admin

ಡಿ.7ರಂದು ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ ‘ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಪಂಪ್ ವೆಲ್ ನಲ್ಲಿ ಖಾಸಗಿ ಹೊಟೇಲ್ ಹಾಲಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 2023ರಲ್ಲಿ ಮೊದಲ ವರ್ಷದ ಸಾಂತ್ವನದ ಸಂಚಾರ’ (A Day with Bedridden) ಮತ್ತು 2024ರಲ್ಲಿಸಾಂತ್ವನದ ಸಂಚಾರ’ (A day with orphans) ಯಶಸ್ವಿಯಾಗಿ ನಡೆದಿತ್ತು. ಎರಡು ವರ್ಷಗಳ ಹಿಂದೆ ಹಾಸಿಗೆ ಪೀಡಿತರ ಜೊತೆ…

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀ ಚಿದಂಬರ ಬೈಕಂಪಾಡಿ ಅವರು “ಮಾಧ್ಯಮ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಮಂಗಳೂರು: ಡಿ.29 ರಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಪ್ರಬಂಧ ಸ್ಪರ್ಧೆ

ಮಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪುಣ್ಯ ತಿಥಿಯ ಸಲುವಾಗಿ ಕಲ್ಕೂರ ಪ್ರತಿಷ್ಠಾನವು ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಡಿ.29 ರಂದು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಕನ್ನಡ ಹಾಗೂ ಇಂಗ್ಲಿಷ್‌ ಎರಡೂ ಭಾಷೆಗಳಲ್ಲಿ ಪ್ರಬಂಧ ಬರೆಯಲು ಅವಕಾಶವನ್ನು ನೀಡಲಾಗುತ್ತಿದೆ. ವಿಷಯ: ಕಾಲೇಜು ವಿಭಾಗ – ರಾಷ್ಟ್ರ ಮತ್ತು ಧರ್ಮ ವಿಶ್ವೇಶತೀರ್ಥರ ಚಿಂತನೆ ನಾನು ಕಂಡಂತೆ. ಮುಕ್ತ ವಿಭಾಗ – ಶ್ರೀ ವಿಶ್ವೇಶತೀರ್ಥರು, ಯತಿವರ್ಯರು ವಿಶ್ವ ಮಾನ್ಯರು, ಅವಲೋಕನ – ಅನುಸಂಧಾನ…

Read More

ದೆಹಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರ ಜೈಲಿಗೂ ನಂಟು?! : ‘NIA’ ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು

 ದೆಹಲಿಯಲ್ಲಿ ಕೆಂಪುಕೋಟೆಯ ಬಳಿ ಕಾರುಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ತನಿಖೆ ಚುರುಕುಗೊಳಿಸಿದ್ದು ಇದೀಗ ಮತ್ತೊಂದು ಸ್ಫೋಟಕ ಅಂಶ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ ಮೊಬೈಲ್ ಬಳಕೆ ವಿಡಿಯೋ ವೈರಲ್ ಆದ ನಂತರ ಎನ್‌ಐಎ ತನಿಖೆ ಚುರುಕುಗೊಂಡಿದೆ. ಉಗ್ರ ಜುಹಾದ್ ಶಕೀಲ್ ಮನ್ನಾ ಜೈಲಿನಲ್ಲಿದ್ದುಕೊಂಡು ಮೊಬೈಲ್ ಬಳಸಿದ್ದ ವಿಡಿಯೋ ಬೆಳಕಿಗೆ ಬಂದಿದ್ದು, ದೆಹಲಿ ಬ್ಲಾಸ್ಟ್‌ಗೂ ಈತನ ಸಂಪರ್ಕ ಇರುವ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಅಧಿಕಾರಿಗಳು ಈಗಾಗಲೇ ಜೈಲಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.ಈ ಬ್ಲಾಸ್ಟ್​ಗೂ…

Read More

ಸ್ವಂತ ಮಗ ಸೇರಿ ನಾಲ್ವರು ಮಕ್ಕಳನ್ನು ಕೊಂದ ಕ್ರೂರಿ ಮಹಿಳೆ.!

