admin

ಸತತ 216 ಗಂಟೆಗಳ ಭರತನಾಟ್ಯ ಪ್ರದರ್ಶನ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ದೀಕ್ಷಾ

ಉಡುಪಿ : ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ. ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ, ಈ ಪ್ರದರ್ಶನದ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆ. 21 ರಂದು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು ಮತ್ತು ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳನ್ನು ಪೂರ್ಣಗೊಂಡಿದೆ.ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ. ಪೂಜಾರಿ ಅವರು ಭರತನಾಟ್ಯಂನಲ್ಲಿ ಉನ್ನತ ಸ್ಥಾನಗಳನ್ನು…

Read More

ಮಂಗಳೂರು: ಸುಗ್ಗಿ ಸೌಹಾರ್ದ ಸಹಕಾರಿ ನಿಯಮಿತ ಕಂಕನಾಡಿ ಇದರ 12 ನೇ ವಾರ್ಷಿಕ ಮಹಾಸಭೆ

ಮಂಗಳೂರು: ಸುಗ್ಗಿ ಸೌಹಾರ್ದ ಸಹಕಾರಿ ನಿಯಮಿತ ಕಂಕನಾಡಿ ಇದರ 12 ನೇ ವಾರ್ಷಿಕ ಮಹಾ ಸಭೆಯು ಕಂಕನಾಡಿ ಸಿಟಿ ಚರ್ಚ್ ಸಭಾಂಗಣ ಎಂಪೋರೀಯಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷ ತೆ ಯನ್ನು ಲಯನ್ ಅನಿಲ್ ದಾಸ್ ಸುಗ್ಗಿ ಸೌಹಾರ್ದ ಸಹಕಾರಿಯ ಅಧ್ಯಕ್ಷರು ವಹಿಸಿದ್ದರು. ಮುಖ್ಯ ಕಾರ್ಯನಿರ್ವ ನಿರ್ವಹಣಾಧಿಕಾರಿ ಶಿವ ಪ್ರಕಾಶ್. ಪ್ರಸಕ್ತ ವಾರ್ಷಿಕ ವರದಿಯನ್ನು ವಾಚಿಸಿದರು. ಶ್ರೀ ಕಿರಣ್ ಅಟ್ಟಲೂರ್ ( ಉಪಾಧ್ಯಕ್ಷರು) ನಿರ್ದೇಶಕರುಗಳಾದ ಶ್ರೀ ದೇವರಾಜ್, ಶ್ರೀ ಮಹೇಶ್ ಕುಮಾರ್, ಶ್ರೀ ಪ್ರಸಾದ ತೊಮಸ್,…

Read More

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : SITಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್.!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಿರೀಶ್ ಮಟ್ಟಣ್ಣನವರ್ ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ನೀಡಿದ್ದಾರೆ. ಗಿರೀಶ್ ಮಟ್ಟಣ್ಣನವರ್ ಅವರು ಇಂದು ಎಸ್ ಐಟಿಗೆ 500 ಪುಟಗಳ ದಾಖಲೆಗಳನ್ನು ನೀಡಿದ್ದು, ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ತನಿಖೆ ನಡೆಸಿ. ಕಳೆದ 35 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಆಗಿರುವ ಅಸಹಜ ಸಾವುಗಳ ವಿವರವಾದ ದಾಖಲೆ ನೀಡಿದ್ದಾರೆ. ಇನ್ನು ಇಂದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಹಲವು…

Read More

ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು- ಕಂದಾಯ ಇಲಾಖೆ ಆದೇಶ

ಕರ್ನಾಟಕ ಸರ್ಕಾರವು ಆಸ್ತಿ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿದೆ. ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ನಾಳೆಯಿಂದ ಅಂದರೆ ಆಗಸ್ಟ್ 31ರಿಂದ ಪರಿಷ್ಕೃತ ಆಸ್ತಿ ನೋಂದಣಿ ಶುಲ್ಕ ಜಾರಿಗೆ ಬರಲಿದೆ. ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ ಇತ್ತು. ಆದರೆ ಈಗ  ಏರಿಕೆಯಿಂದ ಒಟ್ಟು ಶೇ.7.6ರಷ್ಟು ಶುಲ್ಕ ಕಟ್ಟಬೇಕು. ಈ…

