admin

ಮಂಗಳೂರು: ಮರದ ದಿಮ್ಮಿ ಅಕ್ರಮ ಸಾಗಾಟ- ಪ್ರಕರಣ ದಾಖಲು..!

ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದ ಎರಡು ಮರಗಳ ರೆಂಬೆಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಪಡೆಯಲಾಗಿತ್ತು ಎನ್ನಲಾಗಿದೆ. ಆದರೆ ದೇವದಾರ್ ಮತ್ತು ಸಾಗುವಾನಿ ಸಹಿತ 8 ಮರಗಳಿಗೆ ಕೊಡಲಿಯೇಟು ಹಾಕಿದ್ದಲ್ಲದೆ ಮರದ ದಿಮ್ಮಿಗಳನ್ನು ಖಾಸಗಿ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ…

Read More

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್‌ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್‌ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ. ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್‌ ಗಳನ್ನು ಅಳವಡಿಸಲು ಇಲಾಖೆ ಚಿಂತನೆ…

Read More

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಡಿಕ್ಕಿ- ವಿದ್ಯಾರ್ಥಿನಿ ಮೃತ್ಯು, ಮೂವರಿಗೆ ಗಾಯ

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ, 4ನೇ ತರಗತಿಯ ವಿದ್ಯಾರ್ಥಿನಿ ಆಯಿಷಾ ವಹಿಬಾ (11 ) ಮೃತರು ಎಂದು ತಿಳಿದು ಬಂದಿದೆ.ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ….

Read More

ವಿಧಾನ ಪರಿಷತ್ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಭೇರಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದರು. ಕಿಶೋರ್ ಅವರು 3,654 ಮತ ಪಡೆದು ಗೆಲುವಿನ ನಗೆ ಬೀರಿದರು. 1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು. ಒಟ್ಟು…

Read More

ಮಂಗಳೂರು : ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ಪೇದೆ

ಮಂಗಳೂರು :ಅಪರಾತ್ರಿಯಲ್ಲಿ ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಸ್ಕೂಟರಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮುರ್ಶಿದಾ ಬಾನು ಬುಧವಾರ ನಸುಕಿನ ನಾಲ್ಕು ಗಂಟೆ ವೇಳೆಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ, ಕೆಪಿಟಿ ಬಳಿಯ ವ್ಯಾಸನಗರದ ತಿರುವಿನಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್ ಒಂದಕ್ಕೆ ಕೋಳಿ ಸಾಗಾಟದ ಪಿಕಪ್ ವಾಹನ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಪಿಕಪ್ ಮುಂಭಾಗ…

Read More

ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಗೆ ವಂಚನೆ-ಪ್ರಕರಣ ದಾಖಲು..!

ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು ಸಿಮ್ ಇದೆ. ನಿಮ್ಮ ವಿರುದ್ಧ ದೂರು ಇದ್ದು, ಮುಂಬೈಯ ಎಗ್ರಿಪಾಡ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ತನಗೆ ಅಸಾಧ್ಯ ಎಂದಾಗ ಬೇರೆ ಬೇರೆ ರೂಪದಲ್ಲಿ ಬೇರೆ ಬೇರೆ ಮಂದಿ ಮಾತನಾಡಿ ಸಿಬಿಐ ಅಧಿಕಾರಿ ಎಂದು ನಂಬಿಸಿ ಹಂತ ಹಂತವಾಗಿ 31,12,000 ರೂ….

Read More

ಮಂಗಳೂರು : ನನ್ನ ಜೊತೆ ಸಹಕರಿಸು, ಇಲ್ಲಾಂದ್ರೆ 24 ಪೀಸ್ ಮಾಡುವೆ – ಮೆಸೇಜ್ ಮಾಡಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ..!

ಮಂಗಳೂರು: ಸುರತ್ಕಲ್ ಸಮೀಪ ಅನ್ಯ ಕೋಮಿನ ಯುವಕನೋರ್ವ ತನ್ನ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ವಾಟ್ಸಪ್‌ ಮೆಸೇಜ್‌ ಮಾಡಿರುವ ಕುರಿತು ವರದಿಯಾಗಿದೆ.  ಸುರತ್ಕಲ್‌ ಇಡ್ಯಾ ನಿವಾಸಿ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ನನ್ನ ಜೊತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಮೆಸೇಜ್‌ ಮಾಡಿದ್ದಾನೆ. ಸುರತ್ಕಲ್‌ ಇಡ್ಯಾ ನಿವಾಸಿ ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಮೆಸೇಜ್‌ ಮಾಡಿರುವ ಆರೋಪಿ ಎಂದು ತಿಳಿದು ಬಂದಿದೆ.  ಈ ವಿಷಯಕ್ಕೆ ಸಂಬಂಧಪಟ್ಟಂತೆ ಸುರತ್ಕಲ್‌ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ….

Read More

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ ಶಿಬಿರ- ಊಟ ವಸತಿ ಉಚಿತ

ಧರ್ಮಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ  ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 05.11.24 ರಿಂದ 04.12.24ರ ವರೆಗೆ (30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/Z2xPLE1FigamcMBd9 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ ಸೈಟ್‌ನ್ನು…

Read More

ಪೂರ್ವದ್ವೇಷದ ಹಿನ್ನೆಲೆ: ಫರಂಗಿಪೇಟೆ ಬಳಿ ರೌಡಿಗಳ ಅಟ್ಟಹಾಸ, ದುಷ್ಕರ್ಮಿಗಳ ತಂಡದಿಂದ ತಲವಾರು ದಾಳಿ..!

ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದು ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್…

Read More

ಬೆಳ್ತಂಗಡಿ: ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು..!

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Read More