admin

ಪುತ್ತೂರು: ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ – ಬ್ಯಾಂಕ್ ಸಿಬ್ಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು

ಪುತ್ತೂರು:ಬಲ್ನಾಡು ಉಜಿರುಪಾದೆಯಲ್ಲಿ ಸಾಲ ಮರುಪಾವ ತಿಗೆ ಸಂಬಂಧಿಸಿ ಮನೆಗೆ ತೆರಳಿದ್ದ ಬ್ಯಾಂಕ್ ಸಿಬಂದಿಗಳಿಗೆ ಪಿಸ್ತೂಲ್‌ ತೋರಿಸಿಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿದೂರು ದಾಖಲಾಗಿದ್ದು, ಬ್ಯಾಂಕ್ ಸಿಬಂದಿ ವಿರುದ್ಧ ಮನೆಯಲ್ಲಿದ್ದ ಮಹಿಳೆ ಮಾನಭಂಗಕ್ಕೆ ಯತ್ನಿಸಿರುವ ದೂರು ನೀಡಿದ್ದಾರೆ. ಕಾರಿನಲ್ಲಿ ಬಂದ ಅಪರಿಚಿತರು ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಸಾಲ ತೀರಿಸಲು ಸಾಧ್ಯವಿಲ್ಲದಿದ್ದರೆ ನಮ್ಮೊಂದಿಗೆ ಬನ್ನಿ ಎಂದು ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ, ಈ ಬಗ್ಗೆ ದೂರು ನೀಡಿದರೆ ನೀವು ಪಿಸ್ತೂಲ್ ತೋರಿಸಿ ಬೆದರಿಸಿದ್ದೀರೆಂದು ನಿಮ್ಮ ವಿರುದ್ಧವೇ ದೂರು ನೀಡಿ ನಿಮ್ಮನ್ನು ಜೈಲಿಗೆ ಹಾಕಿಸುತ್ತೇವೆ…

Read More

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು..! ಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ 

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರು ತಾಲೂಕಿನ ಕೆಮ್ಮಾರ ಎಂಬಲ್ಲಿ ಶನಿವಾರ ಸಂಭವಿಸಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಯಲ್ಲಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿ‌ ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆ ಬದಿಯ ಪಕ್ಕದಲ್ಲೇ ಇರುವ ತಂಗುದಾಣ ಬಳಿ ಕಾರು ಮಗುಚಿ ಬಿದ್ದಿದೆ. ಬಸ್ ನಿಲ್ದಾಣದ ಬಳಿ ಹೆಚ್ಚಿನ‌ ಪ್ರಯಾಣಿಕರಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಉರುಳಿ ಬಿದ್ದ ಕಾರನ್ನು ಸ್ಥಳೀಯರು ತಕ್ಷಣವೇ ಮೇಲಕ್ಕೆತ್ತಿ ಚಾಲಕನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Read More

ಮಂಗಳೂರು: ಹೊತ್ತಿ ಉರಿದ BMW ಕಾರು..!

ಮಂಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರಿನಲ್ಲಿ ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಸಮೀಪ ಇಂದು ನಡೆದಿದೆ. ಇಂದು ಮಧ್ಯಾಹ್ನದ ವೇಳೆಗೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಸುಟ್ಟು ಕರಕಲಾದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಕಿ ಅವಘಡಕ್ಕೆ…

Read More

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ ಇಬ್ರಾಹಿಂ ಖಲೀಲ್ ಸಮಹಾದಿ ಎಂಬವರು ಉಗ್ರವಾದ ಭಯೋತ್ಪಾದನೆ ಆರೋಪ ಹೊರಿಸಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಪೋಸ್ಟ್ ಹಲವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಇಬ್ರಾಹಿಂ ಖಲೀಲ್ ಸಮಹಾದಿ ತನ್ನ ಫೇಸ್ಬುಕ್ ಖಾತೆಯಲ್ಲಿ ‘ಪ್ರವೀಣ್ ನೆಟ್ಟಾರು ಕೊಲೆ ಮಾಡಲು ಮೊತ್ತ ಮೊದಲು ಬೆಳ್ಳಾರೆ ಝಕರಿಯಾ ಮಸ್ಜಿದ್ ವಠಾರದಲ್ಲಿ ಮೊತ್ತ ಮೊದಲು…

Read More

ಓವರ್ ಡೋಸ್ ಇಂಜೆಕ್ಷನ್ ಗೆ 7 ವರ್ಷದ ಬಾಲಕ ಸಾವು..!

ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೊಬ್ಬ ವೈದ್ಯರು ಇಂಜಕ್ಷನ್ ನೀಡಿದ ಬಳಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಅ ಜ್ಜಂಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಸೋನೇಶ್ ಮೃತ ಬಾಲಕ. ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿದ ಬಳಲುತ್ತಿದ್ದ ಬಾಲಕನನ್ನು ಪೋಷಕರು ಅಜ್ಜಂಪುರದ ಕ್ಲಿನಿಕ್ ಗೆ ಕರೆದೊಯ್ದಿದ್ದರು. ವೈದ್ಯ ವರುಣ್ ಬಾಲಕನಿಗೆ ಇಂಜಕ್ಷನ್ ನೀಡಿದ್ದರು. ಬಾಲಕನಿಗೆ ಇಂಜಕ್ಷನ್ ನೀಡಿದ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು. ಬಾಲಕ ಸ್ಥಿತಿ ಇನ್ನಷ್ಟು ಗಂಭೀರವಾಗಿತ್ತು. ತಕ್ಷಣ…

Read More

ದೀಪಾವಳಿಗೂ ಮುನ್ನ ದೇಶದ ಜನತೆಗೆ ಬಿಗ್ ರಿಲೀಫ್ : ಔಷಧ, ಬೈಕ್ ಸೇರಿದಂತೆ 100 ವಸ್ತುಗಳ ಮೇಲೆ ತೆರಿಗೆ ಇಳಿಕೆ..!

ನವದೆಹಲಿ :ಹಣದುಬ್ಬರದಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಪರಿಹಾರ ಸಿಗಬಹುದು. ಏಕೆಂದರೆ, ಕೇಂದ್ರ ಸರ್ಕಾರವು 100 ಕ್ಕೂ ಹೆಚ್ಚು ಸರಕುಗಳ ಮೇಲಿನ ಜಿಎಸ್‌ಟಿ ದರಗಳನ್ನು ಬದಲಾಯಿಸಲು ಯೋಜಿಸುತ್ತಿದೆ. ಇವುಗಳಲ್ಲಿ ಅಗತ್ಯ ಔಷಧಗಳು, ಬೈಕ್‌ಗಳು ಮತ್ತು ಇತರ ಹಲವು ವಸ್ತುಗಳು ಸೇರಿವೆ. ವಾಸ್ತವವಾಗಿ, ಕೇಂದ್ರ ಸರ್ಕಾರದ ಮಂತ್ರಿಗಳ ಗುಂಪು (GoM) ಜಿಎಸ್‌ಟಿ ದರಗಳನ್ನು ಸುಧಾರಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ, ಇದರಲ್ಲಿ 100 ಕ್ಕೂ ಹೆಚ್ಚು ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಪರಿಷ್ಕರಿಸುವ ಯೋಜನೆಯನ್ನು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪಶ್ಚಿಮ…

Read More

ಬಂಟ್ವಾಳ : ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ..!

