admin

ಉಡುಪಿ: ಮನೆಗೆ ಕರೆದು ವ್ಯಕ್ತಿಗೆ ಹನಿಟ್ರ್ಯಾಪ್, ಹಣ ಸುಲಿಗೆ- ಮಹಿಳೆ ಸಹಿತ 6 ಮಂದಿ ಅರೆಸ್ಟ್

ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್…

Read More

ಮಗು ಮಾರಾಟ : ಮಂಗಳೂರಿನ ಡಾಕ್ಟರ್ ಸೇರಿದಂತೆ ಮೂವರು ಅರೆಸ್ಟ್

ಉಡುಪಿ: ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅತ್ಯಾಚಾರ ಸಂತ್ರಸ್ಥೆಯ ಮಗುವನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಸಿ ರೋಡ್‌ನ‌ ವೈದ್ಯ ಡಾ| ಸೋಮೇಶ್‌ ಸೊಲೊಮನ್‌, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್‌ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್‌ ನಾರಾಯಣ ಎಂದು ಗುರುತಿಸಲಾಗಿದೆ. ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು…

Read More

ಸೆ.22ರಿಂದ ಹೊಸ ಜಿಎಸ್‌ಟಿ ನೀತಿ: ದಸರಾ ಸಂಭ್ರಮ ಹೆಚ್ಚಿಸಿದ ಕೇಂದ್ರ ಸರ್ಕಾರ, ಯಾವ್ಯಾವ ವಸ್ತು ಅಗ್ಗ? ಯಾವುದು ದುಬಾರಿ?

ನವದೆಹಲಿ: ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ದಸರಾ ಸಂಭ್ರಮ ಹೆಚ್ಚಿಸಿದೆ. ಕಳೆದ ಸ್ವಾತಂತ್ರ್ಯ ದಿನದಂದು ದೆಹಲಿಯ‌ ಕೆಂಪುಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಹಲವು ಜನಪರ ಸುಧಾರಣೆ ತರಲಾಗಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ…

Read More

 ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಮತ್ತೆ 3 ದಿನ SIT ಕಸ್ಟಡಿಗೆ- ನ್ಯಾಯಾಲಯ ಆದೇಶ

 ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಪೊಲೀಸರು ಮಾಸ್ಕ್ ಮ್ಯಾನ್ ನನ್ನು ಕೋರ್ಟ್ ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ….

Read More

ಸೌಜನ್ಯ ಕೊಲೆ ಪ್ರಕರಣ: ಕುಟುಂಬಸ್ಥರು ಆರೋಪಿಸಿದವರಿಗೆ ಎಸ್‌ಐಟಿ ಬುಲಾವ್- ಕಚೇರಿಗೆ ಹಾಜರಾದ ಉದಯ್ ಜೈನ್

ಧರ್ಮಸ್ಥಳ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡಿದ್ದು, ಆರೋಪಕ್ಕೊಳಗಾಗಿರುವವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಗೆ ಒಳಗಾಗಿರುವವರಲ್ಲಿ ಒಬ್ಬರಾದ ಉದಯ್ ಜೈನ್, ತಾವು ಯಾವುದೇ ತನಿಖೆಗೂ ಸಿದ್ಧವಿದ್ದು, ಮತ್ತೊಮ್ಮೆ ತಮ್ಮ ಬ್ರೈನ್ ಮ್ಯಾಪಿಂಗ್ ಮಾಡಲು ಕೂಡ ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಎಸ್‌ಐಟಿ ಕಚೇರಿಗೆ ಉದಯ್ ಜೈನ್ ಹಾಜರು:ಸೌಜನ್ಯ ಕುಟುಂಬಸ್ಥರು ಆರೋಪ ಮಾಡಿರುವವರಲ್ಲಿ ಒಬ್ಬರಾದ ಉದಯ್ ಜೈನ್, ಎಸ್‌ಐಟಿ ಕಚೇರಿಗೆ ಹಾಜರಾಗಿದ್ದಾರೆ. “ನಿನ್ನೆ ರಾತ್ರಿ ಎಸ್‌ಐಟಿ ನನಗೆ ಕರೆ…

