admin

ಬಂಟ್ವಾಳ : ನಾಲ್ಕನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಐದನೇ ಮದುವೆಗೆ ಸಜ್ಜಾಗುತ್ತಿದ್ದ ವಂಚಕ ಅರೆಸ್ಟ್..!

ಬಂಟ್ವಾಳ : ನಾಲ್ಕು ಮದುವೆಗಳನ್ನು ಮುರಿದು ಐದನೇ ಮದುವೆಗೆ ತಯಾರಾಗುತ್ತಿದ್ದ ಭೂಪನನ್ನು ಬಂಟ್ವಾಳದ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮನೆಯಿಂದ ಹೊರದಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ನಡೆದಿದೆ. ಆರೋಪಿಯಾಗಿರುವ ಮಹಮ್ಮದ್ ರಫೀಕ್(42) ತನ್ನ ನಾಲ್ಕನೇಯ ಪತ್ನಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ಮಗುವನ್ನು ಕೊಂದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಾನೆ, ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಾಗಿದ್ದಾನೆ’ ಮತ್ತು ತ್ರಿವಳಿ ತಲಾಖ್…

Read More

ಉಡುಪಿ ಜಿಲ್ಲಾ ಕುಲಾಲ ಕುಂಬಾರರ ಯುವ ವೇದಿಕೆ ವತಿಯಿಂದ “ಗೋವಿಗಾಗಿ ಮೇವು” ಅಭಿಯಾನ

ಉಡುಪಿ ಜಿಲ್ಲಾ ಕುಲಾಲ ಕುಂಬಾರರ ಯುವ ವೇದಿಕೆ, ಕಾರ್ಕಳ ತಾಲೂಕು ಕುಲಾಲ ಯುವ ವೇದಿಕೆ, ಕುಲಾಲ ಸಂಘ ಕಾರ್ಕಳ ಹಾಗೂ ಕುಲಾಲ ಮಹಿಳಾ ಘಟಕ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ “ಗೋವಿಗಾಗಿ ಮೇವು” ಎನ್ನುವ ಗೋಗ್ರಾಸ ಅಭಿಯಾನವನ್ನು ಹಮ್ಮಿಕೊಂಡಿದೆ. ಗಾವೋ ವಿಶ್ವಸ್ಯ ಮಾತರಃ ಎನ್ನುವ ಸಂಸ್ಕ್ರತದ ಉಕ್ತಿಯೊಂದು ಗೋವು ಜಗತ್ತಿನ ತಾಯಿ ಎನ್ನುವುದನ್ನು ಸಾರಿ ಹೇಳಿದೆ. ಅದೆಷ್ಟೋ ತಬ್ಬಲಿ ಮಕ್ಕಳಿಗೆ ಜೀವಾಮೃತ ಉಣಿಸಿ ಮಾತೆ ಅನ್ನಿಸಿ ಕೊಂಡ ಗೋ ಸಮೂಹ ಇಂದು ತನ್ನ ಅಸ್ತಿತ್ವವನ್ನು ದರೆಯಲ್ಲಿ ಹುಡುಕಾಡುವ…

Read More

ಅಕ್ರಮ ಮರಳು ದಂಧೆಗೆ ಸಹಕಾರ : ಕಾಪು ಎಸ್.ಐ ಅಬ್ದುಲ್ ಖಾದರ್ ಸಸ್ಪೆಂಡ್‌

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅವರನ್ನು ಅಮಾನತು ಮಾಡಲಾಗಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್‌ ಖಾದರ್‌ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

Read More

ಹರೇಕಳ ಬಿಜೆಪಿ ಕಾರ್ಯಕರ್ತ ಹಾಗೂ ವೃದ್ಧೆಯ ಮೇಲೆ ನಡೆದ ಹಲ್ಲೆ ಖಂಡನೀಯ: ಕಿಶೋರ್ ಕುಮಾರ್ ಪುತ್ತೂರು

ಮಂಗಳೂರು: ಹರೇಕಳದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತ ಶರತ್ ಕುಮಾರ್ ಗಟ್ಟಿ ಮೇಲೆ ಹಲ್ಲೆ ನಡೆಸಿದ್ದು,ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ಸ್ಥಿತಿಗತಿಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ಪಡೆದುಕೊಂಡರು. ಹರೇಕಳ ಬಿಜೆಪಿ ಬೂತ್ ಅಧ್ಯಕ್ಷ ಶರತ್ ಕುಮಾರ್ ಗಟ್ಟಿ ಅವರ ಮೇಲೆ ಪಂಚಾಯತ್ ನೀರಿನ ಕ್ಷುಲ್ಲಕ ಕಾರಣಕ್ಕಾಗಿ ಮಸೀದಿಯಿಂದ ಬಂದ ಸರಿ ಸುಮಾರು 15-20 ಜನರ ತಂಡ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಹಲ್ಲೆಕೋರ ಮತಾಂತರನ್ನು ತಡೆಯಲು ಬಂದ ಅವರ ಅಜ್ಜಿಯ…

