ಮಂಗಳೂರು: ಹೆಲ್ಮೆಟ್ನಲ್ಲಿ ಬಡಿದು ಕೆಎಸ್ಆರ್ಟಿಸಿ ಬಸ್ ಗಾಜು ಒಡೆದು ಸ್ಕೂಟರ್ ಸವಾರ ಪರಾರಿ..!
ಮಂಗಳೂರು: ರಸ್ತೆ ಸಂಚಾರದ ವೇಳೆ ಅಡ್ಡ ಬಂದಿದೆ ಎಂದು ಸ್ಕೂಟರ್ ಸವಾರನೋರ್ವನು ಹೆಲ್ಮೆಟ್ನಲ್ಲಿ ಬಡಿದು ಕೆಎಸ್ಆರ್ಟಿಸಿ ಬಸ್ನ ಮುಂಭಾಗದ ಗಾಜು ಒಡೆದು ಬೈಕ್ ಸವಾರನೋರ್ವನು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರವಿವಾರ ಸಂಜೆ 7.30ರ ಸುಮಾರಿಗೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ KSRTC ಬಸ್ಸು ಸಂಚಾರ ಮಾಡುತ್ತಿತ್ತು. ಈ ವೇಳೆ ಸ್ಕೂಟರೊಂದು ಅಡ್ಡ ಬಂದಿದೆ. ಆಗ ಬಸ್ ಚಾಲಕ ಅರುಣ್ ಅಡ್ಡ ಬಂದ ಸ್ಕೂಟರ್ ಸವಾರನನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಸ್ಕೂಟರ್ ಸವಾರ…