Read More

ಸೃಷ್ಟಿ-ಸ್ಥಿತಿ-ಲಯಗಳ ನಡುವಿನ ಉಯ್ಯಾಲೆಯಾಡುವ ಜಗದ ಸೋಜಿಗದ ಅನಾವರಣ

ಇತ್ತೀಚೆಗೆ ಉಡುಪಿಯ ಐವೈಸಿ ಸಭಾಂಗಣದಲ್ಲಿ ಕಲಾರಂಗದ ಆಯೋಜನೆಯಲ್ಲಿ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಪ್ರಸಂಗದ ವಿಭಿನ್ನ ಪ್ರದರ್ಶನ ನಡೆಯಿತು. ಈ ಪ್ರದರ್ಶನದ ಹಿನ್ನೆಲೆಯಲ್ಲಿ ಸಾಕಷ್ಟು ಪೂರ್ವತಯಾರಿಯನ್ನು ಮಾಡಲಾಗಿತ್ತು. ಸೀಮಿತ ಪ್ರೇಕ್ಷಕರನ್ನೊಳಗೊಂಡ ಕಾರ್ಯಕ್ರಮ ಇದಾಗಿತ್ತು. ‘ಥಿಯೇಟರ್ ಯಕ್ಷ’ ಸದಸ್ಯನಾಗಿ ಮತ್ತು ಈ ಪ್ರಸಂಗದ ಪೂರ್ವತಯಾರಿಗಾಗಿ ಶ್ರಮಿಸಿದ ತಂಡದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಕೆಲವು ವಿಚಾರಗಳನ್ನು ಈ ಬರಹದ ಮೂಲಕ ಹಂಚಿಕೊಳ್ಳುತ್ತಿದ್ದೇನೆ. ಉಡುಪಿಯ ಯಕ್ಷಗಾನ ಕಲಾರಂಗ ಆರಂಭದ ದಿನಗಳಿಂದಲೂ ಯಕ್ಷಗಾನ ಕುರಿತು ಗಂಭೀರವಾಗಿ ತೊಡಗಿಸಿಕೊಂಡಿರುವ ಸಂಸ್ಥೆ. ಕಲೆಗೆ ಮತ್ತು ಕಲಾವಿದರಿಗೆ ಕಾಮಧೇನುವಿಂತಿರುವ…

Read More

ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ: ತಿರುಚ್ಚಿ ರನ್ವೇಯಲ್ಲಿ ಹಾರಾಟ ಸ್ಥಗಿತ

ನವದೆಹಲಿ: ಯುಎಇಯ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದ ರನ್ವೇ ಬಳಿ ಬುಧವಾರ ಬೆಳಿಗ್ಗೆ ಸ್ಥಗಿತಗೊಂಡಿದೆ. ತಿರುಚ್ಚಿಯಿಂದ ಶಾರ್ಜಾಗೆ ಮುಂಜಾನೆ 4.45 ಕ್ಕೆ ಹೊರಡಬೇಕಿದ್ದ ವಿಮಾನವು ಸಮಸ್ಯೆಯಿಂದಾಗಿ ಟೇಕ್ ಆಫ್ ಆಗಲು ಸಾಧ್ಯವಾಗಲಿಲ್ಲ. ಎಂಜಿನಿಯರ್ ಗಳು ತಾಂತ್ರಿಕ ಸಮಸ್ಯೆಗೆ ಸ್ಪಂದಿಸಿದಾಗ ಪ್ರಯಾಣಿಕರು ಟಾರ್ಮಾಕ್ ನಲ್ಲಿಯೇ ಉಳಿದಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ದೃಢಪಡಿಸಿದ್ದಾರೆ. ನಂತರ ಅಧಿಕಾರಿಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲು ವ್ಯವಸ್ಥೆ ಮಾಡಿದರು. ಪರಿಸ್ಥಿತಿಯನ್ನು ಪರಿಹರಿಸಲು ಮತ್ತು…

Read More

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು : ನಗರದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುನೀಲ್ ಎಂದು ತಿಳಿದು ಬಂದಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದಿನಾಂಕ: 01-09-2025 ರಂದು ಸಂಜೆ:4-00 ಗಂಟೆಗೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ವಿನಾಯಕ ರವರಿಗೆ ಬಾತ್ಮೀದಾರರೊಬ್ಬರಿಂದ ಮಂಗಳೂರು ನಗರದ ಸುಲ್ತಾನ್ ಭತ್ತೇರಿ ಎಂಬಲ್ಲಿ ಒಬ್ಬ ವ್ಯಕ್ತಿಯು KA-19 HJ1184 ನೇ ಬಿಳಿ ಬಣ್ಣದ ಸ್ಕೂಟರ್…

Read More

ಮಂಗಳೂರು: ಸ್ವಯಂ ಗಾಯ ಮಾಡಿಕೊಂಡು ಹಲ್ಲೆ ಪ್ರಕರಣ ಸೃಷ್ಟಿಸಿದ ಆಟೋ ಚಾಲಕ

ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. ರಿಕ್ಷಾ ಚಾಲಕ ಬಶೀರ್ ಎಂಬಾತ ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದನು. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಅಲ್ಲಿ ಅಂತಹ ಘಟನೆ ನಡೆದಿಲ್ಲ. ಚಾಲಕನೇ ಸಾರ್ವಜನಿಕರ ಗಮನ ಸೆಳೆಯಲು…

Read More

ಮೂಡುಬಿದಿರೆ: ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ- ಆರೋಪಿ ಪೊಲೀಸ್ ಅರೆಸ್ಟ್

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ‌ ಮಾತನಾಡಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಬಗ್ಗೆ ಆ.23ರಂದು‌ ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು ಎಂದು‌ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಹಾಗೂ ಪತ್ನಿಯನ್ನು ಠಾಣೆಗೆ ಕರೆಸಿ ಮಾತನಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿ ಕಳುಹಿಸಿದ್ದರು ಎಂದು ತಿಳಿದು…

Read More