Read More

ದೂರುದಾರ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ. ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ದಿನಾಂಕ 29-08-2025 ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ, 2.33 ಗಾಂಜಾಹಾಗೂ 0.45 ಗ್ರಾಂ MDMA ಪಿಲ್ಸ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳ ಮೌಲ್ಯ ಸುಮಾರು ರೂ. 10.85 ಲಕ್ಷ ಆಗಿದ್ದು, ಡಿಜಿಟಲ್ ತೂಕ ಮಾಪನ ಯಂತ್ರ, ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ. 11.05 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತನನ್ನು…

Read More

ಮಂಗಳೂರು: ಕಾರೊಂದು ರಿಕ್ಷಾಕ್ಕೆ ಡಿಕ್ಕಿ- ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸಾವು

ಮಂಗಳೂರು:ಕಾರೊಂದು ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಹೊಂಡಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಮಂಗಳೂರಿನ ನೀರುಮಾರ್ಗ ಸಮೀಪದ ಮಾಣೂರು ಬಳಿ ನಡೆದಿದೆ.  ಕಿಶೋರ್ ಮೃತಪಟ್ಟ ಚಾಲಕ.  ಅಡ್ಕಾರ್ ಕಟ್ಟೆಯಿಂದ ನೀರುಮಾರ್ಗ ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಮಾಣೂರು ದೇಗುಲದ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಿಕ್ಷಾ ಹೊಂಡಕ್ಕೆ ಬಿದ್ದಿದೆ. ಗಂಭೀರ ಗಾಯಗೊಂಡ ಚಾಲಕ ಕಿಶೋರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ…

Read More

ನೆಲ್ಯಾಡಿ: ಸ್ಕೂಟರ್-ಲಾರಿ ಡಿಕ್ಕಿ- ದಂಪತಿಗೆ ಗಂಭೀರ ಗಾಯ

ನೆಲ್ಯಾಡಿ: ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಆ.29ರಂದು ಮಧ್ಯಾಹ್ನ ನಡೆದಿದೆ. ಹಿರೇಬಂಡಾಡಿ ಗ್ರಾಮದ ವಳಕಡಮ ನಿವಾಸಿ ಬೊಮ್ಮಣ್ಣ ಗೌಡ(46ವ.)ಹಾಗೂ ಅವರ ಪತ್ನಿ ಕುಸುಮಾವತಿ(35ವ.)ಗಾಯಗೊಂಡವರಾಗಿದ್ದಾರೆ. ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ವಳಕಡಮದಿಂದ ರಾಮಕುಂಜ-ಗೋಳಿತ್ತೊಟ್ಟು ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ಹೋಗುತ್ತಿದ್ದವರು ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಕ್ರಾಸ್ ಆಗುತ್ತಿದ್ದಂತೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಗೆ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಆ.29 ರಂದು ಎಸ್.ಐ.ಟಿ ಗೆ ಹಾಜರಾಗಲು ನೋಟಿಸ್ ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದ ವಿಚಾರಣೆ ಮುಗಿಸಿ ಎಸ್.ಐ.ಟಿ ವಿಚಾರಣೆಗೆ 12:25 ಕ್ಕೆ ಹಾಜರಾಗಿದ್ದಾರೆ

Read More

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ದಾಳಿ- ತಹಶೀಲ್ದಾರ್ ಪರಾರಿ, ಕಚೇರಿ ಸಿಬ್ಬಂದಿ ವಶಕ್ಕೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ. ಲೋಕಾಯುಕ್ತ ದಾಳಿಯ ವೇಳೆ ಪುತ್ತೂರು ತಹಶೀಲ್ದಾರ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು…

Read More