admin

ಮಂಗಳೂರು – ಮುಂಬಯಿ ಸಹಿತ 10 ವಿಮಾನಗಳಿಗೆ ಮತ್ತೆ ಬೆದರಿಕೆ ಕರೆ

ಮಂಗಳೂರು: ಸೋಮವಾರವೂ ಮಂಗಳೂರಿನಿಂದ ಹೊರಡುವ ವಿಮಾನ ಸಹಿತ ಒಟ್ಟು 10 ವಿಮಾನಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಬೆದರಿಕೆ ಕರೆ ಬಂದಿರುವ ಪ್ರಕರಣ ವರದಿಯಾಗಿದೆ. ಇದರಲ್ಲಿ ಮಂಗಳೂರಿನಿಂದ ಮುಂಬಯಿಗೆ ಹೋಗುವ ಇಂಡಿಗೋ ವಿಮಾನವೂ ಸೇರಿತ್ತು. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಚೇತನ್ ಸಿಂಗ್ ಎಂಬಾತನ ಖಾತೆಯಿಂದ ಈ ಬೆದರಿಕೆ ಸಂದೇಶ ಬಂದಿದ್ದು, ಮಂಗಳೂರು ವಿಮಾನ ನಿಲ್ದಾಣದವರು ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಮಂಗಳೂರಿನಿಂದ ಮುಂಬಯಿಗೆ ಹೊರಡುವ ಇ-164 ವಿಮಾನದಲ್ಲಿ ಬಾಂಬ್‌ ಇರಿಸಿರುವದಾಗಿ ಬೆದರಿಕೆ ಇತ್ತು….

Read More

ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ. ಇಎನ್‌ಸಿ ಠಾಣೆಯಲ್ಲಿ ಕಲಂ : 8©,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ದಸ್ತಗಿರಿ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ…

Read More

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

ಮಂಗಳೂರು : ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿಯೋರ್ವ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ‍್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ನಂಬರ್‌ಗಳಿಂದ ಕರೆ…

Read More

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

ಡಾ ತುಂಬೆ ಮೊಯ್ದಿನ್ ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ ಇತ್ತೀಚಿಗೆ ದುಬಾಯಿಯ ಅಲ್ ಜುರ್ಫ್ ಕ್ಯಾ0ಪ್ಸಸ್ ನಲ್ಲಿ ಜರಗಿತು . ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣ ರಾದ 700 ಮಂದಿ ವಿದ್ಯಾರ್ಥಿಗಳು ವೈಟ್ ಕೋಟ್ ಸಮಾರಂಭದಲ್ಲಿ ಅತಿಥಿಗಳಿಂದ ಪದವಿ ಸರ್ಟಿಫಿಕೇಟ್ ಪಡೆದು ಕೊಂಡರು .ನೂರಾ ಎರಡು ವಿವಿಧ ದೇಶಗಳ 5000 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು .ಬೇರೆ ಬೇರೆ ವಿಭಾಗಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು .ಅತ್ಯಂತ…

Read More

ಉಡುಪಿ: ಕತ್ತು ಸೀಳಿ ಸ್ನೇಹಿತನ ಭೀಕರ ಹತ್ಯೆ..!

ಉಡುಪಿ:  ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ 32 ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.  ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ…

Read More

ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿದ ಘಟನೆ ಹಾಸನ ನಗರದಲ್ಲಿನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ. ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು ಪಶ್ಚಿಮಬಂಗಾಳದ ವಿಳಾಸವಿರುವ ನಕಲಿ ಆಧಾರ್‌ಕಾರ್ಡ್ ಹೊಂದಿದ್ದರು. ನುಸುಳುಕೋರರನ್ನು ಡಿಸಿಆರ್‌ಬಿ ಪೊಲೀಸರು…

Read More

ಗಮನಿಸಿ : ನಿಮ್ಮ ಬಳಿ ಸರ್ಕಾರದ ಈ 8 `ಕಾರ್ಡ್’ ಗಳಿದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

ನವದೆಹಲಿ : ಸರ್ಕಾರದಿಂದ ನೀಡಲಾದ 8 ಪ್ರಮುಖ ಕಾರ್ಡ್‌ಗಳ ಮೂಲಕ ನೀವು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು-ಆಧಾರ್, ಕಿಸಾನ್, ಎಬಿಸಿ, ಶ್ರಮಿಕ್, ಸಂಜೀವನಿ, ಅಭಾ, ಗೋಲ್ಡನ್ ಮತ್ತು ಇ-ಶ್ರಮ್. ಇತ್ತೀಚಿನ ದಿನಗಳಲ್ಲಿ, ಸರ್ಕಾರದಿಂದ ಅನೇಕ ರೀತಿಯ ಕಾರ್ಡ್‌ಗಳನ್ನು ನೀಡಲಾಗುತ್ತಿದೆ, ಇದು ಸಾರ್ವಜನಿಕರಿಗೆ ಅನೇಕ ಪ್ರಯೋಜನಕಾರಿ ಯೋಜನೆಗಳಿಗೆ ಬಾಗಿಲು ತೆರೆಯುತ್ತದೆ. ನೀವು ಈ ಕಾರ್ಡ್‌ಗಳನ್ನು ಹೊಂದಿದ್ದರೆ, ನೀವು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಈ ಲೇಖನದಲ್ಲಿ, ಆ ಏಳು ಪ್ರಮುಖ ಕಾರ್ಡ್‌ಗಳ ಕುರಿತು ನಾವು ನಿಮಗೆ ಮಾಹಿತಿಯನ್ನು…

Read More

 ಬೆಂಗಳೂರು ‘ಕಂಬಳಕ್ಕೆ’ ಅನುಮತಿ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ‘ಪೆಟಾ’

ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ…

Read More

13.87 ಲಕ್ಷ ಅನರ್ಹ BPL ಕಾರ್ಡ್‌ಗಳ ಪೈಕಿ 3.63 ಲಕ್ಷ ಕಾರ್ಡ್‌ಗಳು ರದ್ದು..!

ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ BPL ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 3.63 ಲಕ್ಷ BPL ಕಾರ್ಡುಗಳನ್ನು ರದ್ದು ಪಡಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಕಾಸಸೌಧಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಇನ್ನೂ 3.97 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದಾಗಬೇಕಿದೆ.‌ ಸುಮಾರು 4,036 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು, ಈ ಪೈಕಿ 2,964 ರದ್ದು ಮಾಡಲಾಗಿದೆ. ಅವರಿಗೆ…

Read More

ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

ನವದೆಹಲಿ:  ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. “ವಿದ್ಯಾರ್ಥಿಗಳಿಗೆ ಏಕೆ ತೊಂದರೆ ನೀಡುತ್ತಿದ್ದೀರಿ, ರಾಜ್ಯ ಸರ್ಕಾರವೇ ಈ ರೀತಿಯಾಗಿ…

Read More