನ್ನಯ್ಯಗೆ 14 ದಿನ…

Read More

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸರ ದಾಳಿ- 9 ಜಾನುವಾರುಗಳ ತಲೆ ವಶ

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ, ಒಂಬತ್ತು ಜಾನುವಾರುಗಳ ತಲೆಯನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬಾತನ ಮನೆ ಮೇಲೆ ಈ ದಾಳಿ ನಡೆದಿದೆ. ಕಳವು ಮಾಡಿದ ಜಾನುವಾರುಗಳನ್ನು ಇಲ್ಲಿಗೆ ತಂದು ಅಕ್ರಮವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಉನ್ನತ…

Read More