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆಯೊಬ್ಬಳು ಸ್ವಂತ ಮಗ ಸೇರಿದಂತೆ ನಾಲ್ವರು ಮಕ್ಕಳನ್ನು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಪೊಲೀಸರು ಒಬ್ಬ ಕ್ರೂರ ಮಹಿಳೆಯನ್ನು ಬಂಧಿಸಿದ್ದಾರೆ, ಆಕೆಯ ಭಯಾನಕ ಕೃತ್ಯಗಳು ಕುಟುಂಬದಿಂದ ಪೊಲೀಸರವರೆಗೆ ಎಲ್ಲರನ್ನೂ ಆಘಾತಗೊಳಿಸಿವೆ. ಈ ಕಲ್ಲು ಹೃದಯದ ಮಹಿಳೆ ನಾಲ್ಕು ಮಕ್ಕಳನ್ನು ಒಬ್ಬೊಬ್ಬರಾಗಿ ಕ್ರೂರವಾಗಿ ಕೊಂದಿದ್ದಾಳೆ. ಆಶ್ಚರ್ಯಕರವಾಗಿ, ಅವಳು ಕೊಂದ ನಾಲ್ವರು ಮಕ್ಕಳು ಅವಳ ಸ್ವಂತ ಕುಟುಂಬ ಮತ್ತು ಸಂಬಂಧಿಕರು. ಆಘಾತಕಾರಿಯಾಗಿ, ಈ ನಾಲ್ವರು ಮುಗ್ಧ ಮಕ್ಕಳಲ್ಲಿ ಅವಳ ಸ್ವಂತ…

Read More

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ- ಮುಂದಿನ ವರ್ಷ ಪಠ್ಯಪುಸ್ತಕದ ಜೊತೆಗೆ ನೋಟ್‌ಬುಕ್‌ ಉಚಿತ

ಬೆಂಗಳೂರು: ಸರ್ಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್ ಬುಕ್ ಕೂಡಾ ಸಿಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಶೇ 90% ಬಡ ಮಕ್ಕಳು ಓದುತ್ತಿದ್ದಾರೆ. ಇದರಲ್ಲಿ ಪದವಿ ಪೂರ್ವ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳು ಸಿಗದ ಕಾರಣ ಇಷ್ಟು ವರ್ಷ ನೋಟ್ ಬುಕ್ ಜೊತೆಗೆ…

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀ ಪುರುಷೋತ್ತಮ ಕುಲಾಲ್ ಕಲ್ಬಾವಿ ಅವರು “ಧಾರ್ಮಿಕ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಡಿ.20 – ಜ.4 ರವರೆಗೆ “ಕರಾವಳಿ ಉತ್ಸವ 2025-26”

ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಉತ್ಸವ ಮೈದಾನ, ಕದ್ರಿ ಪಾರ್ಕ್ ಮತ್ತು ನಗರದ ಕಡಲತೀರಗಳಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಅವರು ಹೇಳಿದರು. ಡಿ.20ರಂದು ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ನ ಶಾಸಕರು, ವಿವಿಧ ಅಕಾಡಮಿ,…

Read More

ಕಾರ್ಕಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..! ಮೂವರಿಗೆ ಗಾಯ

ಕಾರ್ಕಳ: ಕಾರ್ಕಳದಿಂದ ಹೆಬ್ರಿ ಕಡೆಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಪಂಚಾಯತ್ ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡವರು ಎಂದು ತಿಳಿದುಬಂದಿದೆ. ಹಿರ್ಗಾನ ಗ್ರಾಮದ ಮೂರೂರು ಬಳಿ ಸದಾನಂದ ನಾಯ್ಕ್ ಅವರು ತನ್ನ ಕಾರಿನಲ್ಲಿ ಪತ್ನಿ ಹಾಗೂ ಮಗುವಿನ ಜೊತೆ ತಮ್ಮ ಮನೆ ಬ್ರಹ್ಮಾವರದ ಚಾಂತಾರಿಗೆ ಹೊರಟಿದ್ದರು. ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಮುರೂರು ಬಳಿ ಏಕಾಏಕಿ…

Read More

ಮನೆ ಕಳ್ಳತನ ಪ್ರಕರಣದ ಆರೋಪಿ ಬಂಧನ..!!

ಉಡುಪಿಯ ಒಳಕಾಡು ಮನೆಯೊಂದರಿಂದ ಚಿನ್ನಾಭರಣ ಕಳವುಗೈದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಕ್ಕಿಕಟ್ಟೆ ನಿವಾಸಿ ಸುಕೇಶ್ ನಾಯ್ಕ್ (37) ಬಂಧಿತ ಆರೋಪಿ. ಡಿ.30ರಂದು  ಶೈಲಾ ವಿಲ್ಹೆಲ್ ಮೀನಾ ಎಂಬವರ ಮನೆಯಲ್ಲಿ  ಸುಮಾರು 548.31 ಗ್ರಾಂ ಚಿನ್ನಾಭರಣ  ಹಾಗೂ ಮೊಬೈಲ್ ಫೋನ್ ನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಉಡುಪಿ ನಗರದ ಕಿನಿಮೂಲ್ಕಿ ಹಿರೇನ್‌ ಬಾರ್‌ ಬಳಿ ಬಂಧಿಸಲಾಗಿದೆ. ಬಂಧಿತನಿಂದ  65,79,720 ರೂ ಮೌಲ್ಯದ  ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ….

Read More