ಹಿಂದೂ ಸಮಾಜವನ್ನು ಕೆಣಕಬೇಡಿ: ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ..? ಶರಣ್ ಪಂಪ್ವೆಲ್ ಎಚ್ಚರಿಕೆ
ಮಂಗಳೂರು: ಹಿಂದೂ ಸಮಾಜ ಮನಸ್ಸು ಮಾಡಿದರೆ ನಿಮ್ಮ ಈದ್ ಮಿಲಾದ್ ಮೆರವಣಿಗೆ ಹೋಗಲು ಸಾಧ್ಯವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಗಲಭೆಯನ್ನು ಖಂಡಿಸಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ, ವಿಎಚ್ಪಿ – ಬಜರಂಗದಳದ ಆಶ್ರಯದಲ್ಲಿ ಇಲ್ಲಿನ ಮಲ್ಲಿಕಟ್ಟೆ–ಕದ್ರಿ ವೃತ್ತದ ಬಳಿ ಗುರುವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕಳೆದ ಸಲ ಶಿವಮೊಗ್ಗದಲ್ಲಿ ಈದ್ ಮಿಲಾದ್…