Read More

ಚಿನ್ನದ ಪದಕ ಪಡೆದ ಗೋಪಾಲ್ ಕುಲಾಲ್ ಅವರಿಗೆ ರಾಜ್ಯ ಕುಲಾಲ ಕುಂಬಾರರ ವತಿಯಿಂದ ಅಭಿನಂದನೆಗಳು

ಮಂಗಳೂರು: ಕರಾವಳಿ ಕುಲಾಲ ಕುಂಬಾರರ ಯುವವೇಧಿಕೆಯ ಸ್ಥಾಪಕ ಮಾರ್ಗದರ್ಶಕರಲ್ಲಿ ಓರ್ವರು ಆಗಿದ್ದ ಹಾಗೂ ಆರಂಭದ ದಿನಗಳಲ್ಲಿ ಯುವ ವೇದಿಕೆಯು ಸಂಘಟನೆಗಾಗಿ ಶ್ರೀದೇವಿದೇವಸ್ಥಾನ, ಶ್ರೀ ವೀರನಾರಾಯಣ ದೇವಸ್ಥಾನ, ಹಾಗೂ ಮಂಗಳಾದೇವಿಯ ಮುಂಬಯಿ ಕುಲಾಲ್ ಸಂಘದಲ್ಲಿ ಸಂಘಟಿಸಿದ ಕುಲಾಲ ಮೂಲ್ಯ ಕುಂಬಾರರ ಸಮ್ಮೇಳನದ ಯಶಸ್ಸಿನ ರೂವಾರಿಗಳಲ್ಲಿ ಓರ್ವರಾಗಿದ್ದ ಗೋಪಾಲ್ ಕುಲಾಲ್ ಅವರು ನಿವೃತ್ತ BSNL ಉದ್ಯೋಗಿ ಹಾಗೂ ಶ್ರೇಷ್ಠ ಮಟ್ಟದ ಕ್ರೀಡಾ ಪಟು ಜೊತೆಗೆ ಕೃಷಿಕ ಅವರು ಚಿನ್ನದ ಪದಕ ಪಡೆದು ಇಡೀ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಕರ್ನಾಟಕ ರಾಜ್ಯ…

Read More

ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ನಿನ್ನೆ(ನ.28) ನಡೆದಿದ್ದು, ಈ ವೇಳೆ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.  ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಕುಲಪತಿ ಆಗಿದ್ದರು. ಆದರೆ, ಇನ್ನು ಮುಂದೆ ಮುಖ್ಯಮಂತ್ರಿ ಕುಲಪತಿಯಾಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ. ವಿಧಾನಸೌಧದಲ್ಲಿ ಸಂಪುಟ…

Read More

ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್ ಸಂಸ್ಥೆ ಜಗತ್ತಿನ ಜನರ ಪ್ರೀತಿ ಗಳಿಸಿದೆ….

Read More

ಮಂಗಳೂರು :132 ಜಿಲ್ಲಾಧಿಕಾರಿಗಳನ್ನು ಕಂಡ ದಕ್ಷಿಣ ಕನ್ನಡದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ನ.30 ರಿಂದ ಪಾರಂಪರಿಕ ಸಪ್ತಾಹ..!

ಮಂಗಳೂರು: ಸರಿ ಸುಮಾರು ಒಂದೂವರೆ ಶತಮಾನದ ಇತಿಹಾಸವುಳ್ಳ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು  ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಹಿಂದಿನ ಕೆನರಾ ಜಿಲ್ಲೆಯ ಆಡಳಿತ ಕೇಂದ್ರಸ್ಥಾನವಾಗಿತ್ತು. ಸ್ವಾತಂತ್ರ್ಯಾಪೂರ್ವದಲ್ಲಿ ಬ್ರಿಟೀಷ್ ಅಧಿಕಾರಿಗಳಿಗೆ ಇದು ಕಚೇರಿಯಾಗಿತ್ತು. ನಂತರವೂ ಜಿಲ್ಲಾಧಿಕಾರಿ ಕಚೇರಿ ಇಲ್ಲಿಯೇ ಕಾರ್ಯಾಚರಿಸುತ್ತಿತ್ತು. 1914 ರಿಂದ…

Read More

ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ , 10 ಮಂದಿ ಮೇಲೆ FIR..!

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ  ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್  ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಮೊದಲನೇ ವರ್ಷದ ವೈದ್ಯಕೀಯ ಮನೋಶಾಸ್ತ್ರ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿ ರ‍್ಯಾಗಿಂಗ್ ಪಿಡುಗಿಗೆ ಒಳಗಾದ ವಿದ್ಯಾರ್ಥಿಯಾಗಿದ್ದು ನವೆಂಬರ್ 25 ರಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಿದಾಯಿಸ್ ಎಂಬಾತ ಲೊಕೇಶನ್ ಕಳುಹಿಸಿ, ಅಲ್ಲಿಗೆ ಬರುವಂತೆ ಕಿರಿಯ ವಿದ್ಯಾರ್ಥಿಗೆ ತಿಳಿಸಿದ್ದಾನೆ….

Read More

ಬಜಪೆ: ಹೆಜ್ಜೇನು ದಾಳಿ; ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕ ಮೃತ್ಯು

ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಮೃತ ದುರ್ದೈವಿ. \ ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು ಪೊರ್ಕೋಡಿ ಪರಿಸರದಲ್ಲಿ ಕಾಲ್ನಡಿಗೆಯಲ್ಲಿ ಹೋಗಿ ಮನೆಮನೆಗೆ ದಿನಪ್ರತಿಕೆಯನ್ನು ವಿತರಿಸುತ್ತಿದ್ದರು. ಪರಿಸರದಲ್ಲಿ ಬೊಗ್ಗು…

Read More