admin

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ರೈಲ್ವೆ ಹಳಿ ಪಕ್ಕದ ಗುಡ್ಡಗಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ಕಳೆದ ಎರಡು ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ ಮನೆಯಲ್ಲಿ…

Read More

ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು..!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮತ್ತೆ ಎಸ್ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ. ಎಸ್ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು ನೋಡಿದ್ದಾಗಿ ಹೇಳಿದ್ದ. ಆ ವಿಚಾರವನ್ನು…

Read More

ಮಂಗಳೂರು: ತಲಪಾಡಿ ಟೋಲ್ ಗೇಟ್ ಬಳಿ KSRTC ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ- 5 ಸಾವು

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ತಲಪಾಡಿಯ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೆಸಿ ರೋಡ್ ನಿಂದ ತೆರಳುತ್ತಿದ್ದಂತ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ….

Read More

ಬಂಟ್ವಾಳ: ದನ ಕಳ್ಳತನ ಪ್ರಕರಣದ ಆರೋಪಿಯ ಬಂಧನ..!

ಬಂಟ್ವಾಳ: ಇರಾ ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ವರದಿಯಾದ ದನ ಕಳ್ಳತನ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಆಜಾದ್ ನಗರದ ಆರೋಪಿ ಇರ್ಷಾದ್ ಎಂದು ಗುರುತಿಸಲಾಗಿದೆ. ಮಾರ್ಚ್ 23 ರಂದು ಸುಮಾರು 12,000 ರೂ. ಮೌಲ್ಯದ ಹಸು ಕಾಣೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ನಂತರ, ಪೊಲೀಸರು ಮಂಗಳೂರಿನ ಆಜಾದ್ ನಗರದ ಆರೋಪಿ ಇರ್ಷಾದ್ ನನ್ನು ಬಂಧಿಸಿದರು. ಆರೋಪಿಯು ದಕ್ಷಿಣ ಕನ್ನಡ ಮತ್ತು ಇತರ ಹಲವಾರು ಜಿಲ್ಲೆಗಳಲ್ಲಿ…

Read More

ಉಡುಪಿ: ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿತ

ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರು ಹಾಗೂ ಪೊಲೀಸರು ಆಗಮಿಸಿ, ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಸಿದ್ದಾರೆ

Read More

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮೂಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ,…

Read More

ಕಾರ್ಕಳ ಮೂಲದ ಹೋಟೆಲ್ ಮಾಲೀಕ ಪುಣೆಯಲ್ಲಿ ಹತ್ಯೆ

ಕಾರ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ (ಆ.26) ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಹತ್ಯೆ ಮಾಡಿದ ಘಟನೆ ನಡೆದಿದೆ. ಹೋಟೆಲ್ ಸಿಬ್ಬಂದಿಯೊರ್ವ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹೋಟೆಲ್ ಸಿಬ್ಬಂದಿ ಕೆಲಸದ ಸಮಯದಲ್ಲಿ…

Read More

ಕಾರ್ಕಳ ಕೊಲೆ ಪ್ರಕರಣ: ಮಂಗಳೂರಿನ ನವೀನ್ ಪೂಜಾರಿ ಅರೆಸ್ಟ್

ಕಾರ್ಕಳ: ಕುಂಟಲ್ಪಾಡಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಪರೀಕ್ಷಿತ್(44) ಎಂದು ಗುರುತಿಸಲಾಗಿದ್ದು, ಮಹಿಳೆಯೊಬ್ಬರ ಗೆಳೆತನದ ವಿಚಾರವಾಗಿ ಈ ಕೊಲೆ ನಡೆದಿದೆ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.ಅಗಸ್ಟ್ 26 ರ ಮುಂಜಾನೆ ವೇಳೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಈ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ.ಈ ಪ್ರಕರಣದ ಬಗ್ಗೆ ಮಾಹಿತಿ…

Read More

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾ.ಪಂ.ಸದಸ್ಯ ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ.ಮಹಮ್ಮದ್ ಇಕ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾಮ ಪಂಚಾಯತ್‌ ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿ ಎಂದು ಘೋಷಿಸಿದೆ.ಪ್ರವೀಣ್…

Read More

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಸಾಗ್ರಾಮ್ ಪೇಜ್ ದುರುಪಯೋಗ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಸಾಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.ಸಂಬಂಧಿಸಿದ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ಲೈನ್…

Read More