ಬಂಟ್ವಾಳ: ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ಎಂದು ತಿಳಿದು ಬಂದಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಹೊನ್ನಪ್ಪ ಗೌಡ ರವರು ಇತ್ತೀಚೆಗೆ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿರುತ್ತಿದ್ದರು ಎಂದು ತಿಳಿದು ಬಂದಿದೆ.ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮುಡಾ ಹಗರಣ FIR ದಾಖಲು: A1 ಆರೋಪಿಯಾಗಿ ಸಿಎಂ ಸಿದ್ಧರಾಮಯ್ಯ, A2 ಪತ್ನಿ ಪಾರ್ವತಿ

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ…

Read More

ಸುರತ್ಕಲ್: ನಿಗೂಢ ಸ್ಫೋಟ-ಬೆಚ್ಚಿಬಿದ್ದ ಜನತೆ..!

ಸುರತ್ಕಲ್: ಸುರತ್ಕಲ್ ಸಮೀಪದ ಮಧ್ಯಾಹ್ನದ ಗಣೇಶಪುರದಲ್ಲಿ ವೇಳೆ ಕೈಕಂಬ ಮಂಗಳಪೇಟೆ ರಸ್ತೆ ಬದಿ ನಿಗೂಢ ಸ್ಪೋಟದ ಶಬ್ದ ಕೇಳಿ ಬಂದು ಜನತೆ ಬೆಚ್ಚಿಬಿದ್ದ ಘಟನೆ ನಡೆದಿದೆ. ಸಮೀಪದ ರಿಕ್ಷಾ ಚಾಲಕರು, ಜನರು ಏನಾಯಿತು ಎಂದು ಸುತ್ತಮುತ್ತ ಹುಡುಕಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಗೂ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ಸಿಲಿಂಡರ್ ಮಾರಾಟ ಮಳಿಗೆಯಲ್ಲಿ ನಾಬ್ ಸಿಕ್ಕಿಸುವ ವೇಳೆ ಅದು ಆಕಸ್ಮಿಕವಾಗಿ ಹಾರಿದ ಕಾರಣ ಶಬ್ದ ಉಂಟಾಗಿದೆ ಎಂದು ತಿಳಿದುಬಂದಿದೆ. ಅನಂತರ ಅಲ್ಲಿನ ಜನ ನಿಟ್ಟುಸಿರು ಬಿಟ್ಟರು.

Read More

ಮಂಗಳೂರು: ಠೇವಣಿ ಮೊತ್ತ ಕಡಿತಗೊಳಿಸಿದ್ದ ಅಂಚೆ ಇಲಾಖೆ – ಬಡ್ಡಿ ಸಹಿತ ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಆದೇಶ

ಮಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ತನ್ನ ಪಿಂಚಣಿ ಹಣವನ್ನು 5ವರ್ಷದ ಅವಧಿಗೆ ಅಂಚೆ ಕಚೇರಿಯಲ್ಲಿ ಠೇವಣಿ ಇರಿಸಿದ್ದರು. ಅವಧಿಗೂ ಮುನ್ನವೇ ಹಿಂಪಡೆದ ವೇಳೆ ಜಾರಣವಿಲ್ಲದೆ ಕಡಿತಗೊಳಿಸಿದ್ದ ಮೊತ್ತವನ್ನು ಬಡ್ಡಿ ಸಹಿತ ಶಿಕ್ಷಕಿಗೆ ಮರುಪಾವತಿಸುವಂತೆ ಮಂಗಳೂರು ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರು ಮೂಲದ ನಿವೃತ್ತ ಶಿಕ್ಷಕಿ ರೀಟಾ ನೊರೋನ್ಹಾ ತಮ್ಮ ಪಿಂಚಣಿ ಹಣ 22ಲಕ್ಷ ರೂಪಾಯಿಯನ್ನು ಕಂಕನಾಡಿಯಲ್ಲಿರುವ ಅಂಚೆ ಕಚೇರಿಯಲ್ಲಿ 2020ರ ಫೆಬ್ರವರಿ 28ಕ್ಕೆ 5 ವರ್ಷಗಳ ಅವಧಿಗೆ ಜಮೆ ಮಾಡಿದ್ದರು. ಪ್ರತಿ ವರ್ಷ 1,74,355 ರೂಪಾಯಿ ಬಡ್ಡಿ…

